ರಾಜ್ಯಮಟ್ಟದ ಓಂ ಕಪ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ
ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ೩ ದಿನಗಳ ಕಾಲ ನಗರದ ಓಂ ಕ್ರಿಕೇಟರ್ಸ್ ವತಿಯಿಂದ ಯುವ ಮುಖಂಡ ಕೆ.ಪಿ ಗಿರೀಶ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ರಾಜ್ಯಮಟ್ಟದ ಓಂ ಕಪ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಶುಕ್ರವಾಗಿ ಶಾಸಕ ಬಿ.ಕೆ ಸಂಗಮೇಶ್ವರ್ ಟಾಸ್ ತೂರಿ ಚಾಲನೆ ನೀಡಿದರು.
ಭದ್ರಾವತಿ, ಡಿ. ೧೭: ಪ್ರತಿಯೊಬ್ಬರಲ್ಲೂ ಉತ್ಸಾಹ, ಆರೋಗ್ಯ ತಂದುಕೊಡುವ ಕ್ರೀಡೆ ಯಾವುದೇ ಧರ್ಮ, ಜಾತಿಗೆ ಸೀಮಿತವಾಗಿಲ್ಲ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
ಅವರು ಶುಕ್ರವಾರ ಹಳೇನಗರದ ಕನಕಮಂಟಪ ಮೈದಾನದಲ್ಲಿ ೩ ದಿನಗಳ ಕಾಲ ನಗರದ ಓಂ ಕ್ರಿಕೇಟರ್ಸ್ ವತಿಯಿಂದ ಯುವ ಮುಖಂಡ ಕೆ.ಪಿ ಗಿರೀಶ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ರಾಜ್ಯಮಟ್ಟದ ಓಂ ಕಪ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.
ಪ್ರಸ್ತುತ ಕ್ರೀಡೆಗಳು ಹೆಚ್ಚು ಹೆಚ್ಚಾಗಿ ನಡೆಯುವಂತಾಗಬೇಕು. ಕ್ರೀಡಾಪಟುಗಳು ಇರುವ ಕಡೆ ಉತ್ತಮ ಪರಿಸರ ರೂಪುಗೊಳ್ಳುತ್ತದೆ. ಜೊತೆಗೆ ಯುವ ಸಮೂಹ ದುಶ್ಚಟಗಳಿಂದ ದೂರು ಉಳಿಯುತ್ತಾರೆ ಎಂದರು.
ಪ್ರಸ್ತುತ ಕ್ರೀಡಾ ಮನೋಭಾವ ಅಗತ್ಯವಿದ್ದು, ಕ್ರೀಡೆಯಲ್ಲಿ ಸೋಲು ಗೆಲುವು ಸಹಜ. ಎರಡನ್ನು ಸಮಾನವಾಗಿ ಸ್ವೀಕರಿಸಿ ಗೆದ್ದವರು, ಸೋತವರು ಸಂಭ್ರಮಿಸಬೇಕು. ಕ್ರೀಡೆಯಲ್ಲಿ ಯಾವುದೇ ಧರ್ಮ, ಜಾತಿ ಇಲ್ಲ. ಕ್ರೀಡೆ ಎಲ್ಲರನ್ನು ಒಗ್ಗೂಡಿಸುವ ಶಕ್ತಿ ಹೊಂದಿದೆ ಎಂದರು.
ನಗರಸಭಾ ಸದಸ್ಯ, ಸಮಾಜ ಸೇವಕ ಮಣಿ ಎಎನ್ಎಸ್, ತಾಲೂಕು ಬಗರ್ಹುಕುಂ ಸಮಿತಿ ಅಧ್ಯಕ್ಷ ನಾಗೇಶ್, ಯುವ ಮುಖಂಡರಾದ ಗಣೇಶ್, ಮಹೇಶ್, ಓಂ ಕ್ರಿಕೇಟರ್ಸ್ನ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಕೇಸರಿಪಡೆಯ ಕೆ.ಪಿ ಗಿರೀಶ್ ಅಧ್ಯಕ್ಷತೆ ವಹಿಸಿದ್ದರು.
ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ೩ ದಿನಗಳ ಕಾಲ ನಗರದ ಓಂ ಕ್ರಿಕೇಟರ್ಸ್ ವತಿಯಿಂದ ಯುವ ಮುಖಂಡ ಕೆ.ಪಿ ಗಿರೀಶ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ರಾಜ್ಯಮಟ್ಟದ ಓಂ ಕಪ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಆಟ ಆಡುವ ಮೂಲಕ ಕ್ರೀಡಾಪಟುಗಳಲ್ಲಿ ಹುಮ್ಮಸ್ಸು ಮೂಡಿಸಿದರು.
No comments:
Post a Comment