Tuesday, March 16, 2021

ರಾಜ್ಯಾದ್ಯಂತ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಬಿ.ವೈ ವಿಜಯೇಂದ್ರ

ಎಂಎಸ್‌ಎಂಇ ಪ್ರೊಮೋಷನಲ್ ಕೌನ್ಸಿಲ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಸಿ ರಮೇಶ್ ಅಭಿನಂದನೆ

ಕಬಡ್ಡಿ ಪಂದ್ಯಾವಳಿ ವೇಳೆ ಹಲ್ಲೆಗೊಳ್ಳಲಾಗಿದ್ದ ಬಿಜೆಪಿ ಪಕ್ಷದ ಸ್ಥಳೀಯ ಮುಖಂಡರು ಹಾಗು ಕಾರ್ಯಕರ್ತರನ್ನು ಭೇಟಿ ಮಾಡಿ ಧೈರ್ಯ ತುಂಬಲು ಸೋಮವಾರ ಭದ್ರಾವತಿ ನಗರಕ್ಕೆ ಆಗಮಿಸಿದ್ದ ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರರನ್ನು ಎಂಎಸ್‌ಎಂಇ ಪ್ರೊಮೋಷನಲ್ ಕೌನ್ಸಿಲ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಸಿ ರಮೇಶ್ ಅಭಿನಂದಿಸಿದರು.
   ಭದ್ರಾವತಿ, ಮಾ. ೧೬: ನಗರದಲ್ಲಿ ಕಬಡ್ಡಿ ಪಂದ್ಯಾವಳಿ ವೇಳೆ ಹಲ್ಲೆಗೊಳ್ಳಲಾಗಿದ್ದ ಬಿಜೆಪಿ ಪಕ್ಷದ ಸ್ಥಳೀಯ ಮುಖಂಡರು ಹಾಗು ಕಾರ್ಯಕರ್ತರನ್ನು ಭೇಟಿ ಮಾಡಿ ಧೈರ್ಯ ತುಂಬಲು ಸೋಮವಾರ ನಗರಕ್ಕೆ ಆಗಮಿಸಿದ್ದ ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರರನ್ನು ಎಂಎಸ್‌ಎಂಇ ಪ್ರೊಮೋಷನಲ್ ಕೌನ್ಸಿಲ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಸಿ ರಮೇಶ್ ಅಭಿನಂದಿಸಿದರು.
ರಾಜ್ಯಾದ್ಯಂತ ಸಂಚರಿಸಿ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಹೆಚ್ಚಿನ ಶ್ರಮವಹಿಸುತ್ತಿರುವ ವಿಜಯೇಂದ್ರರನ್ನು ಉದ್ಯಮಿ, ನಗರದ ನಿವಾಸಿ ಎಚ್.ಸಿ ರಮೇಶ್ ಅಭಿನಂದಿಸುವ ಜೊತೆಗೆ ಕ್ಷೇತ್ರದಲ್ಲಿ ಪಕ್ಷದ ಮುಖಂಡರು ಹಾಗು ಕಾರ್ಯಕರ್ತರ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ ಶ್ರೀನಾಥ್, ಜಿ. ಧರ್ಮಪ್ರಸಾದ್, ಮಂಡಲ ಅಧ್ಯಕ್ಷ ಎಂ ಪ್ರಭಾಕರ್, ಪ್ರಮುಖರಾದ ಮಂಗೋಟೆ ರುದ್ರೇಶ್, ಕೂಡ್ಲಿಗೆರೆ ಹಾಲೇಶ್, ವಿ. ಕದಿರೇಶ್, ಜಿ. ಆನಂದಕುಮಾರ್, ಕೆ. ಮಂಜುನಾಥ್, ಚನ್ನೇಶ್, ರಾಮನಾಥ್ ಬರ್ಗೆ, ಧನುಷ್ ಬೋಸ್ಲೆ, ನಾರಾಯಣಪ್ಪ ದೊಡ್ಮನೆ, ಎಂ.ಎಸ್ ಸುರೇಶಪ್ಪ, ಮಹಿಳಾ ಮೋರ್ಚಾ ಸೇರಿದಂತೆ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಸೇರಿದಂತೆ ಇನ್ನಿತರರು ಉಪಸಿತರಿದ್ದರು.


ಪುರುಷರೊಂದಿಗೆ ಸಮಾನತೆ ಕಾಯ್ದುಕೊಂಡಾಗ ಮಾತ್ರ ಬದುಕು ಸಾರ್ಥಕ : ಡಾ. ಅನುರಾಧ ಪಟೇಲ್

ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಭದ್ರಾವತಿ ಅಪ್ಪರ್‌ಹುತ್ತಾದಲ್ಲಿರುವ ಕೆಂಪೇಗೌಡ ಸಮುದಾಯ ಭವನದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಶ್ರೀಕ್ಷೇತ್ರ ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಉದ್ಘಾಟಿಸಿದರು.
   ಭದ್ರಾವತಿ, ಮಾ. ೧೬: ಮಹಿಳೆಯರು ತಮ್ಮಲ್ಲಿ ಅಡಗಿರುವ ಅದ್ಭುತವಾದ ಶಕ್ತಿಗಳಿಂದ ಜಾಗೃತಗೊಂಡು ಪುರುಷರೊಂದಿಗೆ ಸಮಾನತೆ ಕಾಯ್ದುಕೊಂಡಾಗ ಮಾತ್ರ ಬದುಕು ಸಾರ್ಥಕಗೊಳ್ಳುತ್ತದೆ ಎಂದು ನಗರದ ಚುಂಚಾದ್ರಿ ಮಹಿಳಾ ವೇದಿಕೆ ಗೌರವಾಧ್ಯಕ್ಷೆ ಡಾ. ಅನುರಾಧ ಪಟೇಲ್ ಹೇಳಿದರು.
   ಅವರು ಮಂಗಳವಾರ ವೇದಿಕೆ ವತಿಯಿಂದ ಅಪ್ಪರ್‌ಹುತ್ತಾದಲ್ಲಿರುವ ಕೆಂಪೇಗೌಡ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.
    ಮಹಿಳೆ ಶಕ್ತಿ ಸ್ವರೂಣಿಯಾಗಿದ್ದು, ಸಂಸ್ಕೃತಿ, ಸಂಸ್ಕಾರಗಳೊಂದಿಗೆ ಕ್ರಿಯಾಶೀಲತೆ, ಸಮಾಜದೊಂದಿಗೆ ಸಾಮಾಜಿಕ ಬದ್ದತೆ, ಜವಾಬ್ದಾರಿ ಹಾಗು ಕುಟುಂಬ ನಿರ್ವಹಣೆಯಲ್ಲಿ ಅದ್ಬುತವಾದ ಶಕ್ತಿ ಕಾಯ್ದುಕೊಂಡಿದ್ದಾಳೆ. ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುನ್ನಡೆಯಲ್ಲಿದ್ದರೂ ಸಹ ಇವುಗಳಿಂದ ಜಾಗೃತಗೊಳ್ಳಬೇಕು. ಮಹಿಳೆಯರ ಪ್ರತಿಯೊಂದು ಶ್ರಮದ ಹಿಂದೆ ಪುರುಷರು ಸಹ ಕಾರಣಕರ್ತರು ಎಂಬುದನ್ನು ಮರೆಯಬಾರದು ಎಂದರು.
   ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್ ಕುಮಾರ್, ಜಿ.ಪಂ. ಮಾಜಿ ಸದಸ್ಯ ಎಸ್. ಕುಮಾರ್ ಮಾತನಾಡಿದರು. ಶ್ರೀಕ್ಷೇತ್ರ ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
     ನಗರಸಭಾ ಸದಸ್ಯ ಎಂ.ಎ ಅಜಿತ್, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಟಿ ರವಿ, ಉತ್ತರ ಕನ್ನಡ ಅಂಕೋಲ ಜಾನಪದ ಕೋಗಿಲೆ ಪದ್ಮಶ್ರೀ ಸುಕ್ರಿ ಬೊಮ್ಮನಗೌಡ ಹಾಗು ತುಳಸಿ ಗೌಡ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಅಧ್ಯಕ್ಷತೆ ವಹಿಸಿದ್ದರು.
   ಕ್ರೀಡೆಯಲ್ಲಿ ವಿಜೇತರಾದವರಿಗೆ ಬಹುಮಾನ ಹಾಗು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ನೆರವೇರಿತು. ವೇದಿಕೆ ಕಾರ್ಯಕ್ರಮದ ನಂತರ ಬೆಂಗಳೂರಿನ ಗಾನ ಸೌರಭ ಯಕ್ಷಗಾನ ಶಾಲಾ ತಂಡದಿಂದ ಡಾ. ಶಿವಕುಮಾರ್ ಬೇಗಾರ್ ನಿರ್ದೇಶನದ ಮೋಹಿನಿ ಭಸ್ಮಾಸುರ ಪ್ರಸಂಗ ಯಕ್ಷಗಾನ ಪ್ರದರ್ಶನ ನಡೆಯಿತು.