ಟಿ. ಮಂಜಪ್ಪ
ಭದ್ರಾವತಿ, ಜ. ೩೦: ಜೇಡಿಕಟ್ಟೆ ಗ್ರಾಮದ ಹಿರಿಯ ರೈತ ಮುಖಂಡ, ಶ್ರೀ ಮರುಳ ಸಿದ್ದೇಶ್ವರ ಜನ ಕಲ್ಯಾಣ ಟ್ರಸ್ಟ್ ಗೌರವ ಸಲಹೆಗಾರ ಟಿ. ಮಂಜಪ್ಪ ಶನಿವಾರ ನಿಧನ ಹೊಂದಿದರು.
ಮೂವರು ಗಂಡು, ಇಬ್ಬರು ಹೆಣ್ಣು ಮಕ್ಕಳನ್ನು ಹೊಂದಿದ್ದರು. ಮಂಜಪ್ಪ ಅವರು ಸಾಮಾಜಿಕ ಹೋರಾಟಗಾರರಾಗಿ ಸಹ ಗುರುತಿಸಿಕೊಂಡಿದ್ದರು. ಇವರ ನಿಧನಕ್ಕೆ ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಮರುಳ ಸಿದ್ದೇಶ್ವರ ಜನ ಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯ ಹಾಗು ಪದಾಧಿಕಾರಿಗಳು, ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭಾ ಸದಸ್ಯೆ ರೇಖಾ ಪ್ರಕಾಶ್, ಮಾಜಿ ಸದಸ್ಯರಾದ ಕೆ.ಬಿ ಗಂಗಾಧರ್, ಎಂ.ಎ ಅಜಿತ್ ಸೇರಿದಂತೆ ಇನ್ನಿತರರ ಗಣ್ಯರು ಸಂತಾಪ ಸೂಚಿಸಿದ್ದಾರೆ.
No comments:
Post a Comment