Tuesday, August 31, 2021

ಅಪ್ಪಾಜಿ ಪುಣ್ಯ ಸ್ಮರಣೆ ಅಂಗವಾಗಿ ಸೆ.೨ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಭದ್ರಾವತಿ, ಆ. ೩೧: ಮಾಜಿ ಶಾಸಕ ಎಂ.ಜೆ ಅಪ್ಪಾಜಿಯವರ ಮೊದಲ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಸೆ.೨ರಂದು ಬೆಳಿಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೩ ಗಂಟೆ ವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಗರಸಭೆ ವಾರ್ಡ್ ನಂ.೩೧ರ ಜಿಂಕ್‌ಲೈನ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
    ವಾರ್ಡ್ ನಗರಸಭಾ ಸದಸ್ಯ ಪಲ್ಲವಿ ಎಸ್ ದಿಲೀಪ್ ನೇತೃತ್ವದಲ್ಲಿ ಶಿವಮೊಗ್ಗ ಸುಬ್ಬಯ್ಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗು ತಾಲೂಕು ಸರ್ಕಾರಿ ಆಸ್ಪತ್ರೆ ಸಹಕಾರದೊಂದಿಗೆ ಶಿಬಿರ ಆಯೋಜಿಸಲಾಗಿದೆ.
    ಚರ್ಮ ವೈದ್ಯರು, ದಂತ ತಜ್ಞರು, ಸರ್ಜನ್, ಕಿವಿ, ಮೂಗು, ಗಂಟಲು, ಮಕ್ಕಳ ತಜ್ಞರು ಮತ್ತು ಕಣ್ಣಿನ ತಜ್ಞರು ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ. ಆರೋಗ್ಯ ತಪಾಸಣೆ ಜೊತೆಗೆ ಉಚಿತವಾಗಿ ಇಸಿಜಿ, ರಕ್ತದೊತ್ತಡ ಮತ್ತು ಮಧುಮೇಹ ಪರೀಕ್ಷೆ ಸಹನಡೆಸಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.

ನಗರಸಭೆ ವಾರ್ಡ್ ನಂ.೨೯ ಚುನಾವಣೆ : ಬಿಜೆಪಿಯಿಂದ ವ್ಯಾಪಕ ಪ್ರಚಾರ

ಭದ್ರಾವತಿ ನಗರಸಭೆ ವಾರ್ಡ್ ನಂ.೨೯ರ ಚುನಾವಣೆ ಪ್ರಚಾರದ ಭರಾಟೆ ಹೆಚ್ಚಾಗಿದ್ದು, ಮಂಗಳವಾರ ಬಿಜೆಪಿ ಅಭ್ಯರ್ಥಿ ರಮಾ ವೆಂಕಟೇಶ್ ಪರವಾಗಿ ಜಿಲ್ಲಾ ಹಾಗು ಸ್ಥಳೀಯ ಮುಖಂಡರು ಮನೆ ಮನೆಗೆ ತೆರಳಿ ವ್ಯಾಪಕ ಪ್ರಚಾರ ನಡೆಸಿದರು.
       ಭದ್ರಾವತಿ, ಆ. ೩೧: ನಗರಸಭೆ ವಾರ್ಡ್ ನಂ.೨೯ರ ಚುನಾವಣೆ ಪ್ರಚಾರದ ಭರಾಟೆ ಹೆಚ್ಚಾಗಿದ್ದು, ಮಂಗಳವಾರ ಬಿಜೆಪಿ ಅಭ್ಯರ್ಥಿ ರಮಾ ವೆಂಕಟೇಶ್ ಪರವಾಗಿ ಜಿಲ್ಲಾ ಹಾಗು ಸ್ಥಳೀಯ ಮುಖಂಡರು ಮನೆ ಮನೆಗೆ ತೆರಳಿ ವ್ಯಾಪಕ ಪ್ರಚಾರ ನಡೆಸಿದರು.
    ಬಹಿರಂಗ ಪ್ರಚಾರಕ್ಕೆ ೧ ದಿನ ಮಾತ್ರ ಬಾಕಿ ಉಳಿದಿದೆ. ಈ ಹಿನ್ನಲೆಯಲ್ಲಿ ವಿವಿಧ ಪಕ್ಷಗಳ ಪ್ರಮುಖರು ತಮ್ಮ ಅಭ್ಯರ್ಥಿಗಳ ಪರವಾರ ಪ್ರಚಾರಕ್ಕೆ ಮುಂದಾಗಿದ್ದಾರೆ.
    ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್. ದತ್ತಾತ್ರಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಜಿ. ಧರ್ಮಪ್ರಸಾದ್, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಆರ್.ಎಸ್ ಶೋಭಾ, ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಪ್ರಧಾನ ಕಾರ್ಯದರ್ಶಿ ಚನ್ನೇಶ್, ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಪಾಟೀಲ್, ಯುವ ಘಟಕದ ಅಧ್ಯಕ್ಷ ವಿಜಯ್‌ರಾಜ್, ಪ್ರಮುಖರಾದ ಸೂಡಾ ಸದಸ್ಯರಾದ ವಿ. ಕದಿರೇಶ್, ರಾಮಲಿಂಗಯ್ಯ, ಭೋವಿ ಅಭಿವೃದ್ಧಿ ನಿಗಮದ ನಿರ್ದೇಶಕ ಜಿ. ಆನಂದಕುಮಾರ್, ಹಟ್ಟಿ ಚಿನ್ನದ ಗಣಿ ಕಂಪನಿ ಆಡಳಿತ ಮಂಡಳಿ ನಿರ್ದೇಶಕ ಕೂಡ್ಲಿಗೆರೆ ಹಾಲೇಶ್, ಜನ್ನಾಪುರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ನವೀನ್‌ಕುಮಾರ್, ಎಂ. ಮಂಜುನಾಥ್, ಶಿವಕುಮಾರ್, ಮಣಿ, ಮಂಜಪ್ಪ, ನಂಜಪ್ಪ, ಹೇಮಾವತಿ ವಿಶ್ವನಾಥ್, ಮಂಜುಳ, ಮಲ್ಲೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸಾಮಾಜಿಕ ಜಾಲತಾಣದ ಗ್ರಾಮಾಂತರ ಅಧ್ಯಕ್ಷರಾಗಿ ಪ್ರವೀಣ್ ನಾಯಕ್

ಭದ್ರಾವತಿ ತಾಲೂಕಿನ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ಪ್ರವೀಣ್‌ನಾಯಕ್ ನೇಮಕಗೊಂಡಿದ್ದು, ಆದೇಶ ಪತ್ರವನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್ ಸುಂದರೇಶ್ ವಿತರಿಸಿದರು.
    ಭದ್ರಾವತಿ, ಆ. ೩೧: ತಾಲೂಕಿನ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ಪ್ರವೀಣ್‌ನಾಯಕ್ ನೇಮಕಗೊಂಡಿದ್ದಾರೆ.
    ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಎಸ್.ಆರ್ ಸೌಗಂಧಿಕಾ ಅವರ ಸೂಚನೆ ಮೇರೆಗೆ ಜಿಲ್ಲಾಧ್ಯಕ್ಷ ಎನ್.ಡಿ ಪ್ರವೀಣ್‌ಕುಮಾರ್ ನೇಮಕ ಆದೇಶ ಹೊರಡಿಸಿದ್ದು, ಪಕ್ಷದ ತತ್ವ, ಸಿದ್ದಾಂತಗಳಿಗೆ ಬದ್ಧರಾಗಿ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಜೊತೆಗೆ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಬೇಕೆಂದು ಆದೇಶ ಪತ್ರದಲ್ಲಿ ಸೂಚಿಸಿದ್ದಾರೆ.
    ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್ ಸುಂದರೇಶ್ ಆದೇಶ ಪತ್ರವನ್ನು ಪ್ರವೀಣ್‌ನಾಯಕ್ ಅವರಿಗೆ ವಿತರಿಸಿದರು. ಕೆಪಿಸಿಸಿ ಸಾಮಾಜಿಕ ಜಾಲತಾಣದ ತಾಲೂಕು ಅಧ್ಯಕ್ಷ ಸದಾಶಿವಮೂರ್ತಿ, ಉಪಾಧ್ಯಕ್ಷ ವಿನೋದ್, ಗ್ರಾಮಾಂತರ ಕಾರ್ಯದರ್ಶಿ ಹೇಮಾ ನಾಯಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.