ಸೋಮವಾರ, ಫೆಬ್ರವರಿ 14, 2022

ಫೆ.೧೫ರಂದು ಸಂಸದರಿಂದ ರೈಲ್ವೆ ಮೇಲ್ಸೇತುವೆ ಕಾಮಗಾರಿ ವೀಕ್ಷಣೆ

    ಭದ್ರಾವತಿ, ಫೆ. ೧೪: ನಗರದ ಕಡದಕಟ್ಟೆ ರೈಲ್ವೆ ಗೇಟ್ ಬಳಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ ವೀಕ್ಷಣೆಗೆ ಫೆ.೧೫ರಂದು ಬೆಳಿಗ್ಗೆ ೮.೩೦ಕ್ಕೆ ಸಂಸದ ಬಿ.ವೈ ರಾಘವೇಂದ್ರ ಆಗಮಿಸಲಿದ್ದಾರೆ.
    ಹಲವಾರು ವರ್ಷಗಳ ಬೇಡಿಕೆಯಂತೆ ಇದೀಗ ಕಳೆದ ಕೆಲವು ದಿನಗಳಿಂದ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ಆರಂಭಗೊಂಡ ನಂತರ ಮೊದಲ ಸಂಸದ ಬಿ.ವೈ ರಾಘವೇಂದ್ರ ಭೇಟಿ ನೀಡುತ್ತಿದ್ದಾರೆ. ರೈಲ್ವೆ ಇಲಾಖೆ ