ಕರ್ನಾಟಕ ರಾಜ್ಯ ಕ್ರೈಸ್ತ ಸಂಘ ಸಂಸ್ಥೆಗಳ ಒಕ್ಕೂಟದ ವತಿಯಿಂದ ಭದ್ರಾವತಿಯಲ್ಲಿ ಬುಧವಾರದಿಂದ ಹಸಿದವರಿಗೆ ಅನ್ನ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಭದ್ರಾವತಿ, ಮೇ. ೧೨: ಸೆಮಿ ಲಾಕ್ಡೌನ್ ನಡುವೆ ಹಸಿವಿನಿಂದ ಸಂಕಷ್ಟಕ್ಕೆ ಒಳಗಾದವರ ನೆರವಿಗೆ ಸ್ವಯಂ ಪ್ರೇರಣೆಯಿಂದ ವಿವಿಧ ಸಂಘ-ಸಂಸ್ಥೆಗಳು ಮುಂದೆ ಬರುತ್ತಿದ್ದು, ಇದರಿಂದಾಗಿ ಹಸಿವಿನಿಂದ ಬಳಲುತ್ತಿರುವ ಬಹಳಷ್ಟು ಮಂದಿ ನಿಟ್ಟುಸಿರು ಬಿಡುವಂತಾಗಿದೆ.
ಕರ್ನಾಟಕ ರಾಜ್ಯ ಕ್ರೈಸ್ತ ಸಂಘ ಸಂಸ್ಥೆಗಳ ಒಕ್ಕೂಟದ ವತಿಯಿಂದ ಒಕ್ಕೂಟದ ರಾಜ್ಯಾಧ್ಯಕ್ಷ, ಮಾಜಿ ಸಭಾಪತಿ ಡೇವಿಡ್ ಸಿಮಿಯೋನ್ ಹಾಗು ಉಪಾಧ್ಯಕ್ಷ ಫಾಸ್ಟರ್ ದೇವನೇಸಂರವರ ಮಾರ್ಗದರ್ಶನದಲ್ಲಿ ಬುಧವಾರದಿಂದ ಹಸಿದವರಿಗೆ ಅನ್ನ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಒಕ್ಕೂಟದ ಸದಸ್ಯರೆಲ್ಲರೂ ಒಗ್ಗೂಡಿ ತಮ್ಮ ಸ್ವಂತ ಹಣದಲ್ಲಿ ಈ ಕಾರ್ಯ ಕೈಗೊಂಡಿದ್ದು, ಪ್ರತಿದಿನ ೧೦೦ ಮಂದಿಗೆ ಸಿದ್ದಪಡಿಸಿದ ಆಹಾರ ವಿತರಿಸುವ ಮೂಲಕ ಮಾನವೀಯತೆ ಮರೆದಿದ್ದಾರೆ.
ಒಕ್ಕೂಟದ ತಾಲೂಕು ಪ್ರಮುಖರಾದ ಸೆಲ್ವರಾಜ್( ಗೌರಿ ಗ್ಯಾಸ್), ವಿಲ್ಸನ್ ಬಾಬು, ಡಾರ್ವಿನ್, ಪಿ.ಸಿ ರಾಜ (ದಾಸ್) ಮತ್ತು ಫ್ರಾನ್ಸಿಸ್ ಸೇರಿದಂತೆ ಇನ್ನಿತರರು ಈ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ತಿರುಮಲ ಫಿಶ್ ಟ್ರಸ್ಟ್ :
ಹಸಿದವರ ಸಂಕಷ್ಟಕ್ಕೆ ತಿರುಮಲ ಫಿಶ್ ಟ್ರಸ್ಟ್ ಸ್ಪಂದಿಸಿದ್ದು, ೩ ದಿನಗಳಿಂದ ಹಸಿವು ನೀಗಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಸಿಂಗ್ ಪಾನಿಪುರಿ ಮತ್ತು ಚಾಟ್ಸ್(ಲಕ್ಷ್ಮಣ), ಮೀನುಗಾರರ ಬೀದಿ ಮತ್ತು ಸಂಜಯ್ ಕಾಲೋನಿ ಯುವಕರು ಈ ಸೇವಾ ಕಾರ್ಯದಲ್ಲಿ ಮುಂದಾಗಿದ್ದಾರೆ.
ಭದ್ರಾವತಿಯಲ್ಲಿ ಹಸಿದವರ ಸಂಕಷ್ಟಕ್ಕೆ ತಿರುಮಲ ಫಿಶ್ ಟ್ರಸ್ಟ್ ಸ್ಪಂದಿಸಿದ್ದು, ೩ ದಿನಗಳಿಂದ ಹಸಿವು ನೀಗಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