Saturday, February 5, 2022

ಸುಮಾರು ೧ ವರ್ಷದ ನಂತರ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಒಪ್ಪಿಗೆ ನೀಡದ ಸರ್ಕಾರ

ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳ ವಿರುದ್ಧ ಇಲಾಖೆ ವಿಚಾರಣೆ


ಭದ್ರಾವತಿ ಅರಣ್ಯ ವಿಭಾಗದಲ್ಲಿ ನಡೆದಿರುವ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು, ಸಿಬ್ಬಂದಿಗಳ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಸರ್ಕಾರ ನಿರಾಕರಿಸಿ ಹಿಂಬರಹ ನೀಡಿರುವುದು.
    ಭದ್ರಾವತಿ, ಫೆ. ೫: ಇಲ್ಲಿನ ಅರಣ್ಯ ವಿಭಾಗದಲ್ಲಿ ನಡೆದಿರುವ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಸರ್ಕಾರ ನಿರಾಕರಿಸಿದೆ.
    ಅರಣ್ಯ ವಿಭಾಗದಲ್ಲಿ ನಡೆದಿರುವ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಅನುಮತಿ ನೀಡುವಂತೆ ಅಗತ್ಯ ದಾಖಲೆಗಳೊಂದಿಗೆ ತಾಲೂಕಿನ ಉಕ್ಕುಂದ ಗ್ರಾಮದ ಸಾಮಾಜಿಕ ಕಾರ್ಯಕರ್ತ ಶಿವಕುಮಾರ್ ಡಿ.೪, ೨೦೧೯ ಮತ್ತು ಮಾ.೧೯, ೨೦೨೦ರಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಈ ಹಿನ್ನಲೆಯಲ್ಲಿ ಸರ್ಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ವಿವರವಾದ ವರದಿ ಸಲ್ಲಿಸುವಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ಅರಣ್ಯ ಪಡೆ ಮುಖ್ಯಸ್ಥರು)ಗಳಿಗೆ ಕೋರಿತ್ತು.
    ನ.೨೩, ೨೦೨೦ರಂದು  ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ಅರಣ್ಯ ಪಡೆ ಮುಖ್ಯಸ್ಥರು)ಗಳಿಂದ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದ್ದು,  ಈ ವರದಿ ಆಧಾರ ಮೇಲೆ ಇಲಾಖಾ ವಿಚಾರಣೆ ನಡೆಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ನಿರಾಕರಿಸಿದೆ ಎಂದು ಇದೀಗ ಸುಮಾರು ೧ ವರ್ಷದ ನಂತರ ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಪಿ.ವಿ ಶ್ರೀನಿವಾಸನ್ ಹಿಂಬರಹ ನೀಡಿದ್ದಾರೆ.

No comments:

Post a Comment