ಡಾ. ಬಿ.ಜಿ ಧನಂಜಯ
ಭದ್ರಾವತಿ, ಜ. ೧೨: ಕುವೆಂಪು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಿ ಧನಂಜಯ ನಾಮನಿರ್ದೇಶನಗೊಂಡಿದ್ದಾರೆ.
ಸೇವಾ ಜೇಷ್ಠತೆ ಹಾಗು ಸರದಿ ಆಧಾರದ ಮೇರೆಗೆ ಮುಂದಿನ ಒಂದು ವರ್ಷದ ಅವಧಿಗೆ ಅಥವಾ ವಯೋನಿವೃತ್ತಿ ದಿನಾಂಕದವರೆಗೂ ನಾಮನಿರ್ದೇಶನ ಸದಸ್ಯರಾಗಿ ನೇಮಕಗೊಳಿಸಿ ಕುಲಪತಿಗಳು ಆದೇಶ ಹೊರಡಿಸಿದ್ದಾರೆ.
ಡಾ. ಬಿ.ಜಿ ಧನಂಜಯ ಸೇರಿದಂತೆ ಪಂಚನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪಿ.ಬಿ ರಾಜಶೇಖರ, ಶೃಂಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಭಾರತಿ ಮತ್ತು ಚಿಕ್ಕಮಗಳೂರು ಸರ್ಕಾರಿ ಮಹಿಳಾ ಕಾಲೇಜಿನ ಎಸ್.ಎಂ ನಟೇಶ್ ಒಟ್ಟು ೪ ಜನರನ್ನು ನಾಮನಿರ್ದೇಶನಗೊಳಿಸಲಾಗಿದೆ ಎಂದು ಕುಲಸಚಿವರು ಅಧಿಸೂಚನೆ ಹೊರಡಿಸಿದ್ದಾರೆ.
No comments:
Post a Comment