ಶನಿವಾರ, ಫೆಬ್ರವರಿ 12, 2022

ರವಿಕುಮಾರ್ ನಿಧನ

ರವಿಕುಮಾರ್
    ಭದ್ರಾವತಿ, ಫೆ. ೧೨: ಹಳೇನಗರದ ಶ್ರೀ ಹಳದಮ್ಮ ದೇವಿ ದೇವಸ್ಥಾನ ಸಮೀಪದ ನಿವಾಸಿ, ಆಟೋ ಚಾಲಕ ರವಿಕುಮಾರ್(೪೫) ಶನಿವಾರ ಹೃದಯಾಘಾತದಿಂದ ನಿಧನ ಹೊಂದಿದರು.
    ತಾಯಿ ಹಾಗು ಇಬ್ಬರು ಗಂಡು ಮಕ್ಕಳನ್ನು ಹೊಂದಿದ್ದರು. ರವಿಕುಮಾರ್ ಕಳೆದ ಸುಮಾರು ೨೫ ವರ್ಷಗಳಿಂದ ಪುರಾಣ ಪ್ರಸಿದ್ದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ಸೇವೆ ಸಲ್ಲಿಸುತ್ತಿದ್ದರು.
    ಇವರ ನಿಧನಕ್ಕೆ ದೇವಸ್ಥಾನದ ಪ್ರಧಾನ ಅರ್ಚಕ ರಂಗನಾಥ ಶರ್ಮ ಹಾಗು ಕುಟುಂಬ ವರ್ಗದವರು ಸಂತಾಪ ಸೂಚಿಸಿದ್ದು, ದೇವರು ಇವರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ ಹಾಗು ಕುಟುಂಬ ವರ್ಗಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