Wednesday, June 23, 2021

ಭದ್ರಾವತಿಯಲ್ಲಿ ೪೭ ಸೋಂಕು

ಭದ್ರಾವತಿ, ಜೂ. ೨೩: ತಾಲೂಕಿನಲ್ಲಿ ಕೊರೊನಾ ಸೋಂಕಿನ ಪ್ರಮಾಣ ಸ್ವಲ್ಪ ಏರಿಕೆಯಾಗಿದ್ದು, ಬುಧವಾರ ಒಬ್ಬರು ಮೃತಪಟ್ಟಿದ್ದಾರೆ.
   ಕೆಲವು ದಿನಗಳಿಂದ ಇಳಿಯಾಗಿದ್ದ ಸೋಂಕು ಪುನಃ ಏರಿಕೆಯಾಗಿದೆ. ಗ್ರಾಮಾಂತರ ಭಾಗದಲ್ಲಿ ೨೪ ಹಾಗು ನಗರ ಭಾಗದಲ್ಲಿ ೨೩ ಸೇರಿ ಒಟ್ಟು ೪೭ ಪ್ರಕರಣಗಳು ದಾಖಲಾಗಿವೆ. ಸೋಂಕಿಗೆ ಒಬ್ಬರು ಮೃತಪಟ್ಟಿದ್ದಾರೆ.

ಗಾಯಗೊಂಡಿದ್ದ ನಾಗರ ಹಾವಿಗೆ ಚಿಕಿತ್ಸೆ ನೀಡಿ ಮಾನವೀಯತೆ

ಭದ್ರಾವತಿಯಲ್ಲಿ ಯುವಕರ ತಂಡವೊಂದು ಗಾಯಗೊಂಡಿದ್ದ ನಾಗರ ಹಾವಿಗೆ ಚಿಕಿತ್ಸೆ ನೀಡಿ ಅರಣ್ಯಕ್ಕೆ ಬಿಡುವ ಮೂಲಕ ಮಾನವೀಯತೆ ಮರೆದಿರುವ ಘಟನೆ ಬುಧವಾರ ನಡೆದಿದೆ.
   ಭದ್ರಾವತಿ, ಜೂ. ೨೩: ನಗರದ ಯುವಕರ ತಂಡವೊಂದು ಗಾಯಗೊಂಡಿದ್ದ ನಾಗರ ಹಾವಿಗೆ ಚಿಕಿತ್ಸೆ ನೀಡಿ ಅರಣ್ಯಕ್ಕೆ ಬಿಡುವ ಮೂಲಕ ಮಾನವೀಯತೆ ಮರೆದಿರುವ ಘಟನೆ ಬುಧವಾರ ನಡೆದಿದೆ.
   ಕಾಗದನಗರದ ರಸ್ತೆಯೊಂದರಲ್ಲಿ ಅಪಘಾತದಿಂದ ಗಾಯಗೊಂಡಿದ್ದ ನಾಗರ ಹಾವನ್ನು ರಕ್ಷಿಸಿ ತಕ್ಷಣ ಚಿಕಿತ್ಸೆ ನೀಡುವಲ್ಲಿ ಜಾಸ್ವಾ, ಬೆನ್ಸನ್, ಸತ್ಯ ಮತ್ತು ಭರತ್‌ರಾವ್ ತಂಡ ಯಶಸ್ವಿಯಾಗಿದೆ. ಚೇತರಿಸಿಕೊಂಡ ನಂತರ ಅರಣ್ಯಕ್ಕೆ  ಬಿಟ್ಟು ಬಂದಿದ್ದಾರೆ.

ಕೆರೆ ಅಭಿವೃದ್ಧಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮನವಿ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭದ್ರಾವತಿಯಲ್ಲಿ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸ್ ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಬುಧವಾರ ನಗರಸಭೆ ಪೌರಾಯುಕ್ತ ಕೆ. ಪರಮೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.
  ಭದ್ರಾವತಿ, ಜೂ. ೨೩: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸ್ ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಬುಧವಾರ ನಗರಸಭೆ ಪೌರಾಯುಕ್ತ ಕೆ. ಪರಮೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.
   ಸರ್ವೆ ನಂ.೧೧೨ರ ಸುಮಾರು ೪೫ ಎಕರೆ ೨೦ ಗುಂಟೆ ವಿಸ್ತೀರ್ಣವುಳ್ಳ ಸುಮಾರು ೮೦೦ ವರ್ಷಗಳ ಇತಿಹಾಸವುಳ್ಳ ಸರ್ಕಾರಿ ಹಿರೇಕೆರೆ ಸುತ್ತಲೂ ಬಸಿಕಾಲುವೆ(ಟ್ರಂಚ್) ನಿರ್ಮಿಸುವುದು. ಕೆರೆಯ ನೀರು ಸರಾಗವಾಗಿ ಹರಿಯಲು ೪ ಅಡಿ ವಿಸ್ತೀರ್ಣವುಳ್ಳ ೮ ಪೈಪ್‌ಗಳನ್ನು ಅಳವಡಿಸುವುದು. ನಗರಸಭೆ ನ್ಯೂಟೌನ್ ಶಾಖಾ ಕಛೇರಿಯಲ್ಲಿ ಜನಸಂದಣಿ ಅಧಿಕವಾಗಿದ್ದು, ಈ ಹಿನ್ನಲೆಯಲ್ಲಿ ಪ್ರತಿನಿತ್ಯ ಕ್ರಿಮಿನಾಶಕ ಸಿಂಪಡಿಸುವುದು ಹಾಗು  ಆವರಣದಲ್ಲಿ ಬ್ಯಾರಿಕೇಡ್ ಅಳವಡಿಸುವಂತೆ ಕೋರಲಾಗಿದೆ.
    ನಗರಸಭೆ ವ್ಯಾಪ್ತಿಯ ನ್ಯೂಟೌನ್ ಭಾಗದಲ್ಲಿ ಈಗಾಗಲೇ ಒಳಚರಂಡಿ ಕಾಮಗಾರಿ ಕೆಲಸ ಪೂರ್ಣಗೊಂಡಿದ್ದು, ತಕ್ಷಣ ಮನೆಗಳಿಗೆ ಸಂಪರ್ಕ ಕಲ್ಪಿಸುವ ಕಾರ್ಯ ಪೂರ್ಣಗೊಳಿಸುವುದು. ಜನ್ನಾಪುರ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಂಪರ್ಕ ಕಾಮಗಾರಿಗಳನ್ನು ಪೂರ್ಣಗೊಳಿಸುವುದು. ನಗರಸಭೆ ನ್ಯೂಟೌನ್ ಶಾಖಾ ಕಛೇರಿಯಲ್ಲಿ ಮನೆ ಹಾಗು ನೀರಿನ ಕಂದಾಯ ಪಾವತಿಸಲು ಕೌಂಟರ್ ತೆರೆಯುವಂತೆ ಮನವಿ ಮಾಡಲಾಗಿದೆ.
   ಟ್ರಸ್ಟ್ ಛೇರ್‍ಮನ್ ಆರ್. ವೇಣುಗೋಪಾಲ್, ಕಾರ್ಯಾಧ್ಯಕ್ಷೆ ರಮಾವೆಂಕಟೇಶ್, ಸಂಘಟನಾ ಕಾರ್ಯದರ್ಶಿ ಆರ್. ಮುರುಗೇಶ್, ಸಂಚಾಲಕರಾದ ಶೈಲಜಾ ರಾಮಕೃಷ್ಣ, ಗೀತಾಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.