Monday, February 28, 2022

ಸಾವಯುವ ಸಿರಿ ಯೋಜನೆ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

ಭದ್ರಾವತಿ, ಫೆ. ೨೮: ರಾಜ್ಯದಲ್ಲಿ ಹೊಸ ಸಾವಯುವ ಕೃಷಿ ಉತ್ತೇಜನಗೊಳಿಸಲು, ಜನರಿಗೆ ಆರೋಗ್ಯಕರ ಹಾಗು ರಾಸಾಯನಿಕ ಮುಕ್ತ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳನ್ನು ಒದಗಿಸಲು ಸರ್ಕಾರ ಇದೀಗ ಸಾವಯುವ ಸಿರಿ ಯೋಜನೆಯನ್ನು ಘೋಷಿಸಿದ್ದು, ಈ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕೃಷಿ ಇಲಾಖೆ ರೈತರ ಗುಂಪು ಅಥವಾ ಸಂಘ ಅಥವಾ ಒಕ್ಕೂಟಗಳಿಂದ ಅರ್ಜಿ ಆಹ್ವಾನಿಸಿದೆ.
    ಸಾರ್ವಯುವ ಕೃಷಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಹಾಗು ೧೦ ವರ್ಷಗಳ ಅನುಭವವುಳ್ಳ ಜವಾಬ್ದಾರಿಯುತ ಸ್ಥಳೀಯ ನೋಂದಾಯಿತ ಸಾವಯುವ ರೈತರ ಗುಂಪು ಅಥವಾ ಸಂಘ ಅಥವಾ ಒಕ್ಕೂಟ ಮಾ.೫ರ ಸಂಜೆ ೪ ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಹಾಯಕ ನಿರ್ದೇಶಕ ಬಿ.ಸಿ ಶಶಿಧರ ಕೋರಿದ್ದಾರೆ.

No comments:

Post a Comment