ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಶಾಸಕರಿಗೆ ಮನವಿ
![](https://blogger.googleusercontent.com/img/b/R29vZ2xl/AVvXsEirlxMtCe-KOhMlG9ALUVKdb2fgpDz_sJ0sg6VL2gZaDQpm8nv-7kkGDW4YMXjzNnwQbD3RJWY2zazIO_cFKLC9KdRUc7MT0g6c49sNinUlcRHQH-QOtnvgwri0PKK6UGp5WTC44j1QXk9T/w400-h300-rw/D31-BDVT-775670.jpg)
ರಾಜ್ಯ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಕೋರಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಭದ್ರಾವತಿಯಲ್ಲಿ ಶುಕ್ರವಾರ ಶಾಸಕ ಬಿ.ಕೆ ಸಂಗಮೇಶ್ವರ್ಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಡಿ. ೩೧: ರಾಜ್ಯ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಕೋರಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಶುಕ್ರವಾರ ಶಾಸಕ ಬಿ.ಕೆ ಸಂಗಮೇಶ್ವರ್ಗೆ ಮನವಿ ಸಲ್ಲಿಸಲಾಯಿತು.
ಮಧ್ಯಾಹ್ನ ೧ ಗಂಟೆಗೆ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದ ಸರ್ಕಾರಿ ನೌಕರರು, ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಹಾಗು ಭತ್ಯೆ ಜಾರಿಗೊಳಿಸುವುದು. ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸುವುದು. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವುದು ಹಾಗೂ ಪ್ರಾಥಮಿಕ/ಪ್ರೌಢಶಾಲಾ ಶಿಕ್ಷಕರು ಮತ್ತು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಲಾಯಿತು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿದ್ದಬಸಪ್ಪ ನೇತೃತ್ವ ವಹಿಸಿದ್ದರು. ಸಂಘದ ಗೌರವಾಧ್ಯಕ್ಷ ಎ.ಜೆ ರಂಗನಾಥ ಪ್ರಸಾದ್, ಕಾರ್ಯದರ್ಶಿ ಡಿ.ಎಸ್ ರಾಜಪ್ಪ, ಉಪಾಧ್ಯಕ್ಷರಾದ ಎಂ.ಎಸ್ ಬಸವರಾಜ, ಆರ್. ಅಶೋಕ್ರಾವ್, ಸಿ. ಮಂಜಾನಾಯ್ಕ ಮತ್ತು ರಾಜ್ಕುಮಾರ್, ಜಂಟಿ ಕಾರ್ಯದರ್ಶಿಗಳಾದ ಎಂ. ಪುಟ್ಟಲಿಂಗಮೂರ್ತಿ, ಜೆ. ಕಾಂತರಾಜ್ ಮತ್ತು ಬಿ.ಆರ್ ದಿನೇಶ್ಕುಮಾರ್, ಸಂಘಟನಾ ಕಾರ್ಯದರ್ಶಿಗಳಾದ ಆರ್. ಜನಾರ್ಧನ, ಡಿ. ನಾಗರತ್ನ ಮತ್ತು ಎ. ರಂಗನಾಥ, ಸಾಂಸ್ಕೃತಿಕ ಕಾರ್ಯದರ್ಶಿಗಳಾದ ಆರ್. ಶಿವಾಜಿರಾವ್ ಮತ್ತು ಕೃಷ್ಣ, ಕ್ರೀಡಾ ಕಾರ್ಯದರ್ಶಿಗಳಾದ ಶ್ರೀಕಾಂತ್ ಮತ್ತು ಜಾನ್ ನಿರ್ಮಲ್ ಹಾಗು ಆಂತರಿಕ ಲೆಕ್ಕ ಪರಿಶೋಧಕ ಎಚ್.ಎಂ ನಾಗರಾಜಪ್ಪ , ಯು. ಮಹಾದೇವಪ್ಪ, ಬಸವಂತರಾವ್ದಾಳೆ, ಎಸ್.ಕೆ ಮೋಹನ್, ರೇವಣಪ್ಪ, ಎ. ತಿಪ್ಪೇಸ್ವಾಮಿ, ಪ್ರಕಾಶ್, ಡಾ.ಜಿ.ಎಂ ನಟರಾಜ್, ಸಿ. ಜಯಪ್ಪ, ಡಾ. ಶಿವಪ್ರಸಾದ್ ಸೇರಿದಂತೆ ವಿವಿಧ ಇಲಾಖೆಗಳ ಸರ್ಕಾರಿ ನೌಕರರು ಪಾಲ್ಗೊಂಡಿದ್ದರು.