ಭದ್ರಾವತಿ ತಾಲೂಕು ಕುರುಬರ ಸಂಘ.
ಭದ್ರಾವತಿ, ಜ. ೧೫: ತಾಲೂಕು ಕುರುಬರ ಸಂಘಕ್ಕೆ ನಿಗದಿತ ಸಮಯದಲ್ಲಿ ಚುನಾವಣೆ ನಡೆಯದ ಹಿನ್ನಲೆಯಲ್ಲಿ ಸರ್ಕಾರ ಆಡಳಿತಾಧಿಕಾರಿಯನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ.
ಈ ಹಿಂದೆ ತಾಲೂಕು ಕುರುಬರ ಸಂಘಕ್ಕೆ ೨೦೧೭ರಲ್ಲಿ ಅಂದಿನ ಆಡಳಿತಾಧಿಕಾರಿಗಳ ನೇತೃತ್ವದಲ್ಲಿ ಚುನಾವಣೆ ನಡೆದು ಹೊಸದಾಗಿ ಪದಾಧಿಕಾರಿಗಳು ಚುನಾಯಿತರಾಗಿದ್ದರು. ಬೈಲಾ ಪ್ರಕಾರ ಇವರ ಅಧಿಕಾರ ಅವಧಿ ೩ ವರ್ಷಗಳಿಗೆ ಸೀಮಿತವಾಗಿದ್ದು, ನವೆಂಬರ್ ೨೦೨೦ರಲ್ಲಿ ಮುಕ್ತಾಯಗೊಂಡಿದೆ. ಆದರೂ ಸಹ ಇದುವರೆಗೂ ಚುನಾವಣೆ ನಡೆಸಿಲ್ಲ. ಕೋವಿಡ್-೧೯ರ ಹಿನ್ನಲೆಯಲ್ಲಿ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ ಎಂದು ಸಂಘದ ಪದಾಧಿಕಾರಿಗಳು ಸಹಕಾರ ಸಂಘಗಳ ನಿಬಂಧಕರು ಮತ್ತು ಉಪ ನಿಬಂಧಕರಿಗೆ ಸಲ್ಲಿಸಿರುವ ಸಮಜಾಯಿಷಿಯಲ್ಲಿ ಒಪ್ಪಿಕೊಂಡಿದ್ದು, ಈ ಹಿನ್ನಲೆಯಲ್ಲಿ ಸಂಘದ ಕಾರ್ಯ ಚಟುವಟಿಕೆಗಳು ಯಾವುದೇ ಅಡೆತಡೆ ಇಲ್ಲದೆ ಸುಗಮವಾಗಿ ನಡೆಯಲು ಅನುಕೂಲವಾಗುವಂತೆ ಜ.೬ರಂದು ಸರ್ಕಾರ ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿಯನ್ನು ಆಡಳಿತಾಧಿಕಾರಿಯಾಗಿ ನೇಮಕಗೊಳಿಸಿದೆ.
ಆಡಳಿತಾಧಿಕಾರಿಗಳು ಸಂಘದ ಬೈಲಾ ಪ್ರಕಾರ ಚುನಾವಣೆ ನಡೆಸಿ ನೂತನ ಪದಾಧಿಕಾರಿಗಳು ಆಯ್ಕೆಯಾಗುವವರೆಗೂ ಮುಂದುವರೆಯಲಿದ್ದು, ಮುಂದಿನ ೬ ತಿಂಗಳ ಒಳಗೆ ಸಂಘಕ್ಕೆ ಚುನಾವಣೆ ನಡೆಸುವುದು ಅನಿವಾರ್ಯವಾಗಿದೆ. ಈ ಕುರಿತು ಸಹಕಾರ ಇಲಾಖೆ ಅಧೀನ ಕಾರ್ಯದರ್ಶಿ ಎಚ್.ಸಿ ರಾಧ ರಾಜ್ಯಪಾಲರ ಆದೇಶಾನುಸಾರ ಸುತ್ತೋಲೆ ಹೊರಡಿಸಿದ್ದಾರೆ.
No comments:
Post a Comment