Wednesday, February 2, 2022

ಸರ್‌ಎಂವಿ ಕಾಲೇಜಿಗೆ ತಹಸೀಲ್ದಾರ್ ಪ್ರದೀಪ್ ಆರ್ ನಿಕ್ಕಮ್ ಭೇಟಿ : ಪರಿಶೀಲನೆ

ಭದ್ರಾವತಿ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಕಳೆದ ಕೆಲವು ದಿನಗಳಿಂದ ಉಂಟಾಗಿರುವ ಗೊಂದಲದ ವಾತಾವರಣದ ಹಿನ್ನಲೆಯಲ್ಲಿ ಬುಧವಾರ ತಹಸೀಲ್ದಾರ್ ಪ್ರದೀಪ್ ಆರ್ ನಿಕ್ಕಮ್ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾಲೇಜು ಆಡಳಿತ ಮಂಡಳಿ ಜೊತೆಗೆ ಚರ್ಚಿಸಿದರು.
    ಭದ್ರಾವತಿ, ಫೆ. ೨: ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಕಳೆದ ಕೆಲವು ದಿನಗಳಿಂದ ಉಂಟಾಗಿರುವ ಗೊಂದಲದ ವಾತಾವರಣದ ಹಿನ್ನಲೆಯಲ್ಲಿ ಬುಧವಾರ ತಹಸೀಲ್ದಾರ್ ಪ್ರದೀಪ್ ಆರ್ ನಿಕ್ಕಮ್ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
    ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಬರುವ ಸಂಬಂಧ ಕಾಲೇಜಿನಲ್ಲಿ ಮಂಗಳವಾರ ಉಂಟಾಗಿದ್ದ ಗೊಂದಲದ ವಾತಾವರಣದ ಹಿನ್ನಲೆಯಲ್ಲಿ ತಹಸೀಲ್ದಾರ್ ಪ್ರದೀಪ್ ಆರ್ ನಿಕ್ಕಮ್ ಮತ್ತು ನಗರ ಪೊಲೀಸ್ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ ಹಾಗು ಗುಪ್ತ ದಳ ಸಿಬ್ಬಂದಿಗಳು ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
    ಕಾಲೇಜು ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ಯಾವುದೇ ರೀತಿ ಸಮಸ್ಯೆ ಉಂಟಾಗದಂತೆ ಎಚ್ಚರವಹಿಸುವಂತೆ ಸೂಚಿಸಿದರು. ಈ ನಡುವೆ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ. ಧನಂಜಯ ಕಾಲೇಜಿನಲ್ಲಿ ಇದೀಗ ಸಮಸ್ಯೆ ಅಂತ್ಯಕ್ಕೆ ಬಂದಿದ್ದು, ವಿದ್ಯಾರ್ಥಿಗಳು ಪೂರಕವಾಗಿ ಸ್ಪಂದಿಸುತ್ತಿದ್ದಾರೆ. ಹಿಜಾಬ್ ಸಂಬಂಧ ಈಗಾಗಲೇ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ಈ ಕುರಿತು ಮುಸ್ಲಿಂ ವಿದ್ಯಾರ್ಥಿನಿಯರಿಗೂ ತಿಳಿವಳಿಕೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.
    ಕಾಲೇಜಿನ ಉಪನ್ಯಾಸಕರಾದ ಡಾ. ಮಂಜುನಾಥ್, ಶಿವರುದ್ರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಕೇಸರಿ ವಸ್ತ್ರದೊಂದಿಗೆ ತರಗತಿಗೆ ಹಾಜರು:
    ಕಾಲೇಜಿನಲ್ಲಿ ಬುಧವಾರ ಮತ್ತು ಶನಿವಾರ ಸಮವಸ್ತ್ರ ಕಡ್ಡಾಯಗೊಳಿಸದಿರುವ ಹಿನ್ನಲೆಯಲ್ಲಿ ಯಾವುದೇ ಸಮಸ್ಯೆ ಕಂಡು ಬರಲಿಲ್ಲ. ಆದರೆ ಈ ನಡುವೆ ಕೆಲವು ಹಿಂದೂ ವಿದ್ಯಾರ್ಥಿಗಳು ಕೇಸರಿ ವಸ್ತ್ರದೊಂದಿಗೆ ತರಗತಿಗಳಿಗೆ ಹಾಜರಾದರು. ಆದರೆ ಯಾವುದೇ ಅಹಿತಕರ ಘಟನೆಗಳು ನಡೆಯಲಿಲ್ಲ.  

No comments:

Post a Comment