ಶನಿವಾರ, ಜನವರಿ 29, 2022

ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಯಾಣಿಕ ಸಾವು

    ಭದ್ರಾವತಿ, ಜ. ೨೯: ಆಕಸ್ಮಿಕವಾಗಿ ರೈಲಿಗೆ ಕಾಲು ಸಿಲುಕಿಕೊಂಡು ಪ್ರಯಾಣಿಕನೋರ್ವ ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ನಗರದ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
    ರಾತ್ರಿ ಬೆಂಗಳೂರಿನಿಂದ ಆಗಮಿಸಿದ ಇಂಟರ್‌ಸಿಟಿ ರೈಲು ನಗರದ ರೈಲ್ವೆ ನಿಲ್ದಾಣದಲ್ಲಿನಿಲುಗಡೆಗೊಂಡಾಗ ಪ್ರಯಾಣಿಕ, ಶಿರಸಿ ಸಿದ್ದಾಪುರದ ನಿವಾಸಿ ಪ್ರಕಾಶ್ ಪುಂಡಲೀಕ ಶಾನುಬೋಗ್(೫೫) ರೈಲಿನಿಂದ ಕೆಳಗೆ ಇಳಿದಿದ್ದು, ರೈಲು ಹೊರಡುವಾಗ ಪುನಃ ಹತ್ತಲು ಹೋಗಿ ಕಾಲು ಜಾರಿ ಬಿದ್ದಿದ್ದಾರೆ.
    ಈ ಸಂದರ್ಭದಲ್ಲಿ ರೈಲಿಗೆ ಸಿಲುಕಿಕೊಂಡು ಮೃತಪಟ್ಟಿದ್ದಾರೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