ಅಧ್ಯಕ್ಷರಾಗಿ ಅಂತರಗಂಗೆ ಗ್ರಾಮ ಪಂಚಾಯಿತಿ ಸದಸ್ಯ ಬಿ. ನಾಗೇಶ್ ನೇಮಕ
ಬಿ. ನಾಗೇಶ್
ಭದ್ರಾವತಿ, ಸೆ. ೨೮: ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಗರ್ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಗೆ ಹೊಸದಾಗಿ ೫ ಮಂದಿ ಸದಸ್ಯರನ್ನು ಸರ್ಕಾರ ನಾಮನಿರ್ದೇಶನಗೊಳಿಸಿ ಆದೇಶ ಹೊರಡಿಸಿದೆ.
ಅಂತರಗಂಗೆ ಗ್ರಾಮದ ನಿವಾಸಿ, ಗ್ರಾಮ ಪಂಚಾಯಿತಿ ಸದಸ್ಯ ಬಿ. ನಾಗೇಶ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿದ್ದು, ಉಳಿದಂತೆ ಒಕ್ಕಲಿಗ ಸಮಾಜದ ಹಿರಿಯ ಮುಖಂಡ, ಅಪ್ಪರ್ಹುತ್ತಾ ನಿವಾಸಿ ಎಚ್. ಕರಿಗೌಡ, ಭದ್ರಾಕಾಲೋನಿ ನಿವಾಸಿ, ಪರಿಶಿಷ್ಟ ಜಾತಿಯ ಮಾಲಾ ಧರ್ಮನಾಯ್ಕ್ ಮತ್ತು ಗುಡ್ಡದನೇರಲೆಕೆರೆ ಗ್ರಾಮದ ನಿವಾಸಿ ಸರಸ್ವತಿ ಅವರನ್ನು ಸದಸ್ಯರನ್ನಾಗಿ ಹಾಗು ತಾಲೂಕು ದಂಡಾಧಿಕಾರಿ ತಹಸೀಲ್ದಾರ್ ಅವರನ್ನು ಸದಸ್ಯ ಕಾರ್ಯದರ್ಶಿಯಾಗಿ ನೇಮಕಗೊಳಿಸಿ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಿ. ಬಲರಾಮ್ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ಸರ್ಕಾರ ೨೪.೦೧.೨೦೨೦ರಲ್ಲಿ ನಾಮನಿರ್ದೇಶನಗೊಳಿಸಿದ್ದ ಸದಸ್ಯರ ಸದಸ್ಯತ್ವ ರದ್ದುಪಡಿಸಿ ಇದೀಗ ಹೊಸದಾಗಿ ಸದಸ್ಯರನ್ನು ನೇಮಕಗೊಳಿಸಿದೆ.