ಭದ್ರಾವತಿ ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿಜೇತರಾದ ಮಕ್ಕಳಿಗೆ ಶುಕ್ರವಾರ ಬಹುಮಾನಗಳನ್ನು ವಿತರಿಸಲಾಯಿತು.
ಭದ್ರಾವತಿ, ಜ. ೧೪: ನಗರದ ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿಜೇತರಾದ ಮಕ್ಕಳಿಗೆ ಶುಕ್ರವಾರ ಬಹುಮಾನಗಳನ್ನು ವಿತರಿಸಲಾಯಿತು.
ಶಿವಸಾಯಿಕೃಪ ಧಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾ ಕಾರಂಜಿಯಲ್ಲಿ ವಿಜೇತರಾದ ೧ ರಿಂದ ೫ನೇ ತರಗತಿವರೆಗಿನ ಶಾಲಾ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಿ ಅಭಿನಂದಿಸಲಾಯಿತು. ಶಾಲೆಯ ಪ್ರಾಂಶುಪಾಲ ಶ್ಯಾಮರಾಯ ಆಚಾರ್ ಹಾಗು ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment