Saturday, February 6, 2021

ದೆಹಲಿ ರೈತರ ಹೋರಾಟ ಬೆಂಬಲಿಸಿ ಪ್ರಗತಿ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಹೆದ್ದಾರಿ ತಡೆ

ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೆದ್ದಾರಿ ತಡೆ ಚಳುವಳಿಯನ್ನು ಬೆಂಬಲಿಸಿ ಭದ್ರಾವತಿಯಲ್ಲಿ ಶನಿವಾರ ಪ್ರಗತಿ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಹೆದ್ದಾರಿ ತಡೆ ನಡೆಸಿದವು.
   ಭದ್ರಾವತಿ, ಫೆ. ೬: ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೆದ್ದಾರಿ ತಡೆ ಚಳುವಳಿಯನ್ನು ಬೆಂಬಲಿಸಿ ನಗರದಲ್ಲಿ ಶನಿವಾರ ಪ್ರಗತಿ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಹೆದ್ದಾರಿ ತಡೆ ನಡೆಸಿದವು.
ನಗರದ ಬೈಪಾಸ್ ರಸ್ತೆ ಬಾರಂದೂರು ಬಳಿ ರಸ್ತೆ ತಡೆ ನಡೆಸಿ ಮಾತನಾಡಿದ ಮುಖಂಡರು, ಕೇಂದ್ರ ಸರ್ಕಾರ ತಕ್ಷಣ ಕೃಷಿ ಮಸೂದೆಗಳನ್ನು ಹಿಂಪಡೆಯಬೇಕು. ರೈತರ ಹಿತ ಕಾಪಾಡುವ ಮೂಲಕ ಬೇಡಿಕೆಗಳನ್ನು ಈಡೇರಿಸಿಕೊಡಬೇಕೆಂದು ಆಗ್ರಹಿಸಿದರು.
     ಪ್ರಮುಖರಾದ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಡಿ.ಸಿ ಮಾಯಣ್ಣ, ಸುರೇಶ್, ಜಿ. ರಾಜು, ಎಸ್.ಕೆ ಸುಧೀಂದ್ರ, ಜೆಬಿಟಿ ಬಾಬು, ಮುಸ್ವೀರ್ ಬಾಷಾ, ರೈತ ಮುಖಂಡರಾದ ರಾಮಚಂದ್ರಪ್ಪ, ಬೆನಕಪ್ಪ, ಪಂಚಾಕ್ಷರಪ್ಪ, ಕನ್ನಡಪರ ಸಂಘಟನೆಗಳ ಪ್ರಮುಖರಾದ ಜ್ಯೋತಿ ಸೋಮಶೇಖರ್, ಶಾರದ, ಪರಮೇಶ್, ಮುರುಳಿ, ರೂಪನಾರಾಯಣ, ಆಮ್ ಆದ್ಮಿ ಪಾರ್ಟಿ ಪ್ರಮುಖರಾದ ಪರಮೇಶ್ವರಚಾರ್, ಎಚ್ ರವಿಕುಮಾರ್ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು, ರೈತರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.