೬೨೨ನೇ ವಚನ ಮಂಟಪ ಮತ್ತು ದತ್ತಿ ಕಾರ್ಯಕ್ರಮದ ಅಂಗವಾಗಿ ಭದ್ರಾವತಿ ಹೊಸಮನೆ ಸುಭಾಷ್ ನಗರದ ಕಮಲಕುಮಾರಿಯವರ ನಿವಾಸದಲ್ಲಿ ಆಯೋಜಿಸಲಾಗಿದ್ದ ಹಿರೇನಲ್ಲೂರು ಎಚ್.ಎಸ್ ವೀರಸಂಗಪ್ಪ ದತ್ತಿ ಮತ್ತು ಗ್ಯಾರಹಳ್ಳಿ ರಂಗಪ್ಪ ಗಂಗಮ್ಮ ದತ್ತಿ ಕಾರ್ಯಕ್ರಮ ಪಿರಮಿಡ್ ಧ್ಯಾನ ಕೇಂದ್ರದ ಶುಭ ಉದ್ಘಾಟಿಸಿದರು.
ಭದ್ರಾವತಿ, ಜ. ೨೩: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ತಾಲೂಕು ಶಾಖೆ ವತಿಯಿಂದ ಕದಳಿ ಮಹಿಳಾ ವೇದಿಕೆ ಸಹಯೋಗದೊಂದಿಗೆ ೬೨೨ನೇ ವಚನ ಮಂಟಪ ಮತ್ತು ದತ್ತಿ ಕಾರ್ಯಕ್ರಮದ ಅಂಗವಾಗಿ ಹೊಸಮನೆ ಸುಭಾಷ್ ನಗರದ ಕಮಲಕುಮಾರಿಯವರ ನಿವಾಸದಲ್ಲಿ ಹಿರೇನಲ್ಲೂರು ಎಚ್.ಎಸ್ ವೀರಸಂಗಪ್ಪ ದತ್ತಿ ಮತ್ತು ಗ್ಯಾರಹಳ್ಳಿ ರಂಗಪ್ಪ ಗಂಗಮ್ಮ ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಪಿರಮಿಡ್ ಧ್ಯಾನ ಕೇಂದ್ರದ ಶುಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಪ್ರಮುಖರಾದ ಕತ್ತಲಗೆರೆ ತಿಮ್ಮಪ್ಪ ಅಧ್ಯಕ್ಷತೆ ವಹಿಸಿದ್ದರು. ಕದಳಿ ಮಹಿಳಾ ವೇದಿಕೆ ಸಂಚಾಲಕಿ ಹೇಮಾವತಿ ಚಿಗಟೇರಪ್ಪ, ನಿವೃತ್ತ ಶಿಕ್ಷಕಿ ದಾಕ್ಷಾಯಣಮ್ಮ, ಮಲ್ಲಿಕಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಮಲಕುಮಾರಿ ಸ್ವಾಗತಿಸಿದರು. ತರುಣ ಭಾರತಿ ಶಾಲೆ ಶಿಕ್ಷಕಿ ಸವಿತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
No comments:
Post a Comment