Sunday, November 14, 2021

ಅಪೇಕ್ಷ ಮಂಜುನಾಥ್‌ಗೆ ಕನ್ನಡ ಗಾರುಡಿಗ ಸೇವಾರತ್ನ ರಾಜ್ಯ ಪ್ರಶಸ್ತಿ

ಹೊಸದುರ್ಗದ ಕರ್ನಾಟಕ ರಾಜ್ಯ ವಿಸ್ಮಯ ಜಾದೂ ಪವಾಡ ಹಾಗು ಮೋಡಿ ಸಂಶೋಧನಾ ವೇದಿಕೆ ವತಿಯಿಂದ ಭದ್ರಾವತಿ ತಾಲೂಕು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಗೌರವಾಧ್ಯಕ್ಷ, ಜ್ಯೂನಿಯರ್ ವಿಷ್ಣುವರ್ಧನ್ ಅಪೇಕ್ಷ ಮಂಜುನಾಥ್ ಅವರಿಗೆ ಕನ್ನಡ ಗಾರುಡಿಗ ಸೇವಾರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
    ಭದ್ರಾವತಿ, ನ. ೧೪: ತಾಲೂಕು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಗೌರವಾಧ್ಯಕ್ಷ, ಜ್ಯೂನಿಯರ್ ವಿಷ್ಣುವರ್ಧನ್ ಅಪೇಕ್ಷ ಮಂಜುನಾಥ್ ಅವರಿಗೆ ಕನ್ನಡ ಗಾರುಡಿಗ ಸೇವಾರತ್ನ ರಾಜ್ಯ ಪ್ರಶಸ್ತಿ ಲಭಿಸಿದೆ.
    ಹೊಸದುರ್ಗದ ಕರ್ನಾಟಕ ರಾಜ್ಯ ವಿಸ್ಮಯ ಜಾದೂ ಪವಾಡ ಹಾಗು ಮೋಡಿ ಸಂಶೋಧನಾ ವೇದಿಕೆ ವತಿಯಿಂದ ಚಿತ್ರದುರ್ಗದ ತ.ರಾ.ಸು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ೧೫ನೇ ವರ್ಷದ ಸಾಧಕರ ಸಮ್ಮೇಳನ, ೬೬ನೇ ಕನ್ನಡ ರಾಜ್ಯೋತ್ಸವ ಹಾಗು ರಾಷ್ಟ್ರ, ರಾಜ್ಯಮಟ್ಟದ ಸಾಧಕರಿಗೆ ಸನ್ಮಾನ ಮತ್ತು ಪ್ರಶಸ್ತಿ ವಿತರಣೆ ಕಾರ್ಯಕ್ರಮದಲ್ಲಿ ಅಪೇಕ್ಷ ಮಂಜುನಾಥ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
    ಮಾದಾರ ಚನ್ನಯ್ಯ ಗುರು ಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿದಂತೆ ಶಾಖಾ ಮಠದ ಸ್ವಾಮೀಜಿಗಳು, ವೇದಿಕೆ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.