ಭದ್ರಾವತಿ, ಫೆ. ೧೧: ತಾಲೂಕಿನ ಮೆಸ್ಕಾಂ ಕೂಡ್ಲಿಗೆರೆ ೬೬/೧೧ ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಲಿ ಲಿಂಕ್ಲೈನ್ ಕಾಮಗಾರಿ ಮತ್ತು ಸೀಗೆಬಾಗಿ ೬೬/೧೧ ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ಎಸ್.ಎಫ್-೧ ಭದ್ರಾ ಕಾಲೋನಿ ಮತ್ತು ಎಸ್.ಎಫ್ -೨ ವೀರಾಪುರ ಫೀಡರ್ನಲ್ಲಿ ೧೧ ಕೆ.ವಿ ಮಾರ್ಗವನ್ನು ಸ್ಥಳಾಂತರಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.೧೩ರಂದು ಬೆಳಿಗ್ಗೆ ೯.೩೦ರಿಂದ ಸಂಜೆ ೬ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಬದನೆಹಾಳ್, ಬೆಳ್ಳಿಗೆರೆ, ಬಂಡಿಗುಡ್ಡ, ಹೊಸಹಳ್ಳಿ, ಕಲ್ಪನಹಳ್ಳಿ, ಕೂಡ್ಲಿಗೆರೆ, ಅರಳಿಹಳ್ಳಿ, ಗುಡ್ಡದನೇರಲಕೆರೆ, ಕಲ್ಲಾಪುರ, ದಾನವಾಡಿ, ಡಿ.ಬಿ ಹಳ್ಳಿ, ಅರಕೆರೆ, ಮಾರಶೆಟ್ಟಿಹಳ್ಳಿ, ಕಲ್ಲಿಹಾಳ್, ಅರಕೆರೆ, ಅರಬಳಚಿ, ತಿಮ್ಲಾಪುರ, ಕಣಕಟ್ಟೆ, ಭದ್ರಾಕಾಲೋನಿ, ಮಜ್ಜಿಗೇನಹಳ್ಳಿ, ಬಾಬಳ್ಳಿ, ಗೌಡ್ರಹಳ್ಳಿ, ಅಂಬೇಡ್ಕರ್ ಬೀದಿ, ಲಕ್ಷ್ಮೀಪುರ, ವೀರಾಪುರ, ಸೈಯ್ಯದ್ ಕಾಲೋನಿ, ಸೀಗೆಬಾಗಿ, ಸತ್ಯಸಾಯಿ ನಗರ ಮತ್ತು ಕೈಗಾರಿಕಾ ಪ್ರದೇಶ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೋರಿದ್ದಾರೆ.
No comments:
Post a Comment