Thursday, January 20, 2022

ಸೂಡಾ ಸದಸ್ಯರಾಗಿ ವಿ. ಕದಿರೇಶ್, ಹೇಮಾವತಿ ವಿಶ್ವನಾಥ್


ವಿ. ಕದಿರೇಶ್

    

ಹೇಮಾವತಿ ವಿಶ್ವನಾಥ್
ಭದ್ರಾವತಿ, ಜ. ೨೦: ರಾಜ್ಯ ಸರ್ಕಾರ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಗುರುವಾರ ಹಿರಿಯ ನಗರಸಭಾ ಸದಸ್ಯ ವಿ. ಕದಿರೇಶ್ ಸೇರಿದಂತೆ ಇಬ್ಬರನ್ನು ಸದಸ್ಯರನ್ನಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದೆ.
    ಹೊಸಮನೆ ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ವಿನಾಯಕ ಸೇವಾ ಸಮಿತಿ ಅಧ್ಯಕ್ಷ, ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡ, ನಗರಸಭಾ ಸದಸ್ಯರಾದ ವಿ. ಕದಿರೇಶ್ ಈ ಹಿಂದಿನ ಅವಧಿಯಲ್ಲೂ ಪ್ರಾಧಿಕಾರಕ್ಕೆ ಸದಸ್ಯರಾಗಿ ನೇಮಕಗೊಂಡಿದ್ದು, ಇದೀಗ ಪುನಃ ನೇಮಕಗೊಂಡಿದ್ದಾರೆ. ಉಳಿದಂತೆ ಭಾರತೀಯ ಜನತಾ ಪಕ್ಷದ ಮಹಿಳಾ ಮುಖಂಡರಾದ, ಹಳೇನಗರ ಮಹಿಳಾ ಸೇವಾ ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್ ಅವರನ್ನು ಮೊದಲ ಬಾರಿಗೆ ಸದಸ್ಯರಾಗಿ ನೇಮಕಗೊಳಿಸಲಾಗಿದೆ.
    ಈ ಕುರಿತು ನಗರಾಭಿವೃದ್ಧಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ಲತಾ ನೇಮಕಾತಿ ಅಧಿಸೂಚನೆ ಹೊರಡಿಸಿದ್ದಾರೆ.

No comments:

Post a Comment