ಪ್ರಧಾನ ಅಂಚೆ ಕಛೇರಿ ಮನೋರಂಜನಾ ಕೂಟ ವತಿಯಿಂದ ಭದ್ರಾವತಿ ನ್ಯೂಟೌನ್ ವಿಐಎಸ್ಎಲ್ ಕ್ರೀಡಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ೪ನೇ ಪೋಸ್ಟಲ್ ಕ್ರಿಕೆಟ್ ಲೀಗ್ ೨೦೨೧ ಪಂದ್ಯಾವಳಿಯಲ್ಲಿ ಭದ್ರಾವತಿ ಬ್ಲಾಸ್ಟರ್ಸ್ ತಂಡ ಪ್ರಥಮ ಬಹುಮಾನ ಪಡೆದುಕೊಂಡಿತು.
ಭದ್ರಾವತಿ, ಏ. ೨: ಪ್ರಧಾನ ಅಂಚೆ ಕಛೇರಿ ಮನೋರಂಜನಾ ಕೂಟ ವತಿಯಿಂದ ನಗರದ ನ್ಯೂಟೌನ್ ವಿಐಎಸ್ಎಲ್ ಕ್ರೀಡಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ೪ನೇ ಪೋಸ್ಟಲ್ ಕ್ರಿಕೆಟ್ ಲೀಗ್ ೨೦೨೧ ಪಂದ್ಯಾವಳಿಯಲ್ಲಿ ಭದ್ರಾವತಿ ಬ್ಲಾಸ್ಟರ್ಸ್ ತಂಡ ಪ್ರಥಮ ಬಹುಮಾನ ಪಡೆದುಕೊಂಡಿತು.
ಅಂತಿಮ ಘಟ್ಟದ ರೋಚಕ ಪಂದ್ಯದಲ್ಲಿ ಭದ್ರಾವತಿ ಬ್ಲಾಸ್ಟರ್ಸ್ ಮತ್ತು ಸಾಗರ್ ಸೀ ಬರ್ಡ್ಸ್ ತಂಡ ಪ್ರಶಸ್ತಿಗಾಗಿ ಸೆಣಸಾಟ ನಡೆಸಿದವು. ಕೊನೆಯ ಹಂತದಲ್ಲಿ ಭದ್ರಾವತಿ ಬ್ಲಾಸ್ಟರ್ಸ್ ತಂಡ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
ಬೆಳಿಗ್ಗೆ ೭.೩೦ ರಿಂದ ಸಂಜೆ ೬ ಗಂಟೆವರೆಗೂ ನಡೆದ ಪಂದ್ಯಾವಳಿಯಲ್ಲಿ ಭದ್ರಾವತಿ ಬುಲ್ಸ್, ಯೂನಿಟೆಡ್ ಕ್ರಿಕೆಟರ್ಸ್ ಗೋಪಾಲ, ಚನ್ನಗಿರಿ ರೆಬೆಲ್ಸ್, ಕೊಡಚಾದ್ರಿ ಬ್ರದರ್ಸ್, ಡಪ್ ಕಬ್ಸ್ ಹೊನ್ನಾಳಿ, ವಿನೋಬನಗರ್, ಮಾಸ್ಟರ್ ಬ್ಲಾಸ್ಟರ್ ಕ್ರಿಕೆಟರ್ಸ್, ಶಿಕಾರಿಪೂರ್ ಶೂಟರ್ಸ್, ಇಲೆವೆನ್ ಮೇಲ್ಸ್ ಕ್ರಿಕೆಟರ್ಸ್, ಭದ್ರಾವತಿ ಬ್ಲಾಸ್ಟರ್ಸ್, ಸಾಗರ್ ಸೀ ಬರ್ಡ್ಸ್, ಸಾಗರ್ ಸ್ಟ್ರಿಕರ್ಸ್, ಆರ್ ಭಟ್ ಟೀಮ್, ಲೋಸರ್ ಮತ್ತು ಸ್ಟಾರ್ ಇಲೆವೆನ್ ತೀರ್ಥಹಳ್ಳಿ ಸೇರಿದಂತೆ ಒಟ್ಟು ೧೫ ತಂಡಗಳು ಪಾಲ್ಗೊಂಡಿದ್ದವು. ಒಟ್ಟು ೨೧ ಪಂದ್ಯಗಳು ಜರುಗಿದವು. ೪ ಜನ ತೀರ್ಪುಗಾರರಾಗಿ ಪಾಲ್ಗೊಂಡಿದ್ದರು.
ವಿಜೇತ ತಂಡಗಳಿಗೆ ಪ್ರಶಸ್ತಿಯನ್ನು ಶಿವಮೊಗ್ಗ ಅಂಚೆ ಅಧೀಕ್ಷಕ ಜಿ. ಹರೀಶ್ ಪ್ರಧಾನ ಮಾಡಿದರು. ಅಂಚೆ ಪಾಲಕ ವಿ. ಶಶಿಧರ ಅಧ್ಯಕ್ಷತೆ ವಹಿಸಿದ್ದರು. ವಿಐಎಸ್ಎಲ್ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರವೀಣ್ಕುಮಾರ್, ಪ್ರಮುಖರಾದ ಶ್ರೀನಿವಾಸ್, ಎಸ್.ಎಸ್ ಮಂಜುನಾಥ್, ಪ್ರಕಾಶ್ರಾವ್, ಕೆ.ಆರ್ ಉಷಾ, ಪ್ರಹ್ಲಾದ ನಾಯಕ, ಉದಯ ಆಚಾರ್, ನಾಗರಾಜ ಪೂಜಾರ, ಎಚ್.ವಿ ರಾಜ್ಕುಮಾರ್, ಟಿ.ಕೆ ಗೋಪಾಲ್, ಜಿ. ರಾಘವೇಂದ್ರ, ಜೆ. ಮಂಜುನಾಥ್, ಎಚ್.ಆರ್ ಈಶ್ವರಪ್ಪ, ಆರ್. ವೆಂಕಟೇಶ್, ಕೆ. ಪ್ರಹ್ಲಾದ್ ರಾವ್, ಸಿ.ಆಋ ಪಾಟೀಲ್, ಕೆ. ಲಿಂಗರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.