Saturday, January 15, 2022

ವಾರಾಂತ್ಯ ಕರ್ಪ್ಯೂ ನಡುವೆ ಶ್ರೀ ಗುರುಸಿದ್ದರಾಮೇಶ್ವರ ಜಯಂತಿ

ವಾರಾಂತ್ಯ ಕರ್ಪ್ಯೂ ನಡುವೆ ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗು ಭೋವಿ ಅಭಿವೃದ್ಧಿ ಸಂಘದ ವತಿಯಿಂದ ಶನಿವಾರ ತಾಲೂಕು ಕಛೇರಿ ಸಭಾಂಗಣದಲ್ಲಿ ಶಿವಯೋಗಿ ಶ್ರೀ ಗುರುಸಿದ್ದರಾಮೇಶ್ವರರ ೮೪೯ನೇ ಜಯಂತಿ ಸರಳವಾಗಿ ನಡೆಯಿತು
    ಭದ್ರಾವತಿ, ಜ. ೧೫: ವಾರಾಂತ್ಯ ಕರ್ಪ್ಯೂ ನಡುವೆ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗು ಭೋವಿ ಅಭಿವೃದ್ಧಿ ಸಂಘದ ವತಿಯಿಂದ ಶನಿವಾರ ತಾಲೂಕು ಕಛೇರಿ ಸಭಾಂಗಣದಲ್ಲಿ ಶಿವಯೋಗಿ ಶ್ರೀ ಗುರುಸಿದ್ದರಾಮೇಶ್ವರರ ೮೪೯ನೇ ಜಯಂತಿ ಸರಳವಾಗಿ ನಡೆಯಿತು.
    ಶ್ರೀ ಗುರುಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ತಹಸೀಲ್ದಾರ್ ಆರ್. ಪ್ರದೀಪ್ ನಿಕ್ಕಮ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜ ಸುಧಾರಣೆಯಲ್ಲಿ ಶ್ರೀ ಗುರುಸಿದ್ದರಾಮೇಶ್ವರರ ಪಾತ್ರ ಕುರಿತು ಸ್ಮರಿಸಲಾಯಿತು.
    ಭೋವಿ ಅಭಿವೃದ್ಧಿ ಸಂಘದ ಅಧ್ಯಕ್ಷ, ನಗರಸಭೆ ಹಿರಿಯ ಸದಸ್ಯ ಬಿ.ಟಿ ನಾಗರಾಜ್, ಗೌರವಾಧ್ಯಕ್ಷ ಎಂ. ರಾಮು, ಪ್ರಮುಖರಾದ ಚೌಡಪ್ಪ, ಅಣ್ಣಮಲೈ, ಉಪಾಧ್ಯಕ್ಷರಾದ ಆನಂದ್, ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಸಿದ್ದಪ್ಪ, ನಿರ್ದೇಶಕ ತಮ್ಮಯ್ಯ, ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ ಸೇರಿದಂತೆ ಭೋವಿ ಸಮಾಜದ ಪ್ರಮುಖರು, ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಿನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

No comments:

Post a Comment