Wednesday, March 17, 2021

ಎನ್. ಅಶೋಕ್‌ಕುಮಾರ್‌ಗೆ ಬೆಳ್ಳಿ ಪದಕ

ಬೆಂಗಳೂರಿನಲ್ಲಿ ೨ ದಿನಗಳ ಕಾಲ ಆಯೋಜಿಸಲಾಗಿದ್ದ ೨ನೇ ಕರ್ನಾಟಕ ಸ್ಟೇಟ್ ಮಾಸ್ಟರ್‍ಸ್ ಗೇಮ್ಸ್ ಪಂದ್ಯಾವಳಿಯಲ್ಲಿ ಭದ್ರಾವತಿ ಸಿದ್ದರೂಢನಗರದ ನಿವಾಸಿ, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ತರೀಕೆರೆ ಶಾಖೆ ವ್ಯವಸ್ಥಾಪಕ ಎನ್. ಅಶೋಕ್‌ಕುಮಾರ್ ದ್ವಿತೀಯ ಬಹುಮಾನದೊಂದಿಗೆ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ.
   ಭದ್ರಾವತಿ, ಮಾ. ೧೭: ಮಾಸ್ಟರ್ ಗೇಮ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ವತಿಯಿಂದ ಬೆಂಗಳೂರಿನಲ್ಲಿ ೨ ದಿನಗಳ ಕಾಲ ಆಯೋಜಿಸಲಾಗಿದ್ದ ೨ನೇ ಕರ್ನಾಟಕ ಸ್ಟೇಟ್ ಮಾಸ್ಟರ್‍ಸ್ ಗೇಮ್ಸ್ ಪಂದ್ಯಾವಳಿಯಲ್ಲಿ ಸಿದ್ದರೂಢನಗರದ ನಿವಾಸಿ, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ತರೀಕೆರೆ ಶಾಖೆ ವ್ಯವಸ್ಥಾಪಕ ಎನ್. ಅಶೋಕ್‌ಕುಮಾರ್ ದ್ವಿತೀಯ ಬಹುಮಾನದೊಂದಿಗೆ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ.
    ೫೫ ವರ್ಷ ಮೇಲ್ಪಟ್ಟ ಪುರುಷರ ವಿಭಾಗದ ೫ ಸಾವಿರ ಮೀಟರ್ ನಡಿಗೆಯಲ್ಲಿ ದ್ವಿತೀಯ ಬಹುಮಾನ ಪಡೆದುಕೊಂಡಿದ್ದು, ಅಶೋಕ್‌ಕುಮಾರ್ ಮೊದಲ ಬಾರಿಗೆ ಪಂದ್ಯಾವಳಿಯಲ್ಲಿ ಭಾಗವಹಿಸಿ ಮೊದಲ ಸ್ಪರ್ಧೆಯಲ್ಲಿಯೇ ಬಹುಮಾನ ಪಡೆದುಕೊಂಡಿರುವುದು ವಿಶೇಷವಾಗಿದೆ.
ಕ್ರೀಡೆಯಲ್ಲಿ ಆಸಕ್ತಿ ಹೊಂದಿ ಸುಮಾರು ೧ ವರ್ಷದಿಂದ ನಿರಂತರವಾಗಿ ಅಭ್ಯಾಸ ನಡೆಸಿ ಇದೀಗ ಯಶಸ್ವಿಯಾಗಿದ್ದಾರೆ. ಇವರ ಸಾಧನೆಗೆ ನಗರದ ಗಣ್ಯರು ಅಭಿನಂದಿಸಿದ್ದಾರೆ.  

ರಕ್ತದಾನ ಮಹಾ ಕಾರ್ಯ, ಯಾವುದೇ ದುಷ್ಪರಿಣಾಮವಿಲ್ಲ : ಬಿ.ಕೆ ಮೋಹನ್

ಭದ್ರಾವತಿ ಜನ್ನಾಪುರ ಎನ್‌ಟಿಬಿ ಕಛೇರಿ ಆವರಣದಲ್ಲಿರುವ ನಗರ ಆರೋಗ್ಯ ಕೇಂದ್ರದ ವತಿಯಿಂದ ಬುಧವಾರ ರಕ್ತದಾನ ಶಿಬಿರ ಹಾಗು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.
   ಭದ್ರಾವತಿ, ಮಾ. ೧೭: ರಕ್ತದಾನ ಮಹಾ ಕಾರ್ಯವಾಗಿದ್ದು, ರಕ್ತದಾನ ಮಾಡುವುದರಿಂದ ಯಾರಿಗೂ ಯಾವುದೇ ರೀತಿ ತೊಂದರೆಯಾಗುವುದಿಲ್ಲ ಎಂದು ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಹೇಳಿದರು.
  ಅವರು ಬುಧವಾರ ಜನ್ನಾಪುರ ಎನ್‌ಟಿಬಿ ಕಛೇರಿ ಆವರಣದಲ್ಲಿರುವ ನಗರ ಆರೋಗ್ಯ ಕೇಂದ್ರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಶಿಬಿರ ಹಾಗು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದರು.
   ತಾವು ಸಹ ಯಾವುದೇ ಪ್ರಚಾರವಿಲ್ಲದೆ ರಕ್ತದಾನದಲ್ಲಿ ತೊಡಗಿಸಿಕೊಂಡಿದ್ದು, ನಿಯಮಿತವಾಗಿ ರಕ್ತದಾನ ಮಾಡುವುದರಿಂದ ಆರೋಗ್ಯ ಸುಧಾರಣೆ ಜೊತೆಗೆ ಮತ್ತೊಬ್ಬರ ಜೀವ ಉಳಿಸಬಹುದಾಗಿದೆ. ಇಂತಹ ಕಾರ್ಯದಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳುವುದು ಬಹಳ ಮುಖ್ಯವಾಗಿದೆ ಎಂದರು.
ಆರೋಗ್ಯ ಕೇಂದ್ರದ ವೈದ್ಯೆ ಡಾ. ಕವಿತಾ ಅಧ್ಯಕ್ಷತೆ ವಹಿಸಿದ್ದರು. ನಗರಸಭಾ ಸದಸ್ಯ ಅನಿಲ್‌ಕುಮಾರ್, ಮೂಳೆರೋಗ ತಜ್ಞ  ಡಾ. ಸುರೇಶ್, ಸರ್ಜನ್ ಡಾ. ರಾಜು, ದಂತ ತಜ್ಞ ಡಾ. ಸುರೇಶ್, ಚರ್ಮರೋಗ ತಜ್ಞ ಡಾ. ಭರತ್‌ಕುಮಾರ್, ಸ್ತ್ರೀರೋಗ ತಜ್ಞೆ ಡಾ. ಸ್ಮೃತಿ, ಮಕ್ಕಳ ತಜ್ಞ ಡಾ. ಅಜಯ್, ರಕ್ತನಿಧಿ ಕೇಂದ್ರದ ಡಾ. ಅಶೋಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
   ಆರೋಗ್ಯ ಕೇಂದ್ರದ ದೇವರಾಜ್, ಕಿರಣ್, ಸಚಿನ್, ಕೋಮಲಕುಮಾರಿ, ಸೆಲ್ವಿ, ಮಂಗಳ, ಶಿಲ್ಪ, ಉಷಾ ಮತ್ತು ಚೇತನ್ ಸೇರಿದಂತೆ ಎಲ್ಲಾ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ನಗರಸಭೆಗೆ ಪುನಃ ವಾರ್ಡ್‌ಗಳ ಮೀಸಲಾತಿ ನಿಗದಿ : ಶೀಘ್ರದಲ್ಲಿಯೇ ಚುನಾವಣೆ ಸಾಧ್ಯತೆ?

    ಭದ್ರಾವತಿ, ಮಾ. ೧೭: ಮೀಸಲಾತಿ ನಿಗದಿ ಸಂಬಂಧ ಸಲ್ಲಿಸಲಾಗಿದ್ದ ಆಕ್ಷೇಪಣೆಗಳ ಹಿನ್ನಲೆಯಲ್ಲಿ ಕಳೆದ ಸುಮಾರು ೩ ವರ್ಷಗಳಿಂದ ಚುನಾವಣೆ ನಡೆಯದ ನಗರಸಭೆಗೆ ಇದೀಗ ಚುನಾವಣೆ ನಡೆಯುವ ಲಕ್ಷಣಗಳು ಎದ್ದು ಕಾಣುತ್ತಿವೆ. ಸರ್ಕಾರ ಮಂಗಳವಾರ ಹೊಸದಾಗಿ ವಾರ್ಡ್‌ಗಳ ಮೀಸಲಾತಿ ಪ್ರಕಟಿಸಿದೆ.
   ಮೀಸಲಾತಿ ನಿಗದಿ ಸಂಬಂಧ ಹಲವು ಬಾರಿ ಆಕ್ಷೇಪಣೆಗಳು ಸಲ್ಲಿಕೆಯಾಗಿ ನ್ಯಾಯಾಲಯದಲ್ಲಿ ವಿಚಾರಣೆಗಳು ಬಾಕಿ ಉಳಿದಿದ್ದವು. ಈ ನಡುವೆ ಪ್ರಕರಣಗಳನ್ನು ನ್ಯಾಯಾಲಯ ಇತ್ಯರ್ಥಗೊಳಿಸಿದ ನಂತರ ಸರ್ಕಾರ ಪುನಃ ಜ.೨೧ರಂದು ಮೀಸಲಾತಿ ನಿಗದಿಪಡಿಸಿ ಪ್ರಕಟಿಸಿದ್ದು, ಈ ಸಂಬಂಧ ಸಹ ಹಲವು ಆಕ್ಷೇಪಣೆಗಳು ಸಲ್ಲಿಕೆಯಾಗಿದ್ದವು. ನಗರಸಭೆಗೆ ಚುನಾವಣೆ ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಂದ ಸಾಕಷ್ಟು ದೂರು ಬಂದಿದ್ದವು. ಈ ಹಿನ್ನಲೆಯಲ್ಲಿ ಆಕ್ಷೇಪಣೆಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಿ ಇದೀಗ ಹೊಸದಾಗಿ ಮೀಸಲಾತಿ ಹೊರಡಿಸಲಾಗಿದೆ.
ಒಟ್ಟು ೩೫ ವಾರ್ಡ್‌ಗಳ ಮೀಸಲಾತಿ ವಿವರ:
   ವಾರ್ಡ್ ನಂ.೧(ಹೆಬ್ಬಂಡಿ, ಜೇಡಿಕಟ್ಟೆ)-ಹಿಂದುಳಿದ ವರ್ಗ ಮಹಿಳೆ, ವಾರ್ಡ್ ನಂ.೨(ಲೋಯರ್ ಹುತ್ತಾ)-ಸಾಮಾನ್ಯ ಮಹಿಳೆ, ವಾರ್ಡ್ ನಂ.೩(ಬಿ.ಎಚ್ ರಸ್ತೆ, ಎಡ ಮತ್ತು ಬಲಭಾಗ ಚಾಮೇಗೌಡ ಏರಿಯಾ)-ಸಾಮಾನ್ಯ, ವಾರ್ಡ್ ನಂ.೪(ಕನಕಮಂಟಪ ಪ್ರದೇಶ)-ಹಿಂದುಳಿದ ವರ್ಗ(ಬಿ) ಮಹಿಳೆ, ವಾರ್ಡ್ ನಂ.೫(ಕೋಟೆ ಏರಿಯಾ)-ಸಾಮಾನ್ಯ(ಮಹಿಳೆ), ವಾರ್ಡ್ ನಂ.೬(ಸಿದ್ದರೂಢನಗರ)-ಹಿಂದುಳಿದ ವರ್ಗ-ಎ, ವಾರ್ಡ್ ನಂ.೭(ದುರ್ಗಿಗುಡಿ ಹಾಗು ಖಲಂದರ್ ನಗರ)-ಹಿಂದುಳಿದ ವರ್ಗ ಬಿ, ವಾರ್ಡ್ ನಂ.೮(ಅನ್ವರ್ ಕಾಲೋನಿ ಮತ್ತು ಸೀಗೆಬಾಗಿ)-ಸಾಮಾನ್ಯ, ವಾರ್ಡ್ ನಂ.೯(ಭದ್ರಾಕಾಲೋನಿ)-ಪರಿಶಿಷ್ಟ ಜಾತಿ, ವಾರ್ಡ್ ನಂ.೧೦(ಹನುಮಂತನಗರ ಮತ್ತು ಅಶ್ವತ್‌ನಗರ)-ಹಿಂದುಳಿದ ವರ್ಗ-ಎ (ಮಹಿಳೆ).
   ವಾರ್ಡ್ ನಂ.೧೧(ಸುಭಾಷ್ ನಗರ)-ಸಾಮಾನ್ಯ, ವಾರ್ಡ್ ನಂ.೧೨(ಅಣ್ಣಾ ನಗರ)-ಹಿಂದುಳಿದ ವರ್ಗ(ಎ), ವಾರ್ಡ್ ನಂ.೧೩(ಭೂತನಗುಡಿ)-ಸಾಮಾನ್ಯ ಮಹಿಳೆ), ವಾರ್ಡ್ ನಂ.೧೪(ಹೊಸಬೋವಿಕಾಲೋನಿ)-ಪರಿಶಿಷ್ಟ ಜಾತಿ, ವಾರ್ಡ್ ನಂ.೧೫(ಹೊಸಮನೆ ಹಾಗು ಅಶ್ವಥ್ ನಗರ ಬಲಭಾಗ)-ಹಿಂದುಳಿದ ವರ್ಗ(ಎ) ಮಹಿಳೆ, ವಾರ್ಡ್ ನಂ.೧೬(ಗಾಂಧಿನಗರ)-ಸಾಮಾನ್ಯ, ವಾರ್ಡ್ ನಂ.೧೭(ನೆಹರು ನಗರ)-ಸಾಮಾನ್ಯ, ವಾರ್ಡ್ ನಂ.೧೮(ಎಂ.ಎಂ ಕಾಂಪೌಂಡ್)-ಹಿಂದುಳಿದ ವರ್ಗ(ಎ), ವಾರ್ಡ್-೧೯(ಎಂಪಿಎಂ ಆಸ್ಪತ್ರೆ)-ಪರಿಶಿಷ್ಟ ಪಂಗಡ, ವಾರ್ಡ್ ನಂ.೨೦(ಸುರಗಿತೋಪು)-ಸಾಮಾನ್ಯ ಮಹಿಳೆ.
   ವಾರ್ಡ್ ನಂ.೨೧(ಎಂಪಿಎಂ ೬ ಮತ್ತು ೮ನೇ ವಾರ್ಡ್)-ಹಿಂದುಳಿದ ವರ್ಗ(ಎ) ಮಹಿಳೆ, ವಾರ್ಡ್ ನಂ.೨೨(ಉಜ್ಜನಿಪುರ)-ಸಾಮಾನ್ಯ, ವಾರ್ಡ್ ನಂ.೨೩(ತಿಮ್ಲಾಪುರ ಮತ್ತು ಡಿ.ಜಿ ಹಳ್ಳಿ)-ಪರಿಶಿಷ್ಟ ಜಾತಿ ಮಹಿಳೆ, ವಾರ್ಡ್ ನಂ.೨೪(ಬೊಮ್ಮನಕಟ್ಟೆ)-ಸಾಮಾನ್ಯ, ವಾರ್ಡ್ ನಂ.೨೫(ಹುಡ್ಕೋ-ಹೊಸಬುಳ್ಳಾಪುರ)-ಪರಿಶಿಷ್ಟ ಜಾತಿ, ವಾರ್ಡ್ ನಂ.೨೬(ಬಾಲಭಾರತಿ-ಬೆಣ್ಣೆ ಕೃಷ್ಣ ಸರ್ಕಲ್)-ಪರಿಶಿಷ್ಟ ಜಾತಿ ಮಹಿಳೆ, ವಾರ್ಡ್ ನಂ.೨೭(ಆಂಜನೇಯ ಅಗ್ರಹಾರ-ಕೂಲಿಬ್ಲಾಕ್)-ಪರಿಶಿಷ್ಟ ಜಾತಿ(ಮಹಿಳೆ), ವಾರ್ಡ್ ನಂ.೨೮(ಗಣೇಶ್‌ಕಾಲೋನಿ)-ಹಿಂದುಳಿದ ವರ್ಗ(ಎ), ವಾರ್ಡ್ ನಂ.೨೯(ಕಿತ್ತೂರು ರಾಣಿ ಚೆನ್ನಮ್ಮ ಲೇಔಟ್-ಎನ್‌ಟಿಬಿ ಲೇಔಟ್)-ಸಾಮಾನ್ಯ(ಮಹಿಳೆ), ವಾರ್ಡ್ ನಂ.೩೦(ಹೊಸಸಿದ್ದಾಪುರ)-ಸಾಮಾನ್ಯ.
  ವಾರ್ಡ್ ನಂ.೩೧(ಜಿಂಕ್‌ಲೈನ್)-ಸಾಮಾನ್ಯ(ಮಹಿಳೆ), ವಾರ್ಡ್ ನಂ.೩೨(ಜನ್ನಾಪುರ)-ಸಾಮಾನ್ಯ(ಮಹಿಳೆ), ವಾರ್ಡ್ ನಂ.೩೩(ಹುತ್ತಾ ಕಾಲೋನಿ)-ಸಾಮಾನ್ಯ, ವಾರ್ಡ್ ನಂ.೩೪(ಅಪ್ಪರ್ ಹುತ್ತಾ)-ಸಾಮಾನ್ಯ(ಮಹಿಳೆ) ಮತ್ತು ವಾರ್ಡ್ ನಂ.೩೫(ಭಂಡಾರಹಳ್ಳಿ)-ಸಾಮಾನ್ಯ ಮಹಿಳೆ ಮೀಸಲಾತಿ ನಿಗದಿಪಡಿಸಲಾಗಿದೆ.

ಬೆಲೆ ನಿಯಂತ್ರಣ, ಕೃಷಿ ಕಾಯ್ದೆ ರದ್ದು, ಕನಿಷ್ಠ ಬೆಂಬಲ ಬೆಲೆಗೆ ಎಎಪಿ ಆಗ್ರಹ : ತಹಸೀಲ್ದಾರ್‌ಗೆ ಮನವಿ

ಹೆಚ್ಚುತ್ತಿರುವ ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ ಬೆಲೆ ನಿಯಂತ್ರಣ ಹಾಗು ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸುವ ಮತ್ತು ಕನಿಷ್ಠ ಬೆಂಬಲ ಬೆಲೆಗೆ ಕಾನೂನಾತ್ಮಕ ಖಾತ್ರಿ ನೀಡುವ ಸಂಬಂಧ ಬುಧವಾರ ಭದ್ರಾವತಿಯಲ್ಲಿ ಆಮ್ ಆದ್ಮಿ ಪಾರ್ಟಿ ವತಿಯಿಂದ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
     ಭದ್ರಾವತಿ, ಮಾ. ೧೭: ಹೆಚ್ಚುತ್ತಿರುವ ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ ಬೆಲೆ ನಿಯಂತ್ರಣ ಹಾಗು ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸುವ ಮತ್ತು ಕನಿಷ್ಠ ಬೆಂಬಲ ಬೆಲೆಗೆ ಕಾನೂನಾತ್ಮಕ ಖಾತ್ರಿ ನೀಡುವ ಸಂಬಂಧ ಬುಧವಾರ ಆಮ್ ಆದ್ಮಿ ಪಾರ್ಟಿ ವತಿಯಿಂದ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
    ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದರಿಂದಾಗಿ ಶ್ರೀಸಾಮಾನ್ಯರ ಬದುಕು ಸಂಕಷ್ಟಕ್ಕೆ ಒಳಗಾಗಿದೆ. ಕೇಂದ್ರ ಸರ್ಕಾರದ ರೈತ ವಿರೋಧಿ ೩ ಕಾಯ್ದೆಗಳು ರೈತರಿಗೆ ಮಾರಕವಾಗಿದ್ದು, ಕೃಷಿ ಕ್ಷೇತ್ರವನ್ನು ಖಾಸಗೀಕರಣಗೊಳಿಸುವ, ಬಂಡವಾಳಶಾಹಿಗಳ ಕೈಗೊಪ್ಪಿಸುವ ಹುನ್ನಾರ ನಡೆಸಲಾಗುತ್ತಿದೆ. ಅಲ್ಲದೆ ಸಾರ್ವಜನಿಕ ಉದ್ಯಮಗಳನ್ನು ಸಹ ಖಾಸಗೀಕರಣಗೊಳಿಸಲಾಗುತ್ತಿದೆ. ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸಹ ಸಿಗುತ್ತಿಲ್ಲ ಎಂದು ಆರೋಪಿಸಲಾಯಿತು.
    ತಕ್ಷಣ ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ರದ್ದುಕೊಳ್ಳಬೇಕು. ಸಾರ್ವಜನಿಕ ಉದ್ಯಮಗಳ ಖಾಸಗೀಕರಣ ಕೈಬಿಡಬೇಕು ಹಾಗು ರೈತರಿಗೆ ಕನಿಷ್ಠ ಬೆಂಬಲ ಬೆಲೆ ದೊರೆಯಬೇಕೆಂದು ಆಗ್ರಹಿಸಲಾಯಿತು.
    ಆಮ್ ಆದ್ಮಿ ಪಾರ್ಟಿ ತಾಲೂಕು ಅಧ್ಯಕ್ಷ ಡಿ.ಎಂ ಚಂದ್ರಪ್ಪ, ಜಿಲ್ಲಾಧ್ಯಕ್ಷೆ ಸುನಿತಾಸಿಂಗ್, ತಾಲೂಕು ಉಪಾಧ್ಯಕ್ಷರಾದ ಮುಳ್ಕೆರೆ ಲೋಕೇಶ್, ಎನ್.ಪಿ ಜೋಸೆಫ್, ಪ್ರಧಾನ ಕಾರ್ಯದರ್ಶಿ ವಿನೋದ್, ಸಹ ಕಾರ್ಯದರ್ಶಿ ಪ್ರದೀಪ್, ಮಹಿಳಾ ಘಟಕದ ಅಧ್ಯಕ್ಷೆ ಕಾಂತ ದಿನೇಶ್, ಉಪಾಧ್ಯಕ್ಷೆ ನಿಸೀಬಾ ಬೇಗಂ ಹಾಗು ಕಾರ್ಯದರ್ಶಿ ಮೇರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮಾ.೨೦ರಂದು ಜಮಾಬಂಧಿ ಕಾರ್ಯಕ್ರಮ

    ಭದ್ರಾವತಿ, ಮಾ. ೧೭: ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಾ. ೨೦ರಂದು ಬೆಳಿಗ್ಗೆ ೧೧ ಗಂಟೆಗೆ ಜಮಾಬಂಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
   ತಾಲೂಕು ಪಂಚಾಯಿತಿ ಅಧ್ಯಕ್ಷೆ ಡಿ. ಲಕ್ಷ್ಮೀದೇವಿ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಪಂಚಾಯಿತಿ ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿ ಮಹೇಶ್ವರಪ್ಪ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಸದಸ್ಯರು ತಪ್ಪದೇ ಪಾಲ್ಗೊಳ್ಳುವಂತೆ ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ ಕೋರಿದ್ದಾರೆ.

ಮಾ.೧೯ರಂದು ನಗರಸಭೆ ಮುಂಭಾಗ ಅಸಹಕಾರ ಚಳುವಳಿ

ಭದ್ರಾವತಿ, ಮಾ. ೧೭: ನಗರಸಭೆ ವ್ಯಾಪ್ತಿಯ ಕೊಳಚೆ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಂಪರ್ಕಕ್ಕೆ ಹೆಚ್ಚಿನ ಠೇವಣಿ ವಿಧಿಸಿರುವುದನ್ನು ಹಾಗು ನೀರಿನ ಬಿಲ್ ಮೀಟರ್ ಲೆಕ್ಕದಲ್ಲಿ ಪಾವತಿಸಲು ಆದೇಶಿಸಿರುವುದನ್ನು ವಿರೋಧಿಸಿ ಕರ್ನಾಟಕ ಜನಸೈನ್ಯ ವತಿಯಿಂದ ಮಾ.೧೯ರಂದು ಬೆಳಿಗ್ಗೆ ೧೦ ಗಂಟೆಗೆ ನಗರಸಭೆ ಮುಂಭಾಗ ಅಸಹಕಾರ ಚಳುವಳಿ ಹಮ್ಮಿಕೊಳ್ಳಲಾಗಿದೆ.
   ಪ್ರಸ್ತುತ ನಗರದಲ್ಲಿ ವಿಐಎಸ್‌ಎಲ್  ಮತ್ತು ಎಂಪಿಎಂ ಎರಡು ಕಾರ್ಖಾನೆಗಳ ಕಾರ್ಮಿಕರು ಉದ್ಯೋಗವಿಲ್ಲದೆ ಬೀದಿ ಪಾಲಾಗಿದ್ದು, ಅಲ್ಲದೆ ಕೋವಿಡ್-೧೯ರ ಪರಿಣಾಮ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಕುಡಿಯುವ ನೀರಿನ ನಲ್ಲಿ ಸಂಪರ್ಕಕ್ಕೆ ೨೬೦೦ ರು. ಠೇವಣಿ ವಿಧಿಸಿ, ನೀರಿನ ಬಿಲ್ ಮೀಟರ್ ಲೆಕ್ಕದಲ್ಲಿ ಪಾವತಿಸಲು ಆದೇಶಿರುವುದು ಸರಿಯಲ್ಲ. ಕುಡಿಯುವ ನೀರಿಗೆ ಹಣ ಕೇಳುವುದು ಸರಿಯಲ್ಲ. ಉಚಿತವಾಗಿ ಕುಡಿಯುವ ನೀರು ಒದಗಿಸಬೇಕು. ಈ ಹಿನ್ನಲೆಯಲ್ಲಿಈಗಾಗಲೇ ಹಣ ಪಾವತಿಸಿರುವವರಿಗೆ ಹಣ ಹಿಂದಿರುಗಿಸುವುದು. ಆದೇಶವನ್ನು ತಕ್ಷಣ ರದ್ದುಪಡಿಸಬೇಕೆಂದು ಆಗ್ರಹಿಸಿ ಅಸಹಕಾರ ಚಳುವಳಿ ಹಮ್ಮಿಕೊಳ್ಳಲಾಗಿದೆ. ಕೊಚಚೆ ಪ್ರದೇಶದ ನಿವಾಶಿಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.