Wednesday, February 16, 2022

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಬಡ ಕುಟುಂಬಕ್ಕೆ ಶಾಸಕರಿಂದ ೧ ಲಕ್ಷ ರು. ಆರ್ಥಿಕ ನೆರವು

ಭದ್ರಾವತಿ ತಾಲೂಕಿನ ಮಾರುತಿ ನಗರದ ಬಳಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಬಳಿ ಇತ್ತೀಚಿಗೆ ಅಪಘಾತದಲ್ಲಿ ಮೃತಪಟ್ಟಿದ್ದ ಕಾಗದ ನಗರದ ನಿವಾಸಿ, ವಿಐಎಸ್‌ಎಲ್ ಕಾರ್ಖಾನೆಯ ಗುತ್ತಿಗೆ ಕಾರ್ಮಿಕ ಉಮೇಶ್ ಕುಟುಂಬಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ವೈಯಕ್ತಿಕವಾಗಿ ೧ ಲಕ್ಷ ರು. ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ.
    ಭದ್ರಾವತಿ, ಫೆ. ೧೬: ತಾಲೂಕಿನ ಮಾರುತಿ ನಗರದ ಬಳಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಬಳಿ ಇತ್ತೀಚಿಗೆ ಅಪಘಾತದಲ್ಲಿ ಮೃತಪಟ್ಟಿದ್ದ ಕಾಗದ ನಗರದ ನಿವಾಸಿ, ವಿಐಎಸ್‌ಎಲ್ ಕಾರ್ಖಾನೆಯ ಗುತ್ತಿಗೆ ಕಾರ್ಮಿಕ ಉಮೇಶ್ ಕುಟುಂಬಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ವೈಯಕ್ತಿಕವಾಗಿ ೧ ಲಕ್ಷ ರು. ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ.
    ಬಡ ಕುಟುಂಬಕ್ಕೆ ಗುತ್ತಿಗೆದಾರರಿಂದ ೪ ಲಕ್ಷ ರು. ಪರಿಹಾರ ಕೊಡಿಸುವ ಜೊತೆಗೆ ಶಾಸಕರು ವೈಯಕ್ತಿಕವಾಗಿ ೧ ಲಕ್ಷ ರು. ನೆರವು ನೀಡುವ ಜೊತೆಗೆ ಉಮೇಶ್‌ರವರ ಪತ್ನಿಗೆ ಅಂಗನವಾಡಿ ಕೇಂದ್ರದಲ್ಲಿ ಸೂಕ್ತ ಉದ್ಯೋಗ ಕೊಡಿಸುವ ಭರವಸೆ ನೀಡಿದರು.
    ಮಾಜಿ ನಗರಸಭಾ ಸದಸ್ಯ ಮಹೇಶ್, ಸ್ಥಳೀಯ ಮುಖಂಡರಾದ ಚುಕ್ಕೇಗೌಡ, ಮಹೇಶ್, ಕಾಗದನಗರ ಕಟ್ಟೆ ಬಾಯ್ಸ್‌ನ ಪ್ರಮುಖರು, ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment