ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಬುಧವಾರ ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಅವರ ಜನ್ಮದಿನ ಆಚರಿಸಲಾಯಿತು.
ಭದ್ರಾವತಿ, ಸೆ. ೧೫: ಎರಡು ಬೃಹತ್ ಕಾರ್ಖಾನೆಗಳ ಸ್ಥಾಪನೆಯೊಂದಿಗೆ ಲಕ್ಷಾಂತರ ಜನರಿಗೆ ಅನ್ನದಾತರಾಗಿರುವ ಮೂಲಕ ನಗರದ ಬೆಳವಣಿಗೆಗೆ ಕಾರಣಕರ್ತರಾಗಿರುವ, ಜಗತ್ತಿನ ಶ್ರೇಷ್ಠ ತಂತ್ರಜ್ಞಾನಿಗಳಲ್ಲಿ ಒಬ್ಬರಾಗಿರುವ, ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಅವರ ಜನ್ಮದಿನ ಬುಧವಾರ ವಿವಿಧೆಡೆ ಅದ್ದೂರಿಯಾಗಿ ಆಚರಿಸಲಾಯಿತು.
ವಿಐಎಸ್ಎಲ್ ಕಾರ್ಖಾನೆಯಲ್ಲಿ ಜನ್ಮದಿನ ಆಚರಣೆ :
ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಆಡಳಿತ ಕಛೇರಿ ಮುಂಭಾಗದಲ್ಲಿರುವ ಸರ್.ಎಂ ವಿಶ್ವೇಶ್ವರಾಯ ಅವರ ಪ್ರತಿಮೆ ಮಾಲಾರ್ಪಣೆ ಮಾಡುವ ಮೂಲಕ ಜನ್ಮದಿನ ಆಚರಿಸಲಾಯಿತು.
ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಸುರಜಿತ್ ಮಿಶ್ರ ಅವರು ಕಾರ್ಖಾನೆಗೆ ಸರ್.ಎಂ.ವಿ ಅವರ ಕೊಡುಗೆಯನ್ನು ಸ್ಮರಿಸುವ ಮೂಲಕ ಗೌರವ ವಂದನೆ ಸಲ್ಲಿಸಿದರು.
ಮುಖ್ಯ ಮಹಾಪ್ರಬಂಧಕ(ಆಪರೇಷನ್ಸ್) ಕೆ.ಎಸ್ ಸುರೇಶ್, ಮಹಾಪ್ರಬಂಧಕ ಪ್ರಭಾರಿ (ಸಿಬ್ಬಂದಿ ಮತ್ತು ಆಡಳಿತ) ಪಿ.ಪಿ. ಚಕ್ರವರ್ತಿ, ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ್, ಅಧಿಕಾರಿಗಳ ಸಂಘದ ಉಪಾಧ್ಯಕ್ಷ ನವೀನ್ ರಾಹುಲ್ ಹಾಗು ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಕಾಯಂ ಹಾಗು ಗುತ್ತಿಗೆ ಕಾರ್ಮಿಕರು ಪಾಲ್ಗೊಂಡಿದ್ದರು. ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಭದ್ರಾವತಿ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಬುಧವಾರ ಭಾರತರತ್ನಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಅವರ ಜನ್ಮದಿನ ಆಚರಿಸಲಾಯಿತು.
ಸರ್.ಎಂ.ವಿ ಕಾಲೇಜಿನಲ್ಲಿ ಜನ್ಮದಿನ ಆಚರಣೆ :
ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ಸರ್.ಎಂ ವಿಶ್ವೇಶ್ವರಾಯ ಅವರ ಜನ್ಮದಿನ ಆಚರಿಸಲಾಯಿತು.
ಕಾಲೇಜಿನ ಆವರಣದಲ್ಲಿರುವ ಸರ್.ಎಂ ವಿಶ್ವೇಶ್ವರಾಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ.ಎಂ.ಜಿ ಉಮಾಶಂಕರ್ ಮಾತನಾಡಿ, ಸರ್.ಎಂ.ವಿ ಅವರ ಸಾಧನೆಗಳು, ಸಮಾಜಕ್ಕೆ ಅವರು ನೀಡಿರುವ ಕೊಡುಗೆಗಳು ಹಾಗು ಅವರ ಆದರ್ಶತನಗಳ ಕುರಿತು ಮಾಹಿತಿ ನೀಡಿದರು. ಕಾಲೇಜಿನ ಬೋಧಕ ಹಾಗು ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಭದ್ರಾವತಿ ವಿಐಎಸ್ಎಲ್ ಅತಿಥಿಗೃಹದಲ್ಲಿ ಬುಧವಾರ ಭಾರತರತ್ನಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಅವರ ಜನ್ಮದಿನ ಆಚರಿಸಲಾಯಿತು.
ವಿಐಎಸ್ಎಲ್ ಅತಿಥಿ ಗೃಹದಲ್ಲಿ ಜನ್ಮದಿನ ಆಚರಣೆ:
ಪ್ರತಿವರ್ಷದಂತೆ ಈ ಬಾರಿ ಸಹ ವಿಐಎಸ್ಎಲ್ ಅತಿಥಿ ಗೃಹದಲ್ಲಿ ಸರ್.ಎಂ ವಿಶ್ವೇಶ್ವರಾಯ ಅವರ ಜನ್ಮದಿನ ಆಚರಿಸಲಾಯಿತು. ಸರ್.ಎಂ.ವಿ ಭಾವಚಿತ್ರಕ್ಕೆ ಕಾರ್ಖಾನೆಯ ಮಹಾಪ್ರಬಂಧಕ ಪ್ರಭಾರಿ(ಸಿಬ್ಬಂದಿ ಮತ್ತು ಆಡಳಿತ) ಪಿ.ಪಿ ಚಕ್ರವರ್ತಿ ಪುಷ್ಪ ನಮನ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
ಅಥಿತಿ ಗೃಹದ ಅಧಿಕಾರಿಗಳು, ಸಿಬ್ಬಂದಿಗಳು ಸಿಹಿ ಹಂಚಿ ಸಂಭ್ರಮಿಸಿದರು. ಅಧಿಕಾರಿ ಚಂದ್ರಕಾಂತ್, ಸಿಬ್ಬಂದಿ ಮೋಹನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ರಾಮ್ ಸೇನಾ ಕರ್ನಾಟಕ ಸಂಘಟನೆ ಭದ್ರಾವತಿ ತಾಲೂಕು ಘಟಕ ಹಾಗು ಶ್ರೀ ಲಕ್ಷ್ಮೀನರಸಿಂಹ ಘಟಕದ ವತಿಯಿಂದ ಈ ಬಾರಿ ವಿಶೇಷ ಸರ್.ಎಂ ವಿಶ್ವೇಶ್ವರಾಯ ಅವರ ಜನ್ಮದಿನ ಆಚರಿಸಲಾಯಿತು.
ರಾಮ್ ಸೇನಾ ಕರ್ನಾಟಕ ಸಂಘಟನೆ ವತಿಯಿಂದ ಜನ್ಮದಿನ ಆಚರಣೆ :
ನಗರದ ರಾಮ್ ಸೇನಾ ಕರ್ನಾಟಕ ಸಂಘಟನೆ ತಾಲೂಕು ಘಟಕ ಹಾಗು ಶ್ರೀ ಲಕ್ಷ್ಮೀನರಸಿಂಹ ಘಟಕದ ವತಿಯಿಂದ ಈ ಬಾರಿ ವಿಶೇಷ ಸರ್.ಎಂ ವಿಶ್ವೇಶ್ವರಾಯ ಅವರ ಜನ್ಮದಿನ ಆಚರಿಸಲಾಯಿತು.
ವಿಐಎಸ್ಎಲ್ ಕಾರ್ಖಾನೆ ಒಳಭಾಗದಲ್ಲಿರುವ ಸರ್.ಎಂ.ವಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಸಿಕೊಂಡು ಅಗತ್ಯವಿರುವ ಬಂಡವಾಳ ಹೂಡುವ ಮೂಲಕ ಅಭಿವೃದ್ಧಿಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಯಿತು.
ಸಂಘಟನೆಯ ತಾಲೂಕು ಅಧ್ಯಕ್ಷ ಸಚಿನ್ ವರ್ಣೇಕರ್, ಪ್ರಮುಖರಾದ ಅವಿನಾಶ್, ರಮೇಶ್, ಪ್ರವೀಣ್, ಕೃಷ್ಣ ಜೋಗಿ, ಪವನ್ಕುಮಾರ್, ಬಿಳಕ್ಕಿ ಪ್ರಕಾಶ್, ಪ್ರಭು, ಯೋಗೇಶ್, ಸುನಿಲ್ಕುಮಾರ್, ಕಾರ್ತಿಕ್ ಮತ್ತು ಸುದರ್ಶನ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಭದ್ರಾವತಿ ನ್ಯೂಟೌನ್ ವಿಐಎಸ್ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದಲ್ಲಿ ಬುಧವಾರ ಸರ್.ಎಂ ವಿಶ್ವೇಶ್ವರಾಯ ಅವರ ಜನ್ಮದಿನ ಆಚರಿಸಲಾಯಿತು.
ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದಲ್ಲಿ ಜನ್ಮದಿನ ಆಚರಣೆ :
ನಗರದ ನ್ಯೂಟೌನ್ನಲ್ಲಿರುವ ವಿಐಎಸ್ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದಲ್ಲಿ ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಜನ್ಮದಿನ ಸರಳವಾಗಿ ಆಚರಿಸಲಾಯಿತು.
ಪ್ರತಿವರ್ಷ ನಿವೃತ್ತ ಕಾರ್ಮಿಕರು ಸರ್.ಎಂ.ವಿ ಜನ್ಮದಿನ ವಿಶೇಷವಾಗಿ ಅದ್ದೂರಿಯಾಗಿ ಆಚರಿಸಿಕೊಂಡು ಬರುತ್ತಿದ್ದಾರೆ. ಸರ್.ಎಂ.ವಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸಲಾಯಿತು. ಸಂಘದ ಅಧ್ಯಕ್ಷ, ಸೂಡಾ ಸದಸ್ಯ ರಾಮಲಿಂಗಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಘದ ಪದಾಧಿಕಾರಿಗಳು, ನಿವೃತ್ತ ಕಾರ್ಮಿಕರು ಪಾಲ್ಗೊಂಡಿದ್ದರು.