![](https://blogger.googleusercontent.com/img/b/R29vZ2xl/AVvXsEhI-gF3F0UvuADU_0dBz98TOrfIt7REiT9jFN8rDCGzHoLe6wX7I8Q4m6Cnf3EzXytOW7DkMu0xTC249Dp9KX7MTarAQjlES3bEeANDznn4sJTMr5SF8o_L0xODhiX3XsEq1tDclsmqKgAk/w640-h304-rw/D11-BDVT2-726288.jpg)
ನ್ಯೂಟೌನ್ ಶಿವ ಸಾಯಿ ಕೃಪಾ ಧಾಮ ಟ್ರಸ್ಟ್, ಪ್ರಶಾಂತಿ ಸೇವಾ ಟ್ರಸ್ಟ್ ವತಿಯಿಂದ ಮಹಾಶಿವರಾತ್ರಿ ಅಂಗವಾಗಿ ಶಿವ ಸಾಯಿ ಕೃಪ ಧಾಮದಲ್ಲಿ ಗುರುವಾರ ಸಂಜೆ ಮೊದಲ ಯಾಮದ ಪೂಜೆ ನೆರವೇರಿತು.
ಭದ್ರಾವತಿ, ಮಾ. ೧೧: ಕೊರೋನಾ ಸಂಕಷ್ಟದ ನಡುವೆಯೂ ನಗರದ ವಿವಿಧೆಡೆ ಈಶ್ವರ ದೇವಾಲಯಗಳಲ್ಲಿ ಗುರುವಾರ ಮಹಾಶಿವರಾತ್ರಿ ಆಚರಣೆ ಅದ್ದೂರಿಯಾಗಿ ಜರುಗಿತು.
ನ್ಯೂಟೌನ್ ಶಿವ ಸಾಯಿ ಕೃಪಾ ಧಾಮ :
ನ್ಯೂಟೌನ್ ಶಿವ ಸಾಯಿ ಕೃಪಾ ಧಾಮ ಟ್ರಸ್ಟ್, ಪ್ರಶಾಂತಿ ಸೇವಾ ಟ್ರಸ್ಟ್ ವತಿಯಿಂದ ಮಹಾಶಿವರಾತ್ರಿ ಅಂಗವಾಗಿ ಶಿವ ಸಾಯಿ ಕೃಪ ಧಾಮದಲ್ಲಿ ಗುರುವಾರ ಸಂಜೆ ಮೊದಲ ಯಾಮದ ಪೂಜೆ ನೆರವೇರಿತು.
ಋತ್ವಿಜ ಎಸ್ ಎನ್ ಕಾರ್ತಿಕ್ ನೇತೃತ್ವದಲ್ಲಿ ಫಲಗಳಿಂದ ರುದ್ರಾಭಿಷೇಕ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಬೆಳಗ್ಗೆ ೪ ಗಂಟೆ ವರೆಗೆ ಒಟ್ಟು ೪ ಯಾಮದ ಪೂಜೆ ಹಮ್ಮಿಕೊಳ್ಳಲಾಗಿದ್ದು, ಬೆಳಿಗ್ಗೆ ೬ ಗಂಟೆಗೆ ಮಹಾಮಂಗಳಾರತಿಯೊಂದಿಗೆ ಮುಕ್ತಾಯಗೊಳ್ಳಲಿವೆ. ಶಾಲಾ ಮಕ್ಕಳು, ಭಕ್ತರು ಕಲಾ ಸಂಘ, ವಿವಿಧ ಭಜನಾ ಮಂಡಳಿಗಳಿಂದ ಶಿವ ಸಹಸ್ರ ನಾಮಾರ್ಚನೆ ಜರುಗಿದವು.
ಭದ್ರಾವತಿ ಅಪ್ಪರ್ ಹುತ್ತಾದಲ್ಲಿರುವ ಶ್ರೀ ನಂದಿ ಈಶ್ವರ-ಸಂಕಷ್ಟಹರ ಗಣಪತಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ಮಹಾಶಿವರಾತ್ರಿ ಆಚರಣೆ ಅದ್ದೂರಿಯಾಗಿ ಜರುಗಿತು ಶ್ರೀ ನಂದಿ ಈಶ್ವರ-ಸಂಕಷ್ಟಹರ ಗಣಪತಿ ದೇವಸ್ಥಾನ:
ಅಪ್ಪರ್ ಹುತ್ತಾದಲ್ಲಿರುವ ಶ್ರೀ ನಂದಿ ಈಶ್ವರ-ಸಂಕಷ್ಟಹರ ಗಣಪತಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ಮಹಾಶಿವರಾತ್ರಿ ಆಚರಣೆ ಅದ್ದೂರಿಯಾಗಿ ಜರುಗಿತು. ಜಿಲ್ಲೆಯಲ್ಲಿಯೇ ೩೨ ಅಡಿ ಅತಿ ಎತ್ತರ ಧ್ಯಾನಾಸಕ್ತ ಶಿವನ ಪ್ರತಿಮೆ ದರ್ಶನದೊಂದಿಗೆ ಭಕ್ತಾಧಿಗಳು ಸ್ವಾಮಿಯ ಕೃಪೆಗೆ ಪಾತ್ರರಾದರು. ಮಹಿಳಾ ಭಜನಾ ಮಂಡಳಿಯಿಂದ ಭಜನೆ ನೆರವೇರಿತು.
ದೇವಸ್ಥಾನದಲ್ಲಿರುವ ಶ್ರೀ ನಂದಿ ಈಶ್ವರ ಹಾಗು ಸಂಕಷ್ಟಹರ ಗಣಪತಿ ಮೂಲ ವಿಗ್ರಹಗಳಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ಭಕ್ತಾಧಿಗಳಿಗೆ ತೀರ್ಥಪ್ರಸಾದ ವಿನಿಯೋಗ ನೆರವೇರಿತು.
ಭದ್ರಾವತಿ ನಗರದ ಹೃದಯ ಭಾಗದಲ್ಲಿ ಭದ್ರಾ ನದಿಯಲ್ಲಿರುವ ಶ್ರೀ ಸಂಗಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ಮಹಾಶಿವರಾತ್ರಿ ಅದ್ದೂರಿಯಾಗಿ ಜರುಗಿತು
ಸಂಗಮೇಶ್ವರ ದೇವಸ್ಥಾನ:
ನಗರದ ಹೃದಯ ಭಾಗದಲ್ಲಿ ಭದ್ರಾ ನದಿಯಲ್ಲಿರುವ ಶ್ರೀ ಸಂಗಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ಮಹಾಶಿವರಾತ್ರಿ ಅದ್ದೂರಿಯಾಗಿ ಜರುಗಿತು. ಭಕ್ತಾಧಿಗಳು ಬೆಳಿಗ್ಗೆಯಿಂದ ರಾತ್ರಿವರೆಗೂ ಸಾಲುಗಟ್ಟಿನಿಂತು ದೇವರ ದರ್ಶನ ಪಡೆದು ಕೃಪೆಗೆ ಪಾತ್ರರಾದರು. ವಿಶೇಷ ಅಲಂಕಾರ, ಹೋಮ-ಹವನ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
ವಿವಿಧ ದೇವಾಲಯಗಳಲ್ಲಿ ಶಿವರಾತ್ರಿ ಆಚರಣೆ:
ಉಳಿದಂತೆ ಹಳೇನಗರ ಭಾಗದ ಕೋಟೆ ಬಸವಣ್ಣ, ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನ, ಶ್ರೀ ಶೃಂಗೇರಿ ಶಂಕರಮಠ, ಹೊಸಮನೆ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ, ಹಳೇಸೀಗೆಬಾಗಿ ಶ್ರೀ ಈಶ್ವರ ದೇವಸ್ಥಾನ, ಬಿ.ಎಚ್ ರಸ್ತೆ ಶ್ರೀ ಭದ್ರೇಶ್ವರ ದೇವಸ್ಥಾನ, ಜಿಂಕ್ಲೈನ್ ಶ್ರೀ ಮಲೆಮಹಾದೇಶ್ವರ ದೇವಸ್ಥಾನ, ಜನ್ನಾಪುರ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ, ಕಾಗದನಗರದ ಈಶ್ವರ ದೇವಸ್ಥಾನ, ಉಜ್ಜನಿಪುರ ಚಾನಲ್ರಸ್ತೆಯಲ್ಲಿರುವ ಶ್ರೀ ಕಾಳಿಂಗೇಶ್ವರ ದೇವಸ್ಥಾನ ಸೇರಿದಂತೆ ಇನ್ನಿತರ ದೇವಾಲಯಗಳಲ್ಲಿ ಮಹಾ ಶಿವರಾತ್ರಿ ಆಚರಣೆ ನಡೆಯಿತು.