Friday, November 19, 2021

ಶ್ರೀ ಕ್ಷೇತ್ರ ಭದ್ರಗಿರಿಯಲ್ಲಿ ಕಾರ್ತಿಕ ದೀಪೋತ್ಸವ

ದೀಪ ಬೆಳಗಿಸಿದ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ ಭಾನುಪ್ರಕಾಶ್


ಪ್ರತಿ ವರ್ಷದಂತೆ ಈ ಬಾರಿ ಸಹ ಭದ್ರಾವತಿ ಸಮೀಪದ ಎಂ.ಸಿ ಹಳ್ಳಿ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ತಿಕ ದೀಪೋತ್ಸವದಲ್ಲಿ ಶುಕ್ರವಾರ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ ಭಾನುಪ್ರಕಾಶ್ ದೀಪ ಬೆಳಗಿಸಿದರು.
    ಭದ್ರಾವತಿ, ನ. ೧೯: ಪ್ರತಿ ವರ್ಷದಂತೆ ಈ ಬಾರಿ ಸಹ ಇಲ್ಲಿಗೆ ಸಮೀಪದ ಎಂ.ಸಿ ಹಳ್ಳಿ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ತಿಕ ದೀಪೋತ್ಸವದಲ್ಲಿ ಶುಕ್ರವಾರ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ ಭಾನುಪ್ರಕಾಶ್ ದೀಪ ಬೆಳಗಿಸಿದರು.
    ದೀಪೋತ್ಸವದ ಅಂಗವಾಗಿ ಶ್ರೀ ಕ್ಷೇತ್ರದ ಶ್ರೀ ಮುರುಗೇಶ್‌ ಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಆಚರಣೆಗಳು ಜರುಗಿದವು. ದೇವಸ್ಥಾನದ ಮೇಲ್ಭಾಗದಲ್ಲಿ ಸುಮಾರು ೧೦೦ ಲೀಟರ್‌ ಎಣ್ಣೆ ತುಂಬುವ ಸಾಮರ್ಥ್ಯದ ದೀಪವನ್ನು ವಿಶೇಷವಾಗಿ ಬೆಳಗಿಸುವುದು ಇಲ್ಲಿ ವಾಡಿಕೆಯಾಗಿದೆ. ಅಲ್ಲದೆ ಪಟಾಕಿ ಸಿಡ್ಡಿಮದ್ದುಗಳ ಪ್ರದರ್ಶನ ನಡೆಸಿ ಸಿಹಿ ಹಂಚುವ ಮೂಲಕ ಸಂಭ್ರಮಿಸಲಾಗುತ್ತದೆ.
     ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್, ದೇವಸ್ಥಾನ ಟ್ರಸ್ಟ್‌ ಸದಸ್ಯರಾದ ಭೂಪಾಲ್, ಶಿವಕುಮಾರ್, ದೊರಸ್ವಾಮಿ, ಸತ್ಯನಾರಾಯಣ, ಷಣ್ಮುಖ, ಸುಂದರ ಬಾಬು, ಮಂಜುನಾಥ್, ಬದ್ರಿ, ಆಡಳಿತ ಮಂಡಳಿಯ ಚಂದ್ರಘೋಷನ್, ಡಾ. ವಿಕ್ರಂ, ಕಾರ್ತಿಕ್ ಹಾಗೂ ತಮಿಳುನಾಡು, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ವಿವಿಧೆಡೆಗಳಿಂದ ಭಕ್ತಾಧಿಗಳು ಪಾಲ್ಗೊಂಡಿದ್ದರು.

ಸಹ ಶಿಕ್ಷಕ ಎಂ. ದಿವಾಕರ್‌ಗೆ ಕರುನಾಡ ಚೇತನ ಪ್ರಶಸ್ತಿ

ಹುಬ್ಬಳ್ಳಿ ಕರ್ನಾಟಕ ಸೋಷಿಯಲ್ ಕ್ಲಬ್, ಚೇತನ ಫೌಂಡೇಷನ್ ವತಿಯಿಂದ ಧಾರವಾಡದ ರಂಗಾಯಣ ಸುವರ್ಣ ಸಮುಚ್ಛಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಜ್ಯೋತ್ಸವ ಸಂಭ್ರಮ ಸಮಾರಂಭದಲ್ಲಿ ಭದ್ರಾವತಿ ಹಳೇನಗರದ ಸಂಚಿಯ ಹೊನ್ಮಮ್ಮ ಸರ್ಕಾರಿ ಬಾಲಿಕಾ ಪ್ರೌಢ ಶಾಲೆಯ ಸಹ ಶಿಕ್ಷಕ ಎಂ. ದಿವಾಕರ್‌ರವರಿಗೆ ಶಿಕ್ಷಣ ಕ್ಷೇತ್ರದಲ್ಲಿ ಸೇವೆಯನ್ನು ಗುರುತಿಸಿ ಕರುನಾಡ ಚೇತನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.  
