Monday, February 7, 2022

ಫೆ.೧೦ರಂದು ಸೀಳುತುಟಿ, ಸೀಳು ಅಂಗಳ ಪೀಡಿತರ ಗುರುತಿಸುವಿಕೆ, ಉಚಿತ ಶಸ್ತ್ರ ಚಿಕಿತ್ಸಾ ಶಿಬಿರ

    ಭದ್ರಾವತಿ, ಫೆ. ೭: ಬೆಂಗಳೂರಿನ ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆ, ಸ್ಮೈಲ್ ಟ್ರೈನ್ ಹಾಗು ಚಿರಂತನ ಟ್ರಸ್ಟ್ ವತಿಯಿಂದ ತಾಲೂಕು ಆರೋಗ್ಯ ಇಲಾಖೆ ಹಾಗು ಸಾರ್ವಜನಿಕ ಆಸ್ಪತ್ರೆ ಮತ್ತು ಶಿಶು ಅಭಿವೃದ್ಧಿ ಯೋಜನಾ ಇಲಾಖೆ ಸಹಯೋಗದೊಂದಿಗೆ ಫೆ.೧೦ ರಂದು ಬೆಳಿಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೧ ಗಂಟೆವರೆಗೆ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಸೀಳುತುಟಿ ಮತ್ತು ಸೀಳು ಅಂಗಳ ಪೀಡಿತರನ್ನು ಗುರುತಿಸುವಿಕೆ ಮತ್ತು ಉಚಿತ ಶಸ್ತ್ರ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ.
    ಎಲ್ಲಾ ವಯಸ್ಸಿನವರು ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಹಿಂದೆ ಬೇರೆ ಬೇರೆ ಕಡೆ ತಪಾಸಣೆ, ಶಸ್ತ್ರ ಚಿಕಿತ್ಸೆಯಲ್ಲಿ ಪಾಲ್ಗೊಂಡವರು ಸಹ ಮರು ತಪಾಸಣೆ ಮಾಡಿಸಿಕೊಳ್ಳಬಹುದಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಕೆ.ಎಸ್ ಮನೋಹರ್, ಶಿಬಿರದ ಸಂಚಾಲಕರು, ಮೊ: ೭೦೧೯೨೫೮೦೦೫ ಅಥವಾ ೯೯೬೪೦೭೮೨೨೨ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

No comments:

Post a Comment