Saturday, February 5, 2022

ಕನ್ನಡದ ಕಬೀರ ಇಬ್ರಾಹಿಂ ಸುತಾರ ನಿಧನಕ್ಕೆ ಶಾಸಕರ ಸಂತಾಪ

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಂ ಸುತಾರ
    ಭದ್ರಾವತಿ, ಫೆ. ೫ : ಕನ್ನಡದ ಕಬೀರ ಎಂದೇ ಖ್ಯಾತರಾದ ಹಾಗು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಇಬ್ರಾಹಿಂ ಸುತಾರ ಅವರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಸಂತಾಪ ಸೂಚಿಸಿದ್ದಾರೆ.
    ಇವರ ನಿಧನದಿಂದ ಭಾವೈಕ್ಯತಾ ತತ್ವಜ್ಞಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಭಾವೈಕ್ಯತೆಯನ್ನು ಜನರ ಮನದಲ್ಲಿ ಬಿತ್ತುವಲ್ಲಿ ಸಮರ್ಪಣಾ ಮನೋಭಾವದಿಂದ ಸೇವೆ ಸಲ್ಲಿಸಿರುತ್ತಾರೆ. ಇವರ ವಿಚಾರಧಾರೆಗಳು, ಸರಳ ಸಜ್ಜನ ನಡವಳಿಕೆಗಳು, ಬಸವಣ್ಣನವರ ಬಗ್ಗೆ ಹೊಂದಿದ್ದ ಅಪಾರ ಗೌರವಗಳು ಇವರನ್ನು ಜನಮಾನಸದಲ್ಲಿ ನೆಲೆ ನಿಲ್ಲುವಂತೆ ಮಾಡಿವೆ. ಇಂತಹ ಮಹಾನ್ ಆದರ್ಶ ವ್ಯಕ್ತಿಗೆ ಅಂತಿಮ ಗೌರವ ಪೂರ್ವಕ ನಮನ ಸಲ್ಲಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

No comments:

Post a Comment