Tuesday, December 21, 2021

ಶ್ರೀ ಅಂತರಘಟ್ಟಮ್ಮ, ಚೌಡೇಶ್ವರಿ ದೇವಿ ಪ್ರತಿಷ್ಠಾಪನೆ, ಗೋಪುರ ಕಳಸಾರೋಹಣ

ಭದ್ರಾವತಿ ತಾಲೂಕಿನ ಹಾತಿಕಟ್ಟೆ ಗ್ರಾಮದ ಶ್ರೀ ಅಂತರಘಟ್ಟಮ್ಮ ದೇವಿ ಹಾಗೂ ಶ್ರೀ ಚೌಡೇಶ್ವರಿ ದೇವಿ ಪ್ರತಿಷ್ಠಾಪನೆ ಹಾಗು ಗೋಪುರ ಕಳಸಾರೋಹಣ ಮಂಗಳವಾರ ವಿಜೃಂಭಣೆಯಿಂದ ಜರುಗಿತು.  ಈ ಸಂದರ್ಭದಲ್ಲಿ ಬಿಳಿಕಿ ಶ್ರೀಗಳಿಗೆ ಗೌರವ ಸಮರ್ಪಣೆ ಸಲ್ಲಿಸಲಾಯಿತು.
    ಭದ್ರಾವತಿ, ಡಿ. ೨೧:  ತಾಲೂಕಿನ ಹಾತಿಕಟ್ಟೆ ಗ್ರಾಮದ ಶ್ರೀ ಅಂತರಘಟ್ಟಮ್ಮ ದೇವಿ ಹಾಗೂ ಶ್ರೀ ಚೌಡೇಶ್ವರಿ ದೇವಿ ಪ್ರತಿಷ್ಠಾಪನೆ ಹಾಗು ಗೋಪುರ ಕಳಸಾರೋಹಣ ಮಂಗಳವಾರ ವಿಜೃಂಭಣೆಯಿಂದ ಜರುಗಿತು.
ಧಾರ್ಮಿಕ ಕಾರ್ಯಕ್ರಮದ ದಿವ್ಯ ಸಾನಿಧ್ಯ ಬಿಳಿಕಿ ಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಿದ್ದರು. ಉದ್ಯಮಿ ಬಿ.ಕೆ ಶಿವಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
    ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಬಿಜೆಪಿ ಮುಖಂಡ ಸಂಜಯ್ ಹಾಗು ದೇವಸ್ಥಾನ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಗ್ರಾಮದ ಮುಖಂಡರು ಮತ್ತು ಹಾತಿಕಟ್ಟೆ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರು, ಭಕ್ತಾಧಿಗಳು ಪಾಲ್ಗೊಂಡಿದ್ದರು.    

ಹೋರಾಟಗಾರನ ಹುಟ್ಟುಹಬ್ಬಕ್ಕೆ ಕೈಗಡಿಯಾರದ ಉಡುಗೊರೆ

೩ ದಶಕಗಳಿಗೂ ಹೆಚ್ಚು ಕಾಲ ಹೋರಾಟದಲ್ಲಿ ತೊಡಗಿರುವ ಆರ್. ವೇಣುಗೋಪಾಲ್


ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಹಾಗು ರಾಮಕೃಷ್ಣ ಹೆಗಡೆಯವರ ಅಭಿಮಾನಿಯಾಗಿ ಕಳೆದ ೩ ದಶಕಗಳಿಗೂ ಹೆಚ್ಚು ಕಾಲ ಹೋರಾಟದಲ್ಲಿ ತಮ್ಮ ಜೀವನದ ಅರ್ಧ ಬದುಕು ಸಾಗಿಸಿರುವ ಭದ್ರಾವತಿ ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್‌ರವರ ೬೪ನೇ ಹುಟ್ಟುಹಬ್ಬ ಮಂಗಳವಾರ ಹೋರಾಟದ ಮೂಲಕ ವಿಶಿಷ್ಟವಾಗಿ ಆಚರಿಸಿಕೊಳ್ಳಲಾಯಿತು. ಮಹಿಳೆಯರು ಹುಟ್ಟುಹಬ್ಬದ ಅಂಗವಾಗಿ ಕೈಗಡಿಯಾರ ಉಡುಗೊರೆಯಾಗಿ ನೀಡಿದರು. 
    ಭದ್ರಾವತಿ, ಡಿ. ೨೧: ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಹಾಗು ರಾಮಕೃಷ್ಣ ಹೆಗಡೆಯವರ ಅಭಿಮಾನಿಯಾಗಿ ಕಳೆದ ೩ ದಶಕಗಳಿಗೂ ಹೆಚ್ಚು ಕಾಲ ಹೋರಾಟದಲ್ಲಿ ತಮ್ಮ ಜೀವನದ ಅರ್ಧ ಬದುಕು ಸಾಗಿಸಿರುವ ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್‌ರವರ ೬೪ನೇ ಹುಟ್ಟುಹಬ್ಬ ಮಂಗಳವಾರ ಹೋರಾಟದ ಮೂಲಕ ವಿಶಿಷ್ಟವಾಗಿ ಆಚರಿಸಿಕೊಳ್ಳಲಾಯಿತು.
    ಜನ್ನಾಪುರ ನಿವಾಸಿಯಾಗಿರುವ ಆರ್. ವೇಣುಗೋಪಾಲ್‌ರವರು ಕೊಳಚೆ ಪ್ರದೇಶಗಳ ಅಭಿವೃದ್ಧಿಗಾಗಿ, ನಗರ ಹಾಗು ಗ್ರಾಮಾಂತರ ಭಾಗಗಳಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ, ವಿದ್ಯುತ್, ಶೌಚಾಲಯ ಸೇರಿದಂತೆ ಮೂಲ ಸೌಕರ್ಯಗಳಿಗಾಗಿ ಹೋರಾಟ ನಡೆಸಿಕೊಂಡು ಬಂದವರು. ಇವುಗಳ ಜೊತೆಗೆ ಸರ್ಕಾರಿ ಶಾಲಾ-ಕಾಲೇಜುಗಳ ಅಭಿವೃದ್ಧಿ, ಕೆರೆ ಹಾಗು ಉದ್ಯಾನವನಗಳ ಅಭಿವೃದ್ಧಿ ಸೇರಿದಂತೆ ಇನ್ನೂ ಹಲವಾರು ಹೋರಾಟಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಬಂದಿದ್ದಾರೆ.
ಹೋರಾಟದ ಜೊತೆ ಜೊತೆಗೆ ಎರಡು ಬಾರಿ ನಗರಸಭೆ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ವಾರ್ಡ್ ವ್ಯಾಪ್ತಿಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಗಮನ ಸೆಳೆದಿದ್ದಾರೆ. ಇವರ ಹೋರಾಟಕ್ಕೆ ಸ್ಥಳೀಯ ಮಹಿಳೆಯರು ಹೆಚ್ಚಿನ ಸಹಕಾರ ನೀಡುತ್ತಿದ್ದು, ಈಗಲೂ ಸಹ ಮಹಿಳೆಯರು ಹೋರಾಟಕ್ಕೆ ಬೆನ್ನಲುಬಾಗಿ ನಿಂತಿದ್ದಾರೆ.
    ಹೋರಾಟಗಾರನ ೬೪ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಮಹಿಳೆಯರು ನಗರಸಭೆ ವ್ಯಾಪ್ತಿಯಲ್ಲಿರುವ ಕೆರೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಿಲ್ಟ್ರಿಕ್ಯಾಂಪ್‌ನಲ್ಲಿರುವ ನೀರಾವರಿ ಇಲಾಖೆಯ ಬಿಆರ್‌ಎಲ್‌ಬಿಸಿ ಇಂಜಿನಿಯರ್‌ಗೆ ಮನವಿ ಸಲ್ಲಿಸಿ ನಂತರ ಆರ್. ವೇಣುಗೋಪಾಲ್‌ರವರಿಗೆ ಕೈಗಡಿಯಾರ(ವಾಚ್) ಉಡುಗೊರೆಯಾಗಿ ನೀಡುವ ಮೂಲಕ ಹೋರಾಟಕ್ಕೆ ಮತ್ತಷ್ಟು ಬಲ ತಂದುಕೊಡುವ ನಿಟ್ಟಿನಲ್ಲಿ ಮುನ್ನುಡಿ ಬರೆದರು.
    ಮಹಿಳಾ ಪ್ರಮುಖರಾದ ರಮಾ ವೆಂಕಟೇಶ್, ಶೈಲಜಾ ರಾಮಕೃಷ್ಣ, ದೇವಿಕಾ ನಾಗರಾಜ್, ಶೈಲ, ಮುರುಗನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಜಗಜ್ಯೋತಿ ಬಸವೇಶ್ವರರ ಭಾವಚಿತ್ರಕ್ಕೆ ಮಸಿ : ಸೂಕ್ತ ಕ್ರಮಕ್ಕೆ ಮನವಿ

ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಸಮಾನ, ಸಮತೆಯ ಸಮಾಜ ನಿರ್ಮಾಣದ ಹರಿಕಾರ, ಮಹಾ ಮಾನವತಾವಾದಿ, ವಿಶ್ವ ಗುರು, ಜಗಜ್ಯೋತಿ ಬಸವಣ್ಣನವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಮಸಿ ಬಳೆದು ಅವಮಾನಿಸಿರುವ ಘಟನೆಯನ್ನು ಖಂಡಿಸಿ ಮಂಗಳವಾರ ಭದ್ರಾವತಿಯಲ್ಲಿ ತಾಲೂಕು ಕಛೇರಿ ಮಿನಿ ವಿಧಾನಸೌಧದ ಮುಂಭಾಗ ಅಖಿಲ ಭಾರತ ವೀರಶೈವ ಮಹಾಸಭಾ, ಯುವ ಘಟಕ ಹಾಗು ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಡಿ. ೨೧: ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಸಮಾನ, ಸಮತೆಯ ಸಮಾಜ ನಿರ್ಮಾಣದ ಹರಿಕಾರ, ಮಹಾ ಮಾನವತಾವಾದಿ, ವಿಶ್ವ ಗುರು, ಜಗಜ್ಯೋತಿ ಬಸವಣ್ಣನವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಮಸಿ ಬಳೆದು ಅವಮಾನಿಸಿರುವ ಘಟನೆಯನ್ನು ಖಂಡಿಸಿ ಮಂಗಳವಾರ ತಾಲೂಕು ಕಛೇರಿ ಮಿನಿ ವಿಧಾನಸೌಧದ ಮುಂಭಾಗ ಅಖಿಲ ಭಾರತ ವೀರಶೈವ ಮಹಾಸಭಾ, ಯುವ ಘಟಕ ಹಾಗು ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
    ಬಸವಣ್ಣನವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಮಸಿ ಬಳೆದು ಅವಮಾನಿಸಿರುವುದು ಖಂಡನೀಯ. ತಕ್ಷಣ ಅವಮಾನಗೊಳಿಸಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು. ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷೆ ನಂದಿನಿ ಮಲ್ಲಿಕಾರ್ಜುನ ನೇತೃತ್ವ ವಹಿಸಿದ್ದರು. ತಹಸೀಲ್ದಾರ್ ಆರ್. ಪ್ರದೀಪ್‌ರವರಿಗೆ ಮನವಿ ಸಲ್ಲಿಸಲಾಯಿತು.
    ಮಹಿಳಾ ಘಟಕದ ಅಧ್ಯಕ್ಷೆ ರೂಪ ನಾಗರಾಜ್, ಯುವಕ ಘಟಕದ ಅಧ್ಯಕ್ಷ ಮಂಜುನಾಥ್, ಜೇಡಿಕಟ್ಟೆ ಶ್ರೀ ಮರುಳಸಿದ್ದೇಶ್ವರ ಜನಕಲ್ಯಾಣ ಟ್ರಸ್ಟ್  ಅಧ್ಯಕ್ಷ ಸಿದ್ದಲಿಂಗಯ್ಯ, ಮಹಾಸಭಾ ಉಪಾಧ್ಯಕ್ಷ ವಾಗೀಶ್, ಪ್ರಧಾನ ಕಾರ್ಯದರ್ಶಿ ಬಿ.ಎಸ್ ಮಹೇಶ್‌ಕುಮಾರ್, ಸಹ ಕಾರ್ಯದರ್ಶಿ ಬಾರಂದೂರು ಮಂಜುನಾಥ್, ನಿರ್ದೇಶಕ ಜಗದೀಶ್ ಪಾಟೀಲ್, ಮಹಿಳಾ ಘಟಕದ ಉಪಾಧ್ಯಕ್ಷೆ ಶೋಭಾ ಪಾಟೀಲ್, ಕಾರ್ಯದರ್ಶಿ ಕವಿತಾ ಸುರೇಶ್, ಯುವ ಘಟಕದ ಉಪಾಧ್ಯಕ್ಷರಾದ ರುದ್ರೇಶ್, ಮಹಾದೇವ, ಕಾರ್ಯದರ್ಶಿ ಆನಂದ್, ಸಹ ಕಾರ್ಯದರ್ಶಿ ಚೇತನ್, ಖಜಾಂಚಿ ರಮೇಶ್, ಜಿಲ್ಲಾ ನಿರ್ದೇಶಕಿ ಎಸ್. ಪೂರ್ಣಿಮಾ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.