    ಭದ್ರಾವತಿ, ನ. ೧೯ :  ಹುಬ್ಬಳ್ಳಿ ಕರ್ನಾಟಕ ಸೋಷಿಯಲ್ ಕ್ಲಬ್, ಚೇತನ ಫೌಂಡೇಷನ್ ವತಿಯಿಂದ ಧಾರವಾಡದ ರಂಗಾಯಣ ಸುವರ್ಣ ಸಮುಚ್ಛಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಜ್ಯೋತ್ಸವ ಸಂಭ್ರಮ ಸಮಾರಂಭದಲ್ಲಿ ಹಳೇನಗರದ ಸಂಚಿಯ ಹೊನ್ಮಮ್ಮ ಸರ್ಕಾರಿ ಬಾಲಿಕಾ ಪ್ರೌಢ ಶಾಲೆಯ ಸಹ ಶಿಕ್ಷಕ ಎಂ. ದಿವಾಕರ್‌ರವರಿಗೆ ಶಿಕ್ಷಣ ಕ್ಷೇತ್ರದಲ್ಲಿ ಸೇವೆಯನ್ನು ಗುರುತಿಸಿ ಕರುನಾಡ ಚೇತನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.  
    ಎಂ. ದಿವಾಕರ್‌ರವರು ೧೯೯೮ ರಿಂದ ಇಲ್ಲಿಯವರೆಗೂ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ವಿವಿಧ ಸುಮಾರು ೮೭ ತರಬೇತಿಗಳಿಗೆ ರಾಜ್ಯ, ಜಿಲ್ಲಾ ಹಾಗು ತಾಲೂಕು ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದಾರೆ. ಬಿ.ಎಸ್‌ ಮತ್ತು ಡಿ.ಎಡ್‌ ಕಾಲೇಜುಗ ಪ್ರಶಿಕ್ಷಣಾರ್ಥಿಗಳಿಗೆ ತರಬೇತಿ ನೀಡಿರುತ್ತಾರೆ. ೨೦೧೦ರಲ್ಲಿ ಕರ್ನಾಕ ಸರ್ಕಾರದ ಶಿಕ್ಷಕರ ಸಂಪನ್ಮೂಲ ಪುಸ್ತಕಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಹಾಗು ಶಿಕ್ಷಕನಾಗಿ ಕಾರ್ಯನಿರ್ವಹಿಸಿರುತ್ತಾರೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಭದ್ರಾವತಿ ಆಕಾಶವಾಣಿ ಕೇಂದ್ರದಿಂದ ಪ್ರಸಾರವಾಗುತ್ತಿರುವ ಸಹಾಯವಾಣಿ ಕಾರ್ಯಕ್ರಮದಲ್ಲಿ ೨೦೧೨ ರಿಂದ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ೧೯೯೮ರಿಂದ ರಿಂದ ೨೦೧೦ರ ವರೆಗೆ ಚಿಕ್ಕಬಳ್ಳಾಪುರ ಹಾಗು ಶಿವಮೊಗ್ಗ ಜಿಲ್ಲೆಗಳಲ್ಲಿ ಆಸಕ್ತ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕ್ಯಾಲಿಗ್ರಫಿ ತರಬೇತಿಯನ್ನು ಉಚಿತವಾಗಿ ನೀಡಿದ್ದಾರೆ. ೨೦೦೨ರಲ್ಲಿ ಚಿಂತಾಮಣಿ ತಾಲೂಕಿನ ಉತ್ತಮ ಶಿಕ್ಷಕ ಪ್ರಶಸ್ತಿ ಹಾಗು ೨೦೦೯ರಲ್ಲಿ ಭದ್ರಾವತಿಯಲ್ಲಿ ಗಣರಾಜ್ಯೋತ್ಸವ ಪ್ರಶಸ್ತಿ, ಇತ್ತೀಚೆಗೆ ಬೆಳಗಾವಿಯಲ್ಲಿ ವಿದ್ಯಾಭೂಷಣ ಹಾಗು ಗುರುಕುಲ ತಿಲಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಇವರ ಸಾಧನೆಯನ್ನು ಗುರುತಿಸಿ ಇದೀಗ ಕರುನಾಡ ಚೇತನ ಪ್ರಶಸ್ತಿಯನ್ನು ನೀಡಲಾಗಿದೆ.
     ಶಿವಮೊಗ್ಗ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್‌ ಸೋಮಶೇಖರಯ್ಯ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿದ್ದಬಸಪ್ಪ ಸೇರಿದಂತೆ ಇನ್ನಿತರ ಗಣ್ಯರು ಎಂ. ದಿವಾಕರ್‌ರನ್ನು ಅಭಿನಂದಿಸಿದ್ದಾರೆ.

ಕನ್ನಡ ರಾಜ್ಯೋತ್ಸವ, ನೃತ್ಯ ಸಂಭ್ರಮ : ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪುರಸ್ಕಾರ

ಭದ್ರಾವತಿಯಲ್ಲಿ ಅಪೇಕ್ಷ ನೃತ್ಯ ಕಲಾ ವೃಂದ ಹಾಗು ಶ್ರೀ ಬಸವೇಶ್ವರ ಧರ್ಮಸಂಸ್ಥೆ ವತಿಯಿಂದ ಶಿವಮೊಗ್ಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಸಿದ್ದರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಕನ್ನಡ ರಾಜ್ಯೋತ್ಸವ ಹಾಗು ಸಂಗೀತ ನೃತ್ಯ ಸಂಭ್ರಮ, ವಿವಿಧ ಕ್ಷೇತ್ರದ ಸಾಧಕರಿಗೆ ಪುರಸ್ಕಾರ ಮತ್ತು ಸನ್ಮಾನ ಮತ್ತು ಕನ್ನಡದಲ್ಲಿ ೧೨೫ಕ್ಕೆ ೧೨೫ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ಕುವರ/ಕುವರಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಆನೇಕೊಪ್ಪ ಸಂಜೀವಿನಿ ಹಿರಿಯ ನಾಗರೀಕರ ಆರೈಕೆ ಕೇಂದ್ರದ ಮುಖ್ಯಸ್ಥೆ ಸವಿತಾ ಅವರಿಗೆ ಸಮಾಜ ಸೇವಾ ರತ್ನ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಭದ್ರಾವತಿ, ನ. 19: ಅಪೇಕ್ಷ ನೃತ್ಯ ಕಲಾ ವೃಂದ ಹಾಗು ಶ್ರೀ ಬಸವೇಶ್ವರ ಧರ್ಮಸಂಸ್ಥೆ ವತಿಯಿಂದ ಶಿವಮೊಗ್ಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಸಿದ್ದರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಕನ್ನಡ ರಾಜ್ಯೋತ್ಸವ ಹಾಗು ಸಂಗೀತ ನೃತ್ಯ ಸಂಭ್ರಮ, ವಿವಿಧ ಕ್ಷೇತ್ರದ ಸಾಧಕರಿಗೆ ಪುರಸ್ಕಾರ ಮತ್ತು ಸನ್ಮಾನ ಮತ್ತು ಕನ್ನಡದಲ್ಲಿ ೧೨೫ಕ್ಕೆ ೧೨೫ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ಕುವರ/ಕುವರಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
    ಅಪೇಕ್ಷ ನೃತ್ಯ ಕಲಾ ವೃಂದದ ಅಧ್ಯಕ್ಷೆ ಭಾರತಿ ಗೋವಿಂದಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ,  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿದ್ದಬಸಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್. ಉಮೇಶ್, ಉದ್ಯಮಿ ಬಿ.ಕೆ ಜಗನ್ನಾಥ ಹಾಗು ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ಅಧ್ಯಕ್ಷ ಟ್ರಸ್ಟಿ ಶಿವಕುಮಾರ್ ಸೇರಿದಂತೆ ಇನ್ನಿತರರು ಕಾರ್ಯಕ್ರಮ ಉದ್ಘಾಟಿಸಿದರು.  ಅಪೇಕ್ಷ ನೃತ್ಯ ಕಲಾ ವೃಂದದ ಕಾರ್ಯದರ್ಶಿ ಅಪೇಕ್ಷ ಮಂಜುನಾಥ್ ಆಶಯ ನುಡಿಗಳನ್ನಾಡಿದರು.
    ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್, ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯ, ತುಳು ಕೂಟದ ಅಧ್ಯಕ್ಷ ಸುಧಾಕರ ಶೆಟ್ಟಿ, ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಎಲ್. ದೇವರಾಜ್, ಕರ್ನಾಟಕ ರಾಜ್ಯ ಅಲೆಮಾರಿ ದೊಂಬಿದಾಸ ಸಂಘದ ರಾಜ್ಯಾಧ್ಯಕ್ಷ ರಾಜು ಆರ್. ದೊಂಬಿದಾಸ ಮತ್ತು ಆನೇಕೊಪ್ಪ ಸಂಜೀವಿನಿ ಹಿರಿಯ ನಾಗರೀಕರ ಆರೈಕೆ ಕೇಂದ್ರದ ಮುಖ್ಯಸ್ಥೆ ಸವಿತಾ ಅವರಿಗೆ ಸಮಾಜ ಸೇವಾ ರತ್ನ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
    ಬಿಜಾಪುರ ಮಹಿಳಾ ವಿಶ್ವವಿದ್ಯಾಲಯದ ಎಮೆರಿಟರ್‍ಸ್ ಪ್ರಾಧ್ಯಾಪಕಿ ಡಾ. ವಿಜಯಾದೇವಿಗೆ ಸಾಹಿತ್ಯ ರತ್ನ, ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಹಿರಿಯ ವೈದ್ಯ ಡಾ. ಡಿ.ಎಸ್ ಶಿವಪ್ರಕಾಶ್‌ಗೆ ವೈದ್ಯಕೀಯ ರತ್ನ, ರಾಜ್ಯ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ. ಬಾಲಾಜಿಗೆ ಜಾನಪದ ಕಲಾ ಸಾಮ್ರಾಟ, ಇಂಡಿಯಾ ಬುಕ್ ಆಪ್ ರೆಕಾರ್ಡ್ ಪ್ರತಿಭಾನ್ವಿತ ಬಾಲಕಿ ಬೇಬಿ ತನಿಷಾ ಗೌಡಗೆ ಪ್ರತಿಭಾ ರತ್ನ, ಬೆಂಗಳೂರಿನ ಆಧುನಿಕ ಕೃಷಿ ತಜ್ಞ  ಕೃಷ್ಣಪ್ಪ ಗೌಡ ಪಡ್ಡಂಬೈಲ್‌ರಿಗೆ ಆಧುನಿಕ ಕೃಷಿ ಸಾಮ್ರಾಟ, ಮಂಗಳೂರಿನ ಕಾದಂಬರಿಕಾರ ಪಿ.ವಿ ಪ್ರದೀಪ್‌ಕುಮಾರ್‌ಗೆ ಕಾದಂಬರಿ ಸಾಮ್ರಾಟ, ಶಿವಮೊಗ್ಗ ಕಸ್ತೂರಬಾ ಬಾಲಕಿಯರ ಪ್ರೌಢಶಾಲೆ ಸಂಗೀತ ಶಿಕ್ಷಕಿ ಕೆ.ಎಸ್ ದಾಕ್ಷಾಯಿಣಿ ರಾಜ್‌ಕುಮಾರ್‌ಗೆ ಸಂಗೀತ ರತ್ನ, ಶಿವಮೊಗ್ಗದ ಸುಗಮ ಸಂಗೀತ ಗಾಯಕಿ ರೇವತಿ ರಾಜ್‌ಕುಮಾರ್ ಮತ್ತು ಹಿರಿಯ ಗಾಯಕ ಹರೀಶ್‌ಗೆ ಗಾಯನಶ್ರೀ, ಶಿವಮೊಗ್ಗ ಅಭಿನವ ಕಲಾ ಕೇಂದ್ರದ ನೃತ್ಯ ಶಿಕ್ಷಕಿ ವೇದಾವತಿ ಸೋಮಸುಂದರ್‌ಗೆ ನೃತ್ಯಕಲಾ ರತ್ನ ರಾಜ್ಯ ಪ್ರಶಸ್ತಿಗಳನ್ನು ನೀಡಲಾಯಿತು.
    ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಸಿ.ಕೆ ರಮೇಶ್, ಬೆಳ್ತಂಗಡಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಶಂಕರ್ ದೇವಾಡಿಗ, ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎನ್.ಕೆ ಪಾಲಾಕ್ಷಪ್ಪ, ನಿವೃತ್ತ ಶಿಕ್ಷಕಿ ಮೀನಾಕ್ಷಿ ಮತ್ತು ಶಿವಮೊಗ್ಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ರಾಧಾಬಾಯಿ ಅವರಿಗೆ ಶಿಕ್ಷಣ ಸೇವಾ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು
    ಪ್ರಸ್ತಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಕನ್ನಡದಲ್ಲಿ ೧೨೫ಕ್ಕೆ ೧೨೫ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ಕುವರ/ಕುವರಿ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.
    ಕಸಾಪ ಪ್ರಮುಖರಾದ ಸಿ. ಚನ್ನಪ್ಪ, ಜಿ.ಎನ್ ಸತ್ಯಮೂರ್ತಿ, ವೈ.ಕೆ ಹನುಮಂತಯ್ಯ, ಅರಳೇಹಳ್ಳಿ ಅಣ್ಣಪ್ಪ, ಸಾಹಿತಿ ಜೆ.ಎನ್ ಬಸವರಾಜಪ್ಪ, ಹಿಂದಿ ಶಿಕ್ಷಕ ನಾಗರಾಜ್ ಹಾಗು ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.


ಮತಾಂತರ ನಿಷೇಧ ಕಾಯ್ದೆ ಕೋಮುವಾದಿಗಳಿಂದ ದುರ್ಬಳಕೆ ಆತಂಕ

ಕಾಯ್ದೆ ಜಾರಿಗೊಳಿಸದಿರಲು ಕ್ರೈಸ್ತ ಸಮುದಾಯದವರಿಂದ ಪ್ರತಿಭಟನೆ : ಮನವಿ

ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸದಿರುವಂತೆ ಹಾಗು ಕ್ರೈಸ್ತ ಸಮುದಾಯದ ಚರ್ಚ್‌ಗಳು ಮತ್ತು ಧಾರ್ಮಿಕ ಸಂಘ-ಸಂಸ್ಥೆಗಳ ಗಣತಿ ನಡೆಸಬೇಕೆಂಬ ಹಿಂದುಳಿದ ವರ್ಗಗಳ ಇಲಾಖೆಯ ಆದೇಶವನ್ನು ತಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿ ಶುಕ್ರವಾರ ಭದ್ರಾವತಿಯಲ್ಲಿ ತಾಲೂಕು ಕಛೇರಿ ಮುಂಭಾಗ ಅಖಿಲ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಂ ಹ್ಯೂಮನ್ ರೈಟ್ಸ್ ವತಿಯಿಂದ ವಿವಿಧ ಚರ್ಚ್‌ಗಳ ಧರ್ಮಗುರುಗಳ ನೇತೃತ್ವದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.

    ಭದ್ರಾವತಿ, ನ. ೧೯: ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸದಿರುವಂತೆ ಹಾಗು ಕ್ರೈಸ್ತ ಸಮುದಾಯದ ಚರ್ಚ್‌ಗಳು ಮತ್ತು ಧಾರ್ಮಿಕ ಸಂಘ-ಸಂಸ್ಥೆಗಳ ಗಣತಿ ನಡೆಸಬೇಕೆಂಬ ಹಿಂದುಳಿದ ವರ್ಗಗಳ ಇಲಾಖೆಯ ಆದೇಶವನ್ನು ತಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿ ಶುಕ್ರವಾರ ತಾಲೂಕು ಕಛೇರಿ ಮುಂಭಾಗ ಅಖಿಲ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಂ ಹ್ಯೂಮನ್ ರೈಟ್ಸ್ ವತಿಯಿಂದ ನಗರದ ವಿವಿಧ ಚರ್ಚ್‌ಗಳ ಧರ್ಮಗುರುಗಳ ನೇತೃತ್ವದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಯಿತು.
    ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಪ್ರಮುಖರು ಮಾತನಾಡಿ, ಸರ್ಕಾರ ಯಾವುದೋ ಒಂದೆರೆಡು ಘಟನೆಗಳನ್ನು ಆಧಾರವಾಗಿಟ್ಟುಕೊಂಡು ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಲು ಮುಂದಾಗುತ್ತಿರುವುದನ್ನು ರಾಜ್ಯದ ಸಮಸ್ತ ಕ್ರೈಸ್ತ ಸಮುದಾಯದವರು ವಿರೋಧಿಸುತ್ತೇವೆ. ಸಂವಿಧಾನದಲ್ಲಿ ಯಾವುದೇ ಧರ್ಮ ಆಚರಿಸಲು, ಪ್ರತಿಪಾದಿಸಲು ಹಾಗು ಅದನ್ನು ಪ್ರಕಟಿಸಲು ಹಕ್ಕುಗಳನ್ನು ನೀಡಲಾಗಿದೆ. ಈಗಿರುವಾಗ ಮತಾಂತರ ನಿಷೇಧ ಕಾಯ್ಕೆ ಜಾರಿಗೆ ತರುವುದರಲ್ಲಿ ಯಾವುದೇ ಅರ್ಥವಿಲ್ಲ. ಕೆಲವು ಮತಾಂಧ ಕಿಡಿಗೇಡಿಗಳಿಂದ ಸಮಾಜದಲ್ಲಿ ಆಶಾಂತಿ ವಾತಾವರಣ ನಿರ್ಮಾಣವಾಗುತ್ತಿದ್ದು, ಈ ನಡುವೆ ವಿನಾಕಾರಣ ರಾಜ್ಯದಲ್ಲಿರುವ ಇಡೀ ಕ್ರೈಸ್ತ ಸಮುದಾಯದವರ ಮೇಲೆ ಮತಾಂತರ ಆರೋಪ ಮಾಡುತ್ತಿರುವುದು ಸರಿಯಲ್ಲ. ಒಂದು ವೇಳೆ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಲ್ಲಿ ಇದರಿಂದ ಯಾವುದೇ ರೀತಿ ಪ್ರಯೋಜನವಾಗುತ್ತಿಲ್ಲ. ಬದಲಿಗೆ ಈ ಕಾಯ್ದೆಯನ್ನು ಕೋಮುವಾದಿಗಳು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯವೆಸಗಲು ಬಳಸಿಕೊಳ್ಳುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಕಾಯ್ದೆಯನ್ನು ಜಾರಿಗೊಳಿಸದಿರುವಂತೆ ಮನವಿ ಮಾಡಿದರು.  
    ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಳಿ ಈಗಾಗಲೇ ಕ್ರೈಸ್ತ ಸಮುದಾಯಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳು ಇವೆ. ಜನಸಂಖ್ಯೆ ಗಣತಿ ನಡೆಸಲು ಯಾವುದೇ ವಿರೋಧವಿಲ್ಲ. ಆದರೆ ಪ್ರತ್ಯೇಕವಾಗಿ ಕ್ರೈಸ್ತ ಸಮುದಾಯದ ಚರ್ಚ್‌ಗಳು ಮತ್ತು ಧಾರ್ಮಿಕ ಸಂಘ-ಸಂಸ್ಥೆಗಳ ಗಣತಿ ನಡೆಸಬೇಕೆಂಬ ಉದ್ದೇಶ ಸರಿಯಲ್ಲ. ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಳಿ ಇರುವ ಜನಗಣತಿ ಅಂಕಿ ಅಂಶಗಳನ್ನು ಗಮನಿಸಿದಾಗ ದೇಶ ಹಾಗು ರಾಜ್ಯದಲ್ಲಿ ಕ್ರೈಸ್ತ ಸಮುದಾಯದವರು ಸ್ವಾತಂತ್ರ್ಯ ಪೂರ್ವದಿಂದಲೂ ಇಲ್ಲಿಯವರೆಗೂ ಯಾವುದೇ ರೀತಿಯ ವ್ಯತ್ಯಾಸಗಳು ಕಂಡು ಬರುತ್ತಿಲ್ಲ. ಒಂದು ವೇಳೆ ಮತಾಂತರ ನಡೆದಿದ್ದಲ್ಲಿ ಕ್ರೈಸ್ತರ ಸಂಖ್ಯೆಯಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿತ್ತು. ಇದನ್ನು ಗಮನಿಸಿದಾಗ ವಾಸ್ತವಾಂಶ ತಿಳಿದು ಬರುತ್ತದೆ. ಅಲ್ಲದೆ ದೇಶದಲ್ಲಿ, ರಾಜ್ಯದಲ್ಲಿ ಕ್ರೈಸ್ತ ಸಮುದಾಯಕ್ಕೆ ಸೇರಿದ ಲಕ್ಷಾಂತರ ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು ಹಾಗು ಸ್ವಯಂ ಸೇವಾ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ. ಮತಾಂತರದ ಬಗ್ಗೆ ಇದುವರೆಗೂ ಇವುಗಳಿಂದ ಸೇವೆ ಪಡೆಯುತ್ತಿರುವ ಯಾರೊಬ್ಬರ   ಆರೋಪಗಳು ಸಹ ಇರುವುದಿಲ್ಲ. ಈಗಿರುವಾಗ ಪ್ರತ್ಯೇಕವಾಗಿ  ಕ್ರೈಸ್ತ ಸಮುದಾಯದ ಚರ್ಚ್‌ಗಳು ಮತ್ತು ಧಾರ್ಮಿಕ ಸಂಘ-ಸಂಸ್ಥೆಗಳ ಗಣತಿ ನಡೆಸಬೇಕೆಂಬ ಉದ್ದೇಶ ಸರಿಯಲ್ಲ. ಈ ಹಿನ್ನಲೆಯಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ಆದೇಶವನ್ನು ತಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿದರು.
    ನ್ಯೂಟೌನ್ ಅಮಲೋದ್ಭವಿ ಮಾತೆ ದೇವಾಲಯದ ಧರ್ಮಗುರು ಫಾ. ಲಾನ್ಸಿ ಡಿಸೋಜ, ಹಳೇನಗರದ ವೇಲಾಂಗಣಿ ಆರೋಗ್ಯ ಮಾತೆ ದೇವಾಲಯದ ಧರ್ಮ ಗುರು ಫಾ. ಸ್ಟೀವನ್ ಡೇಸಾ, ಹಿರಿಯೂರು ಧರ್ಮ ಕೇಂದ್ರದ ಫಾ. ಸಂತೋಷ್ ಪಿರೇರಾ, ಮಾವಿನಕೆರೆ ಧರ್ಮ ಕೇಂದ್ರದ ಫಾ. ವೀನಸ್, ರೆವರೆಂಡ್ ಎಸ್. ದೇವನೇಸನ್,  ನ್ಯೂಟೌನ್ ಅಮಲೋದ್ಭವಿ ಮಾತೆ ದೇವಾಲಯದ ಪಾಲನಾ ಪರಿಷತ್ ಕಾರ್ಯದರ್ಶಿ ಅಂತೋಣಿ ವಿಲ್ಸನ್,  ಗಾಂಧಿನಗರ ಕ್ಯಾಥೋಲಿಕ್ ಅಸೋಸಿಯೇಷನ್ ಅಧ್ಯಕ್ಷ ಅಂತೋಣಿ, ಯುನೈಟೆಡ್ ಕ್ರಿಶ್ವಿಯನ್ ಅಸೋಸಿಯೇಷನ್ ಅಧ್ಯಕ್ಷ ಸೆಲ್ವರಾಜ್, ನಗರಸಭಾ ಸದಸ್ಯ ಜಾಜ್,  ಮಾಜಿ ಸದಸ್ಯ ಪ್ರಾನ್ಸಿಸ್, ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್ ಸೇರಿದಂತೆ ವಿವಿಧ ಚರ್ಚ್‌ಗಳ ಧರ್ಮಗುರುಗಳು, ಕ್ರೈಸ್ತ ಸಮುದಾಯದ ವಿವಿಧ ಸಂಘಟನೆಗಳ ಪ್ರಮುಖರು, ಮಹಿಳಾ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಮನವಿಯನ್ನು ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಲಾಯಿತು.