Thursday, August 5, 2021

ಸಚಿವ ಕೆ.ಎಸ್ ಈಶ್ವರಪ್ಪಗೆ ಅದ್ದೂರಿ ಸ್ವಾಗತ : ಸನ್ಮಾನ, ಅಭಿನಂದನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಗುರುವಾರ ಶಿವಮೊಗ್ಗ ನಗರಕ್ಕೆ ಆಗಮಿಸುವ ವೇಳೆ ಕೆ.ಎಸ್ ಈಶ್ವರಪ್ಪ ಅವರಿಗೆ ಭದ್ರಾವತಿ ನಗರದಲ್ಲಿ ಬಿಜೆಪಿ ಮಂಡಲ ವತಿಯಿಂದ ಅದ್ದೂರಿ ಸ್ವಾಗತ ಕೋರಲಾಯಿತು.
    ಭದ್ರಾವತಿ, ಆ. ೫: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಗುರುವಾರ  ಶಿವಮೊಗ್ಗ ನಗರಕ್ಕೆ ಆಗಮಿಸುವ ವೇಳೆ ಕೆ.ಎಸ್ ಈಶ್ವರಪ್ಪ ಅವರಿಗೆ ನಗರದಲ್ಲಿ ಬಿಜೆಪಿ ಮಂಡಲ ವತಿಯಿಂದ ಅದ್ದೂರಿ ಸ್ವಾಗತ ಕೋರಲಾಯಿತು.
     ಬೈಪಾಸ್ ರಸ್ತೆ ಮಿಲ್ಟ್ರಿಕ್ಯಾಂಪ್‌ನಲ್ಲಿರುವ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದ ಮುಂಭಾಗ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗು ಅಭಿಮಾನಿಗಳು ಪಟಾಕಿ ಸಿಡಿಸಿ ಅದ್ದೂರಿಯಾಗಿ ಸ್ವಾಗತಿಸುವ ಜೊತೆಗೆ ಸನ್ಮಾನಿಸಿ ಅಭಿನಂದಿಸಿದರು. ಜಿಲ್ಲೆಯ ಹಿರಿಯ ರಾಜಕಾರಣಿಗಳು, ಅನುಭವಿಗಳಾಗಿರುವ ಈಶ್ವರಪ್ಪನವರಿಗೆ ಪುನಃ ಸಚಿವ ಸ್ಥಾನ ಲಭಿಸಿರುವುದು ಸಂತಸದ ವಿಚಾರವಾಗಿದೆ ಎಂದು ಸಂಭ್ರಮ ವ್ಯಕ್ತಪಡಿಸಿದರು.
      ಪಕ್ಷದ ಜಿಲ್ಲಾಧ್ಯಕ್ಷ ಡಿ.ಟಿ ಮೇಘರಾಜ್, ರಾಜ್ಯ ಪ್ರಕೋಸ್ಟಗಳ ಸಂಯೋಜಕ ಎಂ.ಬಿ ಭಾನುಪ್ರಕಾಶ್, ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ ಶ್ರೀನಾಥ್, ಜಿ. ಧರ್ಮಪ್ರಸಾದ್, ಶಿವರಾಜ್, ಜಿಲ್ಲಾ ಖಜಾಂಚಿ ಎಸ್. ರಮೇಶ್, ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಕರ್ನಾಟಕ ನೀರು ಸರಬರಾಜು ಹಾಗು ಒಳಚರಂಡಿ ಮಂಡಳಿ ಸದಸ್ಯ ಮಂಗೋಟೆ ರುದ್ರೇಶ್, ಸೂಡಾ ಸದಸ್ಯರಾದ ವಿ. ಕದಿರೇಶ್, ರಾಮಲಿಂಗಯ್ಯ, ಬಿ.ಎಸ್ ನಾರಾಯಣಪ್ಪ, ಎಂ.ಎಸ್ ಸುರೇಶಪ್ಪ, ಯುವ ಮೋರ್ಚಾ ಅಧ್ಯಕ್ಷ ವಿಜಯ್, ಮಹಿಳಾ ಘಟಕದ ಪ್ರಮುಖರಾದ ಆರ್.ಎಸ್ ಶೋಭಾ, ಅನ್ನಪೂರ್ಣ ಸಾವಂತ್, ಶೋಭಾ ಪಾಟೀಲ್, ಸುಲೋಚನಾ, ಮಂಜುಳ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಭದ್ರಾ ಜಲಾಶಯದಿಂದ ೧೬೦೦ ಕ್ಯೂಸೆಕ್ಸ್ ನೀರು ಬಿಡುಗಡೆ

ಭದ್ರಾವತಿ ತಾಲೂಕಿನ ಜೀವ ನದಿ ಭದ್ರಾ ನದಿ ಜಲಾಶಯ ಈ ಬಾರಿ ನಿರೀಕ್ಷೆಗೂ ಮೊದಲೇ ಭರ್ತಿಯಾಗಿದ್ದು, ಗುರುವಾರ ಬೆಳಿಗ್ಗೆ ೪ ಕ್ರಸ್ಟ್ ಗೇಟ್ ಮೂಲಕ ಹೆಚ್ಚುವರಿ ನೀರನ್ನು ನದಿಗೆ ಬಿಡಲಾಯಿತು.
      ಭದ್ರಾವತಿ, ಆ. ೫: ತಾಲೂಕಿನ ಜೀವ ನದಿ ಭದ್ರಾ ನದಿ ಜಲಾಶಯ ಈ ಬಾರಿ ನಿರೀಕ್ಷೆಗೂ ಮೊದಲೇ ಭರ್ತಿಯಾಗಿದ್ದು, ಗುರುವಾರ ಬೆಳಿಗ್ಗೆ ೪ ಕ್ರಸ್ಟ್ ಗೇಟ್ ಮೂಲಕ ಹೆಚ್ಚುವರಿ ನೀರನ್ನು ನದಿಗೆ ಬಿಡಲಾಯಿತು.
    ಬೆಳಿಗ್ಗೆ ೧೧.೧೫ರ ಸುಮಾರಿಗೆ ಜಲಾಶಯದಿಂದ ೪ ಕ್ರಸ್ಟ್ ಗೇಟ್‌ಗಳ ಮೂಲಕ ಸುಮಾರು ೧೬೦೦ ಕ್ಯೂಸೆಕ್ಸ್ ನೀರು ಹೊರ ಬಿಡಲಾಗುತ್ತಿದೆ. ಬಾಳೆಹೊನ್ನೂರು ಗೇಜ್ ಮಾಹಿತಿಯಂತೆ ಮಧ್ಯಾಹ್ನ ೧.೩೦ ಸುಮಾರಿಗೆ ಜಲಾಶಯದ ನೀರಿನ ಮಟ್ಟ ೧೮೪.೩ ಅಡಿ ಇದ್ದು, ೬೮೬೪ ಕ್ಯೂಸೆಕ್ಸ್ ಒಳಹರಿವು ಹೊಂದಿದೆ.
   ಜಲಾಶಯದ ವ್ಯಾಪ್ತಿಯಲ್ಲಿ ಮಳೆಯಾಗುತ್ತಿದ್ದು, ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಜಲಾಶಯಕ್ಕೆ ಹರಿದು ಬರುವ ನಿರೀಕ್ಷೆ ಇದೆ. ಈ ಹಿನ್ನಲೆಯಲ್ಲಿ ಯಾವುದೇ ಕ್ಷಣದಲ್ಲಿ ಹೊರ ಬಿಡುವ ನೀರಿನ ಪ್ರಮಾಣದಲ್ಲೂ ಏರಿಕೆಯಾಗುವ ಲಕ್ಷಣಗಳು ಕಂಡು ಬರುತ್ತಿದೆ.
   ಈಗಾಗಲೇ ತಾಲೂಕು ಆಡಳಿತ ನದಿ ಪಾತ್ರದ ಹಾಗು ತಗ್ಗು ಪ್ರದೇಶದ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಎಚ್ಚರಿಕೆ ನೀಡಿದ್ದು, ನದಿ ತಡದಲ್ಲಿ ಸಾರ್ವಜನಿಕರು, ಕುರಿ ಹಾಗು ದನಗಾಯಿಗಳು ತಿರುಗಾಡದಂತೆ ಸೂಚಿಸಲಾಗಿದೆ.



