ಭದ್ರಾವತಿ ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆ ಉಮಾದೇವಿ ತಿಪ್ಪೇಶ್
ಭದ್ರಾವತಿ, ಡಿ. ೧೭: ತಾಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಉಮಾದೇವಿ ತಿಪ್ಪೇಶ್ ಶುಕ್ರವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.
ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಈ ಹಿಂದೆ ಆಯ್ಕೆಯಾಗಿದ್ದ ಮಲಕ್ ಬಿ ವೀರಪ್ಪನ್ ಒಪ್ಪಂದದಂತೆ ೧೦ ತಿಂಗಳು ಆಡಳಿತ ನಡೆಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ನಡೆದ ಚುನಾವಣೆಯಲ್ಲಿ ಉಮಾದೇವಿ ತಿಪ್ಪೇಶ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ತಾಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ರಮೇಶ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅಶೋಕ್ ಮತ್ತು ಕಾರ್ಯದರ್ಶಿ ಸತೀಶ್ ಗೌಡ ಉಪಸ್ಥಿತರಿದ್ದರು. ಪಂಚಾಯಿತಿ ಉಪಾಧ್ಯಕ್ಷ ಕುಬೇರನಾಯ್ಕ್, ಸದಸ್ಯರಾದ ಜಯಣ್ಣ, ರುದ್ರೇಶ್, ಸ್ವಾಮೀನಾಥ್, ವಿಶ್ವನಾಥ್, ನಾಗರಾಜ್, ಭಾಗ್ಯ, ಸಿದ್ದಮ್ಮ, ನೀಲಾಬಾಯಿ, ಪಾರ್ವತಿ ಬಾಯಿ ಮತ್ತು ಗೌರಮ್ಮ ಚುನಾವಣೆಯಲ್ಲಿ ಭಾಗವಹಿಸಿದ್ದರು.
No comments:
Post a Comment