Wednesday, February 16, 2022

ನಾಡೋಜ ಡಾ. ಚೆನ್ನವೀರ ಕಣವಿಗೆ ನುಡಿನಮನ

ಭದ್ರಾವತಿ ನ್ಯೂಟೌನ್ ಪರಿಷತ್ ಕಚೇರಿಯಲ್ಲಿ ಬುಧವಾರ ಸಂಜೆ ಪರಿಷತ್ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಅಧ್ಯಕ್ಷತೆಯಲ್ಲಿ ನುಡಿನಮನ ಕಾರ್ಯಕ್ರಮದ ಮೂಲಕ ಡಾ. ಚೆನ್ನವೀರ ಕಣವಿಯವರಿಗೆ ಸಂತಾಪ ಸೂಚಿಸಲಾಯಿತು.  
    ಭದ್ರಾವತಿ, ಫೆ. ೧೬: ನಾಡಿನ ಹಿರಿಯ ಕವಿ, ನಾಡೋಜ ಡಾ. ಚೆನ್ನವೀರ ಕಣವಿಯವರ ನಿಧನಕ್ಕೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂತಾಪ ಸೂಚಿಸಿದೆ.
    ನ್ಯೂಟೌನ್ ಪರಿಷತ್ ಕಚೇರಿಯಲ್ಲಿ ಬುಧವಾರ ಸಂಜೆ ಪರಿಷತ್ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಅಧ್ಯಕ್ಷತೆಯಲ್ಲಿ ನುಡಿನಮನ ಕಾರ್ಯಕ್ರಮದ ಮೂಲಕ ಡಾ. ಚೆನ್ನವೀರ ಕಣವಿಯವರಿಗೆ ಸಂತಾಪ ಸೂಚಿಸಲಾಯಿತು.  
    ಪರಿಷತ್ ಕಾರ್ಯದರ್ಶಿ ಎಚ್. ತಿಮ್ಮಪ್ಪ, ಕಾರ್ಯಕಾರಿ ಸಮಿತಿ ಸದಸ್ಯೆ ಇಂದಿರಾ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ, ಉಪಾಧ್ಯಕ್ಷೆ ಸುಮತಿ ಕಾರಂತ್, ಪ್ರಧಾನ ಕಾರ್ಯದರ್ಶಿ ಪೀಟರ್, ಕಲಾವಿದ ಗುರು ಹಾಗೂ ನಿವೃತ್ತ ನೌಕರರ ಸಂಘದ ಸದಸ್ಯರು ಹಾಗೂ ಸಾಹಿತ್ಯಭಿಮಾನಿಗಳು ಉಪಸ್ಥಿತರಿದ್ದರು.
    ಸಂತಾಪ :
    ಸಮನ್ವಯ ಕವಿ ನಾಡೋಜ ಡಾ. ಚೆನ್ನವೀರ ಕಣವಿಯವರ ನಿಧನಕ್ಕೆ ಶಿವಮೊಗ್ಗ ಜಿಲ್ಲಾ ವೀರಶೈವ ಮಠಾಧಿಪತಿ ಪರಿಷತ್ ಸಂತಾಪ ಸೂಚಿಸಿದೆ.
    ಪರಿಷತ್ ಪರವಾಗಿ ಬಿಳಿಕಿ ಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ಕಣವಿಯವರ ನಿಧನಕ್ಕೆ ಸಂತಾಪ ಸೂಚಿಸಿ ಗೌರವ ಸಲ್ಲಿಸಿದ್ದಾರೆ.

No comments:

Post a Comment