Saturday, January 29, 2022

ಅಂಬೇಡ್ಕರ್‌ಗೆ ಅವಮಾನ : ನ್ಯಾಯಾಧೀಶರ ಬಂಧನಕ್ಕೆ ಆಗ್ರಹ


ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅವಮಾನಗೊಳಿಸಿರುವ ರಾಯಚೂರು ಜಿಲ್ಲಾ ನ್ಯಾಯಧೀಶ ಮಲ್ಲಿಕಾರ್ಜುನ ಗೌಡ ಪಾಟೀಲ್‌ರವರನ್ನು ಹುದ್ದೆಯಿಂದ ತಕ್ಷಣ ಅಮಾನತ್ತು ಮಾಡಿ ಬಂಧಿಸುವ ಮೂಲಕ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭದ್ರಾವತಿ ತಾಲೂಕು ಬಂಜಾರ ಯುವಕರ ಸಂಘದ ವತಿಯಿಂದ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಜ. ೨೯:  ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅವಮಾನಗೊಳಿಸಿರುವ ರಾಯಚೂರು ಜಿಲ್ಲಾ ನ್ಯಾಯಧೀಶ ಮಲ್ಲಿಕಾರ್ಜುನ ಗೌಡ ಪಾಟೀಲ್‌ರವರನ್ನು ಹುದ್ದೆಯಿಂದ ತಕ್ಷಣ ಅಮಾನತ್ತು ಮಾಡಿ ಬಂಧಿಸುವ ಮೂಲಕ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ತಾಲೂಕು ಬಂಜಾರ ಯುವಕರ ಸಂಘದ ವತಿಯಿಂದ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
    ದೇಶದ ಸಂವಿಧಾನ ದಿನದಂದು ಈ ದೇಶಕ್ಕೆ ಸಂವಿಧಾನ ನೀಡಿದ ವಿಶ್ವಜ್ಞಾನಿ, ಮಹಾಮಾನವತಾವಾದಿ ಡಾ. ಬಿ.ಆರ್ ಅಂಬೇಡ್ಕರ್‌ರವರಿಗೆ ಅಗೌರವ ಉಂಟು ಮಾಡಿರುವುದು ಪ್ರಜಾಪ್ರಭುತ್ವ ಸಮಾಜ ತಲೆ ತಗ್ಗಿಸುವಂತಾಗಿದೆ. ಜಾತಿ ಆಧಾರದ ಮೇಲೆ ಅಂಬೇಡ್ಕರ್‌ರವರನ್ನು ಅವಮಾನಿಸಿರುವ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಪಾಟೀಲ್ ವಿರುದ್ಧ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತಕ್ಷಣ ಬಂಧಿಸಬೇಕೆಂದು ಆಗ್ರಹಿಸಲಾಗಿದೆ.
    ಮನವಿಯನ್ನು ಸಂಘದ ಅಧ್ಯಕ್ಷ ಪಿ. ಕೃಷ್ಣನಾಯ್ಕ ನೇತೃತ್ವದಲ್ಲಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.
    ಪ್ರಮುಖರಾದ ನಾಗನಾಯ್ಕ, ಚಂದ್ರನಾಯ್ಕ, ಶಂಕರನಾಯ್ಕ ಮತ್ತು ಪ್ರವೀಣ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment