ಸುಮಾರು ೯ ತಿಂಗಳ ಕಾಲ ಭದ್ರಾವತಿ ತಾಲೂಕಿನ ದಂಡಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ತಹಸೀಲ್ದಾರ್ ಜಿ. ಸಂತೋಷ್ಕುಮಾರ್ ಅವರನ್ನು ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ, ಜು. ೨೦: ಸುಮಾರು ೯ ತಿಂಗಳ ಕಾಲ ತಾಲೂಕಿನ ದಂಡಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ತಹಸೀಲ್ದಾರ್ ಜಿ. ಸಂತೋಷ್ಕುಮಾರ್ ಅವರನ್ನು ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಸಮಿತಿ ಹೋರಾಟಕ್ಕೆ ಸ್ಪಂದಿಸಿದ ತಹಸೀಲ್ದಾರ್ಗೆ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ನೇತೃತ್ವದಲ್ಲಿ ಅಭಿನಂದಿಸುವ ಜೊತೆಗೆ ಇನ್ನೂ ಉನ್ನತ ಹುದ್ದೆ ಲಭಿಸಲಿ ಎಂದು ಹಾರೈಸಲಾಯಿತು.
ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ಸಮಿತಿಯ ಪ್ರಮುಖರಾದ ಸುಬ್ಬೇಗೌಡ, ಎರೇಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಶಿವರಾಮ್, ಎನ್. ಮಂಜುನಾಥ್, ಯುವ ಕಾಂಗ್ರೆಸ್ ಗ್ರಾಮಾಂತರ ಘಟಕದ ಉಪಾಧ್ಯಕ್ಷ ತಬ್ರೆಸ್ಖಾನ್, ಕಾರ್ಯದರ್ಶಿ ಶಂಕರ್, ಕಿರಣ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.