Friday, February 11, 2022

ಶ್ರೀ ಚೌಡೇಶ್ವರಿ ದೇವಸ್ಥಾನ ಲೋಕಾರ್ಪಣೆ : ಧಾರ್ಮಿಕ ಸಭೆ


ಭದ್ರಾವತಿ ತಾಲೂಕಿನ ಕುಮರಿ ನಾರಾಯಣಪುರದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಚೌಡೇಶ್ವರಿ ದೇವಸ್ಥಾನದ ಲೋಕಾರ್ಪಣೆ ಶುಕ್ರವಾರ ನೆರವೇರಿತು. ಈ ಸಂಬಂಧ ಧಾರ್ಮಿಕ ಸಭೆಯಲ್ಲಿ ಆಯೋಜಿಸಲಾಗಿತ್ತು.
    ಭದ್ರಾವತಿ, ಫೆ. ೧೧: ತಾಲೂಕಿನ ಕುಮರಿ ನಾರಾಯಣಪುರದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಚೌಡೇಶ್ವರಿ ದೇವಸ್ಥಾನದ ಲೋಕಾರ್ಪಣೆ ಶುಕ್ರವಾರ ನೆರವೇರಿತು.
    ಲೋಕಾರ್ಪಣೆ ಅಂಗವಾಗಿ ಆಯೋಜಿಸಲಾಗಿದ್ದ ಧಾರ್ಮಿಕ ಸಭೆಯಲ್ಲಿ ಶ್ರೀ ಕ್ಷೇತ್ರ ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಶ್ರೀ ಗುಣನಂದನಾಥ ಸ್ವಾಮೀಜಿ ಮತ್ತು ಅರಕೆರೆ ವಿರಕ್ತ ಮಠದ ಶ್ರೀ ಕರಿಸಿದ್ದೇಶ್ವರ ಸ್ವಾಮೀಜಿ ದಿವ್ಯ ಸಾನಿಧ್ಯವಹಿಸಿದ್ದರು.
ಶಾಸಕ ಬಿ.ಕೆ ಸಂಗಮೇಶ್ವರ್, ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ, ಎಸ್. ಮಣಿಶೇಖರ್, ಎಪಿಎಂಸಿ ಸದಸ್ಯೆ ರತ್ನಮ್ಮ,  ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ವೆಂಕಟೇಶ್ ಹಾಗು ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಇದಕ್ಕೂ ಮೊದಲು ವಿವಿಧ ಧಾರ್ಮಿಕ ಆಚರಣೆಗಳು ಜರುಗಿದವು. ಕುಮರಿ ನಾರಾಯಣಪುರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರು ಸೇರಿದಂತೆ ಭಕ್ತಾಧಿಗಳು ಪಾಲ್ಗೊಂಡಿದ್ದರು.

No comments:

Post a Comment