ಭದ್ರಾವತಿ ಬೈಪಾಸ್ ರಸ್ತೆಗೆ ಸಂಪರ್ಕ ಕಲ್ಪಿಸುವ ಜನ್ನಾಪುರ-ಹೊಸಸಿದ್ದಾಪುರ ರಸ್ತೆಯನ್ನು ಭಾನುವಾರ ಪೊಲೀಸರು ಬಂದ್ ಮಾಡುವ ಮೂಲಕ ಸಂಚಾರಕ್ಕೆ ಕಡಿವಾಣ ಹಾಕಿದರು.
ಭದ್ರಾವತಿ, ಮೇ. ೨: ಕೊರೋನಾ ಸೋಂಕು ೨ನೇ ಅಲೆ ತೀವ್ರವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಜನತಾ ಕರ್ಪ್ಯೂ ಒಂದೆಡೆಯಾದೆಡೆಯಾದರೆ, ಮತ್ತೊಂದೆಡೆ ಶನಿವಾರ ಮತ್ತು ಭಾನುವಾರ ಜಾರಿಗೊಳಿಸಿರುವ ವೀಕೆಂಡ್ ಲಾಕ್ಡೌನ್ ಬಹುತೇಕ ಯಶಸ್ವಿಯಾಗಿದೆ.
ಬೆಳಿಗ್ಗೆ ೬ ರಿಂದ ೧೦ ಗಂಟೆ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿತ್ತು. ನಂತರ ಪೊಲೀಸರು ಪ್ರಮುಖ ವೃತ್ತಗಳನ್ನು ಬ್ಯಾರಿಗೇಡ್ಗಳಿಂದ ಬಂದ್ ಮಾಡುವ ಮೂಲಕ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿದರು. ಕೆಲವೆಡೆ ತುರ್ತು ಅಗತ್ಯಗಳಿಗೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗಿತ್ತು. ಈ ನಡುವೆ ಕೆಲವೆಡೆ ಪರ್ಯಾಯ ಮಾರ್ಗಗಳಲ್ಲಿ ವಾಹನಗಳು ಸಂಚರಿಸಿದವು.
ಉಳಿದಂತೆ ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಮುಚ್ಚಲ್ಪಟ್ಟಿದ್ದವು. ಪ್ರಮುಖ ವಾಣಿಜ್ಯ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಜನರು ವೀಕೆಂಡ್ ಲಾಕ್ಡೌನ್ಗೆ ಪೂರಕವಾಗಿ ಸ್ಪಂದಿಸಿರುವುದು ಕಂಡು ಬಂದಿತು.