Thursday, October 7, 2021

ನಾಡಹಬ್ಬ ದಸರಾ ಸಕಾರಾತ್ಮಕ ಸಮಾಜ ನಿರ್ಮಾಣಕ್ಕೆ ನಾಂದಿಯಾಗಲಿ : ಡಾ. ಕೃಷ್ಣ ಎಸ್. ಭಟ್

ಭದ್ರಾವತಿ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಉದ್ಘಾಟನೆಗೂ ಮೊದಲು ತಾಯಿ ಚಾಮುಂಡೇಶ್ವರಿಗೆ ವೈದ್ಯ ಸಾಹಿತಿ ಡಾ. ಕೃಷ್ಣ ಎಸ್. ಭಟ್ ವಿಶೇಷ ಪೂಜೆ ಸಲ್ಲಿಸಿದರು.
    ಭದ್ರಾವತಿ, ಅ. ೭: ಸುಮಾರು ೪೧೧ ವರ್ಷಗಳ ಇತಿಹಾಸ ಹೊಂದಿರುವ ನಾಡಹಬ್ಬ ದಸರಾ ಹಲವು ಧಾರ್ಮಿಕ ಆಚರಣೆಗಳೊಂದಿಗೆ ಸಾಂಸ್ಕೃತಿಕ ಕಲೆಗಳು, ಲಲಿತಕಲೆಗಳನ್ನು ಪ್ರೋತ್ಸಾಹಿಸುವ ಮೂಲಕ ಜನರಿಗೆ ಸಂಭ್ರಮವನ್ನುಂಟುಮಾಡುತ್ತಿದೆ. ಭವ್ಯ ಪರಂಪರೆ ಹೊಂದಿರುವ ಈ ಹಬ್ಬ ಸಕಾರಾತ್ಮಕ ಸಮಾಜ ನಿರ್ಮಾಣಕ್ಕೆ ನಾಂದಿಯಾಗಲಿ ಎಂದು ವೈದ್ಯ ಸಾಹಿತಿ ಡಾ. ಕೃಷ್ಣ ಎಸ್ ಭಟ್ ತಿಳಿಸಿದರು.
    ಅವರು ಗುರುವಾರ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನಾಡಹಬ್ಬ ದಸರಾ ಉದ್ಘಾಟಿಸಿ ಮಾತನಾಡಿದರು. ಒಂದೆಡೆ ಶಕ್ತಿ ದೇವತೆಯನ್ನು ಆರಾಧಿಸುವ ಮೂಲಕ ಶಕ್ತಿ ಪಡೆಯುವ ಆಚರಣೆ ಇದಾಗಿದ್ದು, ಪ್ರಪಂಚದಲ್ಲಿ ಭಾರತದಲ್ಲಿ ಮಾತ್ರ ಶಕ್ತಿ ದೇವತೆಗಳನ್ನು ಆರಾಧಿಸಿಕೊಂಡು ಬರಲಾಗುತ್ತಿದೆ. ಇದೊಂದು ವಿಶೇಷವೂ ಹೌದು. ಕಳೆದ ಸುಮಾರು ೨ ವರ್ಷಗಳಿಂದ ಕೊರೋನಾ ಕರಿನೆರಳು ಎಲ್ಲೆಡೆ ಆವರಿಸಿದ್ದು,  ಶರವನ್ನವರಾತ್ರಿ ಉತ್ಸವ ತನ್ನ ಸಂಭ್ರಮ ಕಳೆದುಕೊಳ್ಳುವಂತಾಗಿದೆ. ದುಷ್ಟ ಶಕ್ತಿಗಳನ್ನು ಸಂಹಾರ ಮಾಡುವ ನಿಟ್ಟಿನಲ್ಲಿ ನಾವೆಲ್ಲರೂ ತಾಯಿ ಶ್ರೀ ಚಾಮುಂಡೇಶ್ವರಿಯನ್ನು ಪ್ರಾರ್ಥಿಸುವ ಮೂಲಕ ನಮ್ಮ ಕಷ್ಟಗಳನ್ನು ನಿವಾರಿಣೆ ಮಾಡಿಕೊಳ್ಳೋಣ ಎಂದರು.
    ರಾಧಾ ಎಸ್. ಭಟ್, ನಗರಸಭಾ ಸದಸ್ಯರಾದ ಬಿ.ಕೆ.ಮೋಹನ್, ವಿ. ಕದಿರೇಶ್, ಶಶಿಕಲಾ ನಾರಾಯಣಪ್ಪ, ಆರ್. ಶ್ರೇಯಸ್, ಅನುಪಮಾ ಚನ್ನೇಶ್, ಬಿ.ಎಂ ಮಂಜುನಾಥ್, ಚನ್ನಪ್ಪ, ಕಾಂತರಾಜ್, ಆರ್. ನಾಗರತ್ನ ಅನಿಲ್‌ಕುಮಾರ್, ಮಂಜುಳ ಸುಬ್ಬಣ್ಣ, ಮಣಿ ಎಎನ್‌ಎಸ್, ಸುದೀಪ್‌ಕುಮಾರ್, ಆರ್. ಮೋಹನ್ ಕುಮಾರ್, ಸೈಯದ್ ರಿಯಾಜ್, ಅನುಸುಧಾ ಮೋಹನ್, ಲತಾ ಚಂದ್ರಶೇಖರ್, ಸವಿತಾ ಉಮೇಶ್, ಪಲ್ಲವಿ ದಿಲೀಪ್, ಸರ್ವಮಂಗಳ ಭೈರಪ್ಪ, ಹಾ. ರಾಮಪ್ಪ, ನರಸಿಂಹಾಚಾರ್, ರಮಾಕಾಂತ್, ಕೃಷ್ಣಮೂರ್ತಿ(ಕಾಯಿ ಗುಂಡಣ್ಣ), ಸಂತೋಷ್, ಪೌರಾಯುಕ್ತರು, ಅಧಿಕಾರಿ ಹಾಗು ಸಿಬ್ಬಂದಿ ವರ್ಗದವರು, ಪೌರಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಪೌರಕಾರ್ಮಿಕರು ಸೇರಿದಂತೆ ವಿವಿಧ ಸಂಸ್ಥೆಗಳ ಪ್ರಮುಖರು, ಗಣ್ಯರು ಪಾಲ್ಗೊಂಡಿದ್ದರು.

ಸಿದ್ದಲಿಂಗಯ್ಯರಿಗೆ ‘ಸೌರಭ ರತ್ನ’ ರಾಜ್ಯ ಪ್ರಶಸ್ತಿ

ಸಿದ್ದಲಿಂಗಯ್ಯ
    ಭದ್ರಾವತಿ, ಅ. ೭: ಸಿದ್ದಾರೂಢನಗರದ ನಿವಾಸಿ, ಜೇಡಿಕಟ್ಟೆ ಶ್ರೀ ಮರುಳಸಿದ್ದೇಶ್ವರ ಜನಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯ ಅವರಿಗೆ ಕಥಾಬಿಂದು ೨೦೨೧ರ 'ಸೌರಭ ರತ್ನ' ರಾಜ್ಯ ಪ್ರಶಸ್ತಿ ಲಭಿಸಿದೆ.
    ಸಿದ್ದಲಿಂಗಯ್ಯರವರು ಹಲವಾರು ವರ್ಷಗಳಿಂದ ಧಾರ್ಮಿಕ, ಸಾಮಾಜಿಕ ಸೇವಾಕಾರ್ಯಗಳಲ್ಲಿ ಗುರುತಿಸಿಕೊಂಡಿದ್ದಾರೆ. ಹಲವು ವರ್ಷಗಳ ಕಾಲ ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಜೊತೆಗೆ ಕರ್ನಾಟಕ ರಾಜ್ಯ ಪಡಿತರ ವಿತರಕರ ಸಂಘದ ತಾಲೂಕು ಶಾಖೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಜೊತೆಗೆ ಮಠಮಂದಿರಗಳು, ವಿವಿಧ ಸಂಘ-ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮಗಳಲ್ಲಿ ಸ್ವಯಂ ಸೇವಕರಾಗಿ ಪಾಲ್ಗೊಳ್ಳುವ ಮೂಲಕ ಚಿರಪರಿಚಿತರಾಗಿದ್ದಾರೆ.
    ಇವರ ಸೇವೆಯನ್ನು ಗುರುತಿಸಿ ಇದೀಗ ಕಥಾಬಿಂದು ೨೦೨೧ರ 'ಸೌರಭ ರತ್ನ' ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಅ.೧೫ರಂದು ಮಂಗಳೂರಿನ ತುಳು ಭವನದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ನಾಡಹಬ್ಬ ದಸರಾ : ವೈದ್ಯ ಸಾಹಿತಿ ಡಾ. ಕೃಷ್ಣ ಎಸ್ ಭಟ್ ಉದ್ಘಾಟನೆ

ಪ್ರತಿ ವರ್ಷದಂತೆ ಈ ಬಾರಿ ಸಹ ಭದ್ರಾವತಿ ನಗರಸಭೆ ವತಿಯಿಂದ ೯ ದಿನಗಳ ಕಾಲ ನಾಡಹಬ್ಬ ದಸರಾ ಆಚರಿಸಲಾಗುತ್ತಿದ್ದು, ಸಾಹಿತಿಗಳು, ವೈದ್ಯರು ಆದ ಡಾ. ಕೃಷ್ಣ ಎಸ್ ಭಟ್ ಗುರುವಾರ ಹಳೇನಗರದ ಶ್ರೀ ಹಳದಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ದಸರಾ ಉದ್ಘಾಟಿಸಿದರು.
    ಭದ್ರಾವತಿ, ಅ. ೭: ಪ್ರತಿ ವರ್ಷದಂತೆ ಈ ಬಾರಿ ಸಹ ನಗರಸಭೆ ವತಿಯಿಂದ ೯ ದಿನಗಳ ಕಾಲ ನಾಡಹಬ್ಬ ದಸರಾ ಆಚರಿಸಲಾಗುತ್ತಿದ್ದು, ಸಾಹಿತಿಗಳು, ವೈದ್ಯರು ಆದ ಡಾ. ಕೃಷ್ಣ ಎಸ್ ಭಟ್ ಗುರುವಾರ ಹಳೇನಗರದ ಶ್ರೀ ಹಳದಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ದಸರಾ ಉದ್ಘಾಟಿಸಿದರು.
    ಮಧ್ಯಾಹ್ನ ಸುಮಾರು ೧೨ ಗಂಟೆಗೆ ತಾಯಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಎಲ್ಲರಿಗೂ ಶುಭ ಕೋರಿದರು. ಇದಕ್ಕೂ ಮೊದಲು ನಗರಸಭೆ ಆಡಳಿತ ಪರವಾಗಿ ಪೌರಾಯುಕ್ತ ಕೆ. ಪರಮೇಶ್, ಕಂದಾಯಾಧಿಕಾರಿ ಎಂ.ಎಸ್ ರಾಜ್‌ಕುಮಾರ್, ಸಹಾಯಕ ಕಾರ್ಯಪಾಲ ಅಭಿಯಂತರ ಶ್ರೀರಂಗರಾಜಪುರೆ, ಪರಿಸರ ಅಭಿಯಂತರ ಪ್ರಭಾಕರ್, ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ್ ಹಾಗು ಸಿಬ್ಬಂದಿ ವರ್ಗದವರು, ನಗರಸಭೆ ಸದಸ್ಯರು ಸೇರಿದಂತೆ ಇನ್ನಿತರರು ಕೃಷ್ಣ ಎಸ್ ಭಟ್ ಅವರನ್ನು ಸ್ವಾಗತಿಸಿದರು.
    ದೇವಸ್ಥಾನದಲ್ಲಿ ನಗರಸಭೆ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ಶ್ರೀ ಚಾಮುಂಡೇಶ್ವರಿ ದೇವಿ ಹಾಗು ಶ್ರೀ ಹಳದಮ್ಮ ದೇವಿ ಸೇರಿದಂತೆ ಎಲ್ಲಾ ಪ್ರತಿಷ್ಠಾಪನಾ ಮೂರ್ತಿಗಳಿಗೂ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ದೇವಸ್ಥಾನ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಪೌರಕಾರ್ಮಿಕರು ಹಾಗು ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.


ಭದ್ರಾವತಿ ನಗರಸಭೆ ಆಡಳಿತ ಪರವಾಗಿ ಪೌರಾಯುಕ್ತ ಕೆ. ಪರಮೇಶ್, ಕಂದಾಯಾಧಿಕಾರಿ ಎಂ.ಎಸ್ ರಾಜ್‌ಕುಮಾರ್, ಸಹಾಯಕ ಕಾರ್ಯಪಾಲ ಅಭಿಯಂತರ ಶ್ರೀರಂಗರಾಜಪುರೆ, ಪರಿಸರ ಅಭಿಯಂತರ ಪ್ರಭಾಕರ್, ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ್ ಹಾಗು ಸಿಬ್ಬಂದಿ ವರ್ಗದವರು, ನಗರಸಭೆ ಸದಸ್ಯರು ಸೇರಿದಂತೆ ಇನ್ನಿತರರು ನಾಡಹಬ್ಬ ದಸರಾ ಉದ್ಘಾಟನೆಗೆ ಆಗಮಿಸಿದ ಕೃಷ್ಣ ಎಸ್ ಭಟ್ ಅವರನ್ನು ಸ್ವಾಗತಿಸಿದರು.