ಮಹಿಳಾ ಸಮಾಜದಿಂದ ಬಜರಂಗದಳ ಕೊರೋನಾ ವಾರಿಯರ್ಸ್‌ಗಳಿಗೆ ಸನ್ಮಾನ

ಕೊರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಉಚಿತವಾಗಿ ನೆರವೇರಿಸುವ ಮೂಲಕ ಮಾನವೀಯತೆ ಮೆರೆಯುತ್ತಿರುವ ಬಜರಂಗದಳ ಕೊರೋನಾ ವಾರಿಯರ್ಸ್‌ಗಳನ್ನು ಭದ್ರಾವತಿ ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
     ಭದ್ರಾವತಿ, ಆ. ೫: ಕೊರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಉಚಿತವಾಗಿ ನೆರವೇರಿಸುವ ಮೂಲಕ ಮಾನವೀಯತೆ ಮೆರೆಯುತ್ತಿರುವ ಬಜರಂಗದಳ ಕೊರೋನಾ ವಾರಿಯರ್ಸ್‌ಗಳನ್ನು ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
    ಕೊರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ನೆರವೇರಿಸಲು ಕುಟುಂಬ ವರ್ಗದವರೇ ಹಿಂದೆ ಮುಂದೆ ನೋಡುವ ಸಂದರ್ಭದಲ್ಲಿ ಅದರಲ್ಲೂ ಉಚಿತವಾಗಿ ಮೃತ ದೇಹಗಳ ಅಂತ್ಯಸಂಸ್ಕಾರ ನೆರವೇರಿಸುವ ಮೂಲಕ ಸಂಕಷ್ಟದ ಸಮಯದಲ್ಲಿ ನೆರವಾಗಿ ನಿಂತಿರುವ ಬಜರಂಗದಳ ಕಾರ್ಯಕರ್ತರ ಸೇವೆ ಶ್ಲಾಘನೀಯವಾಗಿದ್ದು, ಈ ಯುವಕರ ಸೇವೆಯನ್ನು ನಗರದ ವಿವಿಧ ಸಂಘ-ಸಂಸ್ಥೆಗಳು ಗುರುತಿಸುವ ಮೂಲಕ ಸನ್ಮಾನಿಸಿ ಗೌರವಿಸುತ್ತಿವೆ. ಇದೆ ರೀತಿ ಮಹಿಳಾ ಸೇವಾ ಸಮಾಜದ ವತಿಯಿಂದ ಸಹ ಸನ್ಮಾನಿಸಿ ಗೌರವಿಸಲಾಯಿತು.
    ಸಮಾಜದ ಸಂಸ್ಥಾಪಕಿ ರತ್ನಮ್ಮ ಶ್ರೀನಿವಾಸ ಮೂರ್ತಿ ಹಾಗು ಗೌರವಾಧ್ಯಕ್ಷೆ ವಸುಧಾ ಮುಕುಂದ್ ಅವರಿಗೆ ಶ್ರದ್ದಾಂಜಲಿ ಸಲ್ಲಿಸುವ ಮೂಲಕ ಅವರ ಸೇವೆಯನ್ನು ಸ್ಮರಿಸಲಾಯಿತು.
     ಸಂಘದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಶೋಭಾ ಗಂಗಾರಾಜ್, ಖಜಾಂಚಿ ಜಯಂತಿ ನಾಗರಾಜ್ ಶೇಟ್, ಕಮಲಕುಮಾರಿ, ಇಂದಿರಾ ರಮೇಶ್, ಲೋಹಿತಾ ನಂಜಪ್ಪ, ಶಾರದ ಶ್ರೀನಿವಾಸ್, ಡಾ. ವೀಣಾ ಭಟ್, ರೈಲ್ವೆ ಸಲಹಾ ಸಮಿತಿ ಸದಸ್ಯ ಎನ್. ವಿಶ್ವನಾಥರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.