Tuesday, July 27, 2021

ನ್ಯಾಯಾಲಯದ ಆದೇಶ ಉಲ್ಲಂಘನೆ ಆರೋಪ : ತಹಸೀಲ್ದಾರ್ ಕಛೇರಿ ಮುಂಭಾಗ ಪ್ರತಿಭಟನೆ

ನ್ಯಾಯಾಲಯದ ಆದೇಶ ಉಲ್ಲಂಘಿಸಿದ್ದಾರೆಂದು ಆರೋಪಿಸಿ ಕುಟುಂಬ ಸದಸ್ಯರು ಮಂಗಳವಾರ ಭದ್ರಾವತಿ ತಾಲೂಕು ದಂಡಾಧಿಕಾರಿ, ತಹಸೀಲ್ದಾರ್‌ರವರ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
     ಭದ್ರಾವತಿ, ಜು. ೨೭:  ನ್ಯಾಯಾಲಯದ ಆದೇಶ ಉಲ್ಲಂಘಿಸಿದ್ದಾರೆಂದು ಆರೋಪಿಸಿ ಕುಟುಂಬ ಸದಸ್ಯರು ಮಂಗಳವಾರ ತಾಲೂಕು ದಂಡಾಧಿಕಾರಿ, ತಹಸೀಲ್ದಾರ್‌ರವರ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
    ತಾಲೂಕಿನ ಸನ್ಯಾಸಿ ಕೋಡಮಗ್ಗಿ ಹೊಸೂರು ಗ್ರಾಮದ ನಿವಾಸಿ, ಸರ್ವೆ ನಂ. ೭೩, ೭೪ರ ಮಾಲೀಕರಾದ ದಾಕ್ಷಾಯಮ್ಮನವರ ಪರವಾಗಿ ನ್ಯಾಯಾಲಯ ಆದೇಶ ನೀಡಿದ್ದು, ಒತ್ತುವರಿಯಾಗಿರುವ ಜಾಗವನ್ನು ನ್ಯಾಯಾಲಯದ ಆದೇಶದಂತೆ ಆಳತೆ ಮಾಡಿ ತೆರವುಗೊಳಿಸಿಕೊಡುವಲ್ಲಿ ತಹಸೀಲ್ದಾರ್‌ರವರು ಹಿಂದೇಟು ಹಾಕುತ್ತಿದ್ದು, ಪ್ರಭಾವಿಗಳ ಒತ್ತಡಕ್ಕೆ ಮಣಿದು ನ್ಯಾಯಾಲಯದ ಆದೇಶ ಉಲ್ಲಂಘಿಸಿದ್ದಾರೆಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.
   ಸ್ಥಳೀಯ ಮುಖಂಡ ಸುರೇಶಯ್ಯನವರ ನೇತೃತ್ವದಲ್ಲಿ ಕುಟುಂಬ ಸದಸ್ಯರು ಮಧ್ಯಾಹ್ನ ಪ್ರತಿಭಟನೆ ನಡೆಸಿ ತಹಸೀಲ್ದಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.  

ನಿವೃತ್ತ ಮುಖ್ಯ ಶಿಕ್ಷಕ ಮುನಿಸ್ವಾಮಿ ನಿಧನ

ಮುನಿಸ್ವಾಮಿ
    ಭದ್ರಾವತಿ, ಜು. ೨೭: ನಿವೃತ್ತ ಮುಖ್ಯ ಶಿಕ್ಷಕ, ನಗರದ ಹುಡ್ಕೋ ಕಾಲೋನಿ ನಿವಾಸಿ ಮುನಿಸ್ವಾಮಿ(೮೦) ನಿಧನ ಹೊಂದಿದರು.
    ಓರ್ವ ಪುತ್ರ, ಓರ್ವ ಪುತ್ರಿ ಹಾಗು ಮೊಮ್ಮಕ್ಕಳು ಹೊಂದಿದ್ದರು. ಬೈಪಾಸ್ ರಸ್ತೆಯಲ್ಲಿರುವ ರುದ್ರಭೂಮಿಯಲ್ಲಿ ಬುಧವಾರ ಇವರ ಅಂತ್ಯಕ್ರಿಯೆ ನೆರವೇರಲಿದೆ. ಮುನಿಸ್ವಾಮಿಯವರು ನ್ಯೂಟೌನ್ ಲಯನ್ಸ್ ಕ್ಲಬ್ ಮುಂಭಾಗದಲ್ಲಿರುವ ತಮಿಳು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹಾಗು ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.

