Monday, December 20, 2021

ಡಿ.೨೨ರಂದು ಬಿ.ಆರ್ ಪ್ರಾಜೆಕ್ಟ್‌ನಲ್ಲಿ ಉಚಿತ ನೇತ್ರ ತಪಾಸಣಾ, ಶಸ್ತ್ರಚಿಕಿತ್ಸೆ ಶಿಬಿರ

    ಭದ್ರಾವತಿ, ಡಿ. ೨೦: ಲಯನ್ಸ್ ಅಂತರರಾಷ್ಟ್ರೀಯ ಸಂಸ್ಥೆ, ಬಿ.ಆರ್ ಪ್ರಾಜೆಕ್ಟ್, ಶಿವಮೊಗ್ಗ ಶಂಕರ ಕಣ್ಣಿ ಆಸ್ಪತ್ರೆ ವತಿಯಿಂದ  ಚಲನಚಿತ್ರ ನಟ, ಸಮಾಜ ಸೇವಕ ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ಉಚಿತ ನೇತ್ರ ತಪಾಸಣಾ, ನೇತ್ರ ಶಸ್ತ್ರ ಚಿಕಿತ್ಸೆ, ಮಸೂರ ಅಳವಡಿಕೆ ಮತ್ತು ನೇತ್ರದಾನ ಶಿಬಿರ ಡಿ.೨೨ರಂದು ಹಮ್ಮಿಕೊಳ್ಳಲಾಗಿದೆ.
    ಸಿಂಗನಮನೆ ಮತ್ತು ತಾವರಘಟ್ಟ ಗ್ರಾಮ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ ಮತ್ತು ಸರ್ಕಾರಿ ಸಂಯುಕ್ತ ಆಸ್ಪತ್ರೆ, ಸಿಂಗನಮನೆ ಇವುಗಳ ಸಹಯೋಗದೊಂದಿಗೆ ಶಿಬಿರ ನಡೆಯುತ್ತಿದ್ದು, ಬೆಳಿಗ್ಗೆ ೯ ಗಂಟೆಗೆ ಬಿ.ಆರ್ ಪ್ರಾಜೆಕ್ಟ್ ಸರ್ಕಾರಿ ಸಂಯುಕ್ತ ಆಸ್ಪತ್ರೆಯಲ್ಲಿ ಆರಂಭಗೊಳ್ಳಲಿದೆ. ಕೋವಿಡ್ ನಿಯಮ ಪಾಲನೆಗಳೊಂದಿಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರದ ಸದುಪಯೋಗಪಡೆದುಕೊಳ್ಳುವ ಜೊತೆಗೆ ಯಶಸ್ವಿಗೊಳಿಸುವಂತೆ ಸ್ವರೂಪ್ ಜೈನ್ ಕೋರಿದ್ದಾರೆ.

No comments:

Post a Comment