Tuesday, December 7, 2021

ಬಲಿಜ ಸಂಘದ ನೂತನ ಅಧ್ಯಕ್ಷರಾಗಿ ಜೆ.ಎಸ್ ಸಂಜೀವ ಮೂರ್ತಿ

ಭದ್ರಾವತಿ ಹಳೇನಗರದ ಶ್ರೀ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ತಾಲೂಕು ಬಲಿಜ ಸಂಘದ ನೂತನ ಅಧ್ಯಕ್ಷರಾಗಿ ಜೆ.ಎಸ್ ಸಂಜೀವ ಮೂರ್ತಿ ಆಯ್ಕೆಯಾಗಿದ್ದಾರೆ.
    ಭದ್ರಾವತಿ, ಡಿ. ೭: ಹಳೇನಗರದ ಶ್ರೀ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ತಾಲೂಕು ಬಲಿಜ ಸಂಘದ ನೂತನ ಅಧ್ಯಕ್ಷರಾಗಿ ಜೆ.ಎಸ್ ಸಂಜೀವ ಮೂರ್ತಿ ಆಯ್ಕೆಯಾಗಿದ್ದಾರೆ.
    ಸರ್ವ ಸದಸ್ಯರ ಸಭೆಯಲ್ಲಿ ನೂತನ ಪದಾಧಿಕಾರಿಗಳು ಅವಿರೋಧ ಆಯ್ಕೆಯಾಗಿದ್ದು, ಗೌರವಾಧ್ಯಕ್ಷರಾಗಿ ಎಸ್.ಎನ್ ಸುಬ್ರಮಣ್ಯ, ಉಪಾಧ್ಯಕ್ಷರಾಗಿ ಎಸ್.ಬಿ ಜಂಗಮಪ್ಪ, ಶಕುಂತಲಾ, ಪ್ರಧಾನ ಕಾರ್ಯದರ್ಶಿಯಾಗಿ ಎಂ. ರಮೇಶ್, ಖಜಾಂಚಿಯಾಗಿ ನರೇಂದ್ರ ಬಾಬು ಮತ್ತು ಸಹ ಕಾರ್ಯದರ್ಶಿಯಾಗಿ ಟಿ. ರಮೇಶ್ ಹಾಗು ನಿರ್ದೇಶಕರಾಗಿ ಡಿ.ಆರ್ ಶಿವಕುಮಾರ್, ವೈ.ಎಸ್ ರಾಮಮೂರ್ತಿ, ಎಚ್. ನಾರಾಯಣ, ಯು. ಪಂಪಣ್ಣ, ರಂಗನಾಥ್, ಕುಮಾರಸ್ವಾಮಿ, ಪದ್ಮಮ್ಮ, ದಶರಥ ಕುಮಾರ್, ವೆಂಕಟೇಶ್, ಪ್ರಹ್ಲಾದ್, ರಾಜೇಶ್, ಉದಯ್‌ಕುಮಾರ್ ಮತ್ತು ಪಿ. ಸತೀಶ್ ಆಯ್ಕೆಯಾಗಿದ್ದಾರೆ.

No comments:

Post a Comment