ನಗರಸಭೆ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟೆಗಳ ಬೌಂಡರಿ ನಿಗದಿಗೆ ಮನವಿ

ಭದ್ರಾವತಿ ವಿಧಾನಸಭಾ ಕ್ಷೇತ್ರದ ನಗರಸಭಾ ವ್ಯಾಪ್ತಿಯ ಹಾಗು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟೆಗಳನ್ನು ಗುರುತಿಸಿ ಬೌಂಡರಿ ನಿಗದಿಪಡಿಸುವಂತೆ ಒತ್ತಾಯಿಸಿ ತಹಸೀಲ್ದಾರ್ ಆರ್. ಪ್ರದೀಪ್‌ಗೆ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಜು. ೨೭: ವಿಧಾನಸಭಾ ಕ್ಷೇತ್ರದ ನಗರಸಭಾ ವ್ಯಾಪ್ತಿಯ ಹಾಗು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟೆಗಳನ್ನು ಗುರುತಿಸಿ ಬೌಂಡರಿ ನಿಗದಿಪಡಿಸುವಂತೆ ಒತ್ತಾಯಿಸಿ ತಹಸೀಲ್ದಾರ್ ಆರ್. ಪ್ರದೀಪ್‌ಗೆ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಯಿತು.
   ಈಗಾಗಲೇ ವಿಧಾನಸಭಾ ಕ್ಷೇತ್ರದ ನಗರಸಭಾ ವ್ಯಾಪ್ತಿಯಲ್ಲಿ ಸುಮಾರು ೭೦ ಕೆರೆಗಳು ಹಾಗು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ೨೦ ಕೆರೆಗಳ ಬೌಂಡರಿ ನಿಗದಿಪಡಿಸುವ ಸಂಬಂಧ ಆದೇಶವಾಗಿರುತ್ತದೆ. ಕೆರೆ ಸಮೀಪದ ರೈತರು  ಸ್ವಇಚ್ಛೆಯಿಂದ ಸರ್ಕಾರದ ಯಾವುದೇ ಅನುದಾನವಿಲ್ಲದೆ ಕೆರೆಗಳ ಅಭಿವೃದ್ಧಿಗೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ತಾಲೂಕು ಆಡಳಿತ, ನಗರಸಭೆ ಹಾಗು ಗ್ರಾಮ ಪಂಚಾಯಿತಿ ಆಡಳಿತಗಳಿಗೆ ಟ್ರಸ್ಟ್ ಹಾಗು ವೇದಿಕೆ ವತಿಯಿಂದ ಅಭಿನಂದನೆ ಸಲ್ಲಿಸಲಾಗಿದೆ.
ತಾಂತ್ರಿಕ ಕಾರಣಗಳಿಂದಾಗಿ ತಾಲೂಕು ಆಡಳಿತದಿಂದ ನಗರಸಭೆ ಹಾಗು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕಟ್ಟೆಗಳನ್ನು ಅಳತೆ ಮಾಡಿ ಬೌಂಡರಿ ನಿಗದಿಪಡಿಸಿರುವುದಿಲ್ಲ. ಈ ಹಿನ್ನಲೆಯಲ್ಲಿ ತಕ್ಷಣ ಕ್ರಮ ಕೈಗೊಂಡು ಕೆರೆಗಳಂತೆ ಕಟ್ಟೆಗಳನ್ನು ಅಭಿವೃದ್ಧಿಪಡಿಸಬೇಕು. ಇದರಿಂದಾಗಿ ಅಂತರ್ಜಲ ಹೆಚ್ಚುವ ಜೊತೆಗೆ ಪ್ರಾಣಿ, ಪಕ್ಷಿಗಳಿಗೆ, ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಮನವರಿಕೆ ಮಾಡಲಾಗಿದೆ.
   ಟ್ರಸ್ಟ್ ಛೇರ್‍ಮನ್ ಆರ್. ವೇಣುಗೋಪಾಲ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.  ಕಾರ್ಯಾಧ್ಯಕ್ಷೆ ರಮಾ ವೆಂಕಟೇಶ್, ಸಂಘಟನಾ ಕಾರ್ಯದರ್ಶಿ ದೇವಿಕಾ ನಾಗರಾಜ್, ಕಾರ್ಯದರ್ಶಿ ಶೈಲಜಾ ರಾಮಕೃಷ್ಣ ಉಪಸ್ಥಿತರಿದ್ದರು.

ಭಾನುಮತಿ ನಿಧನ

ಭಾನುಮತಿ
     ಭದ್ರಾವತಿ, ಜು. ೨೭: ನಗರದ ಮೈಸೂರು ಕಾಗದ ಕಾರ್ಖಾನೆ ಕಾರ್ಮಿಕರ ಸಂಘದ ಮಾಜಿ ಅಧ್ಯಕ್ಷ ಎಸ್. ಚಂದ್ರಶೇಖರ್ ಅವರ ತಾಯಿ ಭಾನುಮತಿ(೮೫) ನಿಧನ ಹೊಂದಿದರು.
     ಶಿವಮೊಗ್ಗ ವಿನೋಬನಗರದಲ್ಲಿರುವ ಸಹೋದರಿ ನಿವಾಸದಲ್ಲಿ ಸೋಮವಾರ ರಾತ್ರಿ ನಿಧನ ಹೊಂದಿದ್ದು, ಮಂಗಳವಾರ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಿತು.  ಭಾನುಮತಿ ಅವರಿಗೆ ಪುತ್ರ ಚಂದ್ರಶೇಖರ್ ಹಾಗು ೩ ಪುತ್ರಿಯರು ಮತ್ತು ಅಳಿಯಂದಿರು, ಮೊಮ್ಮಕ್ಕಳು ಇದ್ದರು. ಇವರ ನಿಧನಕ್ಕೆ ಎಂಪಿಎಂ ಕಾರ್ಮಿಕರು, ಬಿಜೆಪಿ ಜಿಲ್ಲಾ ಹಾಗು ಸ್ಥಳೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ.