Friday, December 3, 2021

ಮೂಲ ಆಕಾರ ಗ್ರಂಥಗಳನ್ನು ಅಧ್ಯಯನ ನಡೆಸಿ : ಡಾ. ಬಿ.ಜಿ ಧನಂಜಯ

ಭದ್ರಾವತಿ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗ್ರಂಥಾಲಯ ಮತ್ತು ಮಾಹಿತಿ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಮತ್ತು ಅಧ್ಯಾಪಕರಿಗೆ ಹಮ್ಮಿಕೊಳ್ಳಲಾಗಿದ್ದ ಪುಸ್ತಕ ಪ್ರದರ್ಶನ ಮತ್ತು ಮಾಹಿತಿ ನೀಡುವ ಕಾರ್ಯಕ್ರಮ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಉದ್ಘಾಟಿಸಿದರು.
    ಭದ್ರಾವತಿ, ಡಿ. ೩: ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಕ್ರಮಬದ್ಧವಾಗಿ ಮತ್ತು ಯೋಜಿತವಾಗಿ ಮೂಲ ಪಠ್ಯ ಪುಸ್ತಕಗಳನ್ನು ಅಧ್ಯಯನ ನಡೆಸಬೇಕು. ಎಲ್ಲವನ್ನು ಅಂತರ್ಜಾಲದ ಮೂಲಕ ಪಡೆಯುವುದನ್ನು ನಿಲ್ಲಿಸಿ, ನೋಟ್ಸ್ ಮತ್ತು ಗೈಡ್‌ಗಳ ಬದಲಾಗಿ ಮೂಲ ಆಕಾರ ಗ್ರಂಥಗಳನ್ನು ಅಧ್ಯಯನ ನಡೆಸಿ ಎಂದು ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಸಲಹೆ ನೀಡಿದರು.
    ಅವರು ಶುಕ್ರವಾರ ಕಾಲೇಜಿನಲ್ಲಿ ಗ್ರಂಥಾಲಯ ಮತ್ತು ಮಾಹಿತಿ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಮತ್ತು ಅಧ್ಯಾಪಕರಿಗೆ ಪುಸ್ತಕ ಪ್ರದರ್ಶನ ಮತ್ತು ಮಾಹಿತಿ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಗ್ರಂಥಾಲಯಗಳು ಜ್ಞಾನದ ದೇಗುಲಗಳಿದಂತೆ, ಪುಸ್ತಕಗಳ ಅಧ್ಯಯನದಿಂದ ಜ್ಞಾನ ಸಂಪಾದನೆ ಮತ್ತು ವ್ಯಕ್ತಿತ್ವ ನಿರ್ಮಾಣವಾಗುತ್ತದೆ. ಜಗತ್ತಿನ ಶ್ರೇಷ್ಠ ಮತ್ತು ಮಹಾನ್ ವ್ಯಕ್ತಿಗಳ ವ್ಯಕ್ತಿತ್ವ ರೂಪುಗೊಂಡದ್ದು ಗ್ರಂಥಾಲಯಗಳಿಂದ ಎನ್ನುವುದು ಸರ್ವಕಾಲಿಕ ಸತ್ಯ ಎಂದರು.
    ಗ್ರಂಥಗಳ ಅಧ್ಯಯನ ಹೊಸ ಪ್ರಪಂಚಕ್ಕೆ ಕೊಂಡೊಯ್ಯುತ್ತದೆ. ಡಾ. ಬಿ.ಆರ್ ಅಂಬೇಡ್ಕರ್‌ರವರು ನಿರಂತರವಾಗಿ ಅಧ್ಯಯನ ನಡೆಸುವ ಮೂಲಕ ಜಗತ್ತು ಮೆಚ್ಚುವ ವಿದ್ವಾಂಸರಾದರು. ಈ ದಾರಿಯಲ್ಲಿ ನಾವುಗಳು ಸಹ ಸಾಗಬೇಕಾಗಿದೆ ಎಂದರು.
    ಗ್ರಂಥಾಲಯ ವಿಭಾಗದ ಮುಖ್ಯಸ್ಥ ಡಾ. ಜಿ.ಆರ್ ರಾಜಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿ, ಪುಸ್ತಕ ಪ್ರದರ್ಶನದ ಮುಖ್ಯ ಉದ್ದೇಶಗಳನ್ನು ವಿವರಿಸಿದರು. ಡಾ. ಬಸವರಾಜ್, ಮಲ್ಲಪ್ಪ, ಡಾ. ತಿಪ್ಪೇಶ್, ಅಜಯ್, ಸತೀಶ್, ಚಂದ್ರಪ್ಪ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ರೇವಣ ಸಿದ್ದಪ್ಪ ಸ್ವಾಗತಿಸಿದರು. ಉಮೇಶ್ ವಂದಿಸಿದರು.

No comments:

Post a Comment