Tuesday, December 7, 2021

ಅಮಲೋದ್ಭವಿ ಮಾತೆ ದೇವಲಯದಲ್ಲಿ ಯಶಸ್ವಿಯಾಗಿ ನಡೆದ ಲಸಿಕಾ ಅಭಿಯಾನ


ಭದ್ರಾವತಿಯಲ್ಲಿ ಅಮಲೋದ್ಭವಿ ಮಾತೆಯ ದೇವಾಲಯ ಹಾಗೂ ಉಜ್ಜನಿಪುರ ನಗರ ಆರೋಗ್ಯ ಕೇಂದ್ರ ವತಿಯಿಂದ ಕೋವಿಡ್ ಲಸಿಕೆ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಡಿ. ೭: ಅಮಲೋದ್ಭವಿ ಮಾತೆಯ ದೇವಾಲಯ ಹಾಗೂ ಉಜ್ಜನಿಪುರ ನಗರ ಆರೋಗ್ಯ ಕೇಂದ್ರ ವತಿಯಿಂದ ಕೋವಿಡ್ ಲಸಿಕೆ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
    ನ್ಯೂಟೌನ್ ಅಮಲೋದ್ಭವಿ ಮಾತೆಯ ದೇವಾಲಯದ ಆವರಣದಲ್ಲಿ ನಡೆದ ಅಭಿಯಾನದಲ್ಲಿ ಇದುವರೆಗೂ ಲಸಿಕೆ ಪಡೆಯದವರಿಗೆ ಹಾಗೂ ಮೊದಲನೇ ಡೋಸ್ ಪಡೆದವರಿಗೆ ೨ನೇ ಡೋಸ್ ನೀಡಲಾಯಿತು.
    ಶಿಬಿರದಲ್ಲಿ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎರಡೂ ಬಗೆಯ ಲಸಿಕೆಗಳನ್ನು ಲಸಿಕೆ ಪಡೆಯುವವರ ಅಪೇಕ್ಷೆಯಂತೆ ನೀಡಲಾಯಿತು.
    ಫಾದರ್ ಲಾನ್ಸಿ  ಡಿಸೋಜಾ ಮತ್ತು ಪಾಲನಾ ಪರಿಷತ್ ಕಾರ್ಯದರ್ಶಿ ಅಂತೋಣಿ ವಿಲ್ಸನ್, ಉಜ್ಜನಿಪುರ ನಗರ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ಸಿಪಿಐ(ಎಂ) ಸಭೆ : ಜಿಲ್ಲಾ ಕಾರ್ಯದರ್ಶಿಯಾಗಿ ಎಂ. ನಾರಾಯಣ ಆಯ್ಕೆ

ಎಂ. ನಾರಾಯಣ
    ಭದ್ರಾವತಿ, ಡಿ. ೭: ಭಾರತ ಕಮ್ಯೂನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ)ದ ಜಿಲ್ಲಾ ಕಾರ್ಯದರ್ಶಿಯಾಗಿ ಕಾರ್ಮಿಕ ಮುಖಂಡ ಎಂ. ನಾರಾಯಣ ಆಯ್ಕೆಯಾಗಿದ್ದಾರೆ.
    ಜಿಲ್ಲಾ ಸಮ್ಮೇಳನದ ಭಾಗವಾಗಿ ಇನ್ಶೂರೆನ್ಸ್ ಎಂಪ್ಲಾಯಿಸ್ ಯೂನಿಯನ್ ಕಛೇರಿಯಲ್ಲಿ ರಾಜ್ಯ ಸಮಿತಿ ಸದಸ್ಯ ಕಾಂಮ್ರೇಡ್ ಬಾಲಕೃಷ್ಣ ಶೆಟ್ಟರ್ ನೇತೃತ್ವದಲ್ಲಿ ನಡೆದ ಪಕ್ಷದ ಸಭೆಯಲ್ಲಿ ನೂತನ ಜಿಲ್ಲಾ ಸಂಘಟನಾ ಸಮಿತಿಯನ್ನು ಆಯ್ಕೆ ಮಾಡಲಾಯಿತು.
ಜಿಲ್ಲಾ ಸಂಘಟನಾ ಸಮಿತಿ ಸದಸ್ಯರಾಗಿ ಕೆ. ಮಂಜಣ್ಣ, ಎಂ. ಅನಂತರಾಮು, ಜನಾರ್ಧನನಾಯಕ್, ತುಳಸಿಪ್ರಭಾ, ನಾಗೇಶ್, ಪಿ. ಚಂದ್ರಪ್ಪ ಹಾಗು ಹಿರಿಯ ವಕೀಲರಾದ ಜಿ.ಎಸ್ ನಾಗರಾಜ ಮತ್ತು ಕೆ. ಪ್ರಭಾಕರನ್ ಆಯ್ಕೆಯಾದರು.
    ಮುಂದಿನ ದಿನಗಳಲ್ಲಿ ರೈತ, ಕಾರ್ಮಿಕ, ವಿದ್ಯಾರ್ಥಿ, ಯುವಜನ ಹಾಗು ಮಹಿಳಾ ಸೇರಿದಂತೆ ಪಕ್ಷದ ವಿವಿಧ ಘಟಕಗಳಿಗೆ ಹೆಚ್ಚಿನ ಆದ್ಯತೆ ನೀಡಿ ಬಲಿಷ್ಠಗೊಳಿಸುವ ಜೊತೆಗೆ ಹೆಚ್ಚಿನ ಹೋರಾಟಗಳನ್ನು ಹಮ್ಮಿಕೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
    ಮುಂದಿನ ವರ್ಷ ಜ.೨ ರಿಂದ ೪ರವರೆಗೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ರಾಜ್ಯ ಸಮ್ಮೇಳನ ನಡೆಯಲಿದ್ದು, ಎಂ. ನಾರಾಯಣ ಮತ್ತು ಕೆ. ಪ್ರಭಾಕರನ್ ಅವರನ್ನು ಪ್ರತಿನಿಧಿಗಳಾಗಿ ಹಾಗು ಪಿ. ಚಂದ್ರಪ್ಪ ಅವರನ್ನು ವೀಕ್ಷಕರಾಗಿ ಆಯ್ಕೆ ಮಾಡಲಾಯಿತು.

ಬಲಿಜ ಸಂಘದ ನೂತನ ಅಧ್ಯಕ್ಷರಾಗಿ ಜೆ.ಎಸ್ ಸಂಜೀವ ಮೂರ್ತಿ

ಭದ್ರಾವತಿ ಹಳೇನಗರದ ಶ್ರೀ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ತಾಲೂಕು ಬಲಿಜ ಸಂಘದ ನೂತನ ಅಧ್ಯಕ್ಷರಾಗಿ ಜೆ.ಎಸ್ ಸಂಜೀವ ಮೂರ್ತಿ ಆಯ್ಕೆಯಾಗಿದ್ದಾರೆ.
    ಭದ್ರಾವತಿ, ಡಿ. ೭: ಹಳೇನಗರದ ಶ್ರೀ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ತಾಲೂಕು ಬಲಿಜ ಸಂಘದ ನೂತನ ಅಧ್ಯಕ್ಷರಾಗಿ ಜೆ.ಎಸ್ ಸಂಜೀವ ಮೂರ್ತಿ ಆಯ್ಕೆಯಾಗಿದ್ದಾರೆ.
    ಸರ್ವ ಸದಸ್ಯರ ಸಭೆಯಲ್ಲಿ ನೂತನ ಪದಾಧಿಕಾರಿಗಳು ಅವಿರೋಧ ಆಯ್ಕೆಯಾಗಿದ್ದು, ಗೌರವಾಧ್ಯಕ್ಷರಾಗಿ ಎಸ್.ಎನ್ ಸುಬ್ರಮಣ್ಯ, ಉಪಾಧ್ಯಕ್ಷರಾಗಿ ಎಸ್.ಬಿ ಜಂಗಮಪ್ಪ, ಶಕುಂತಲಾ, ಪ್ರಧಾನ ಕಾರ್ಯದರ್ಶಿಯಾಗಿ ಎಂ. ರಮೇಶ್, ಖಜಾಂಚಿಯಾಗಿ ನರೇಂದ್ರ ಬಾಬು ಮತ್ತು ಸಹ ಕಾರ್ಯದರ್ಶಿಯಾಗಿ ಟಿ. ರಮೇಶ್ ಹಾಗು ನಿರ್ದೇಶಕರಾಗಿ ಡಿ.ಆರ್ ಶಿವಕುಮಾರ್, ವೈ.ಎಸ್ ರಾಮಮೂರ್ತಿ, ಎಚ್. ನಾರಾಯಣ, ಯು. ಪಂಪಣ್ಣ, ರಂಗನಾಥ್, ಕುಮಾರಸ್ವಾಮಿ, ಪದ್ಮಮ್ಮ, ದಶರಥ ಕುಮಾರ್, ವೆಂಕಟೇಶ್, ಪ್ರಹ್ಲಾದ್, ರಾಜೇಶ್, ಉದಯ್‌ಕುಮಾರ್ ಮತ್ತು ಪಿ. ಸತೀಶ್ ಆಯ್ಕೆಯಾಗಿದ್ದಾರೆ.