ಆರ್.ಜೆ ನರೇಶ್
ಭದ್ರಾವತಿ ಫೆ.೧೦: ಶಾಸಕ ಬಿ.ಕೆ. ಸಂಗಮೇಶ್ವರ್ ಸಹೋದರಿಯ ಪುತ್ರ ಆರ್.ಜೆ ನರೇಶ್(೩೩) ಅನಾರೋಗ್ಯದಿಂದ ನಿಧನ ಹೊಂದಿದರು.
ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ ನರೇಶ್ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಇವರ ಅಂತ್ಯಕ್ರಿಯೆ ಗುರುವಾರ ಹಳೇನಗರ ವೀರಶೈವ ರುದ್ರಭೂಮಿಯಲ್ಲಿ ನೆರವೇರಿತು. ಇವರ ನಿಧನಕ್ಕೆ ನಗರದ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ.
No comments:
Post a Comment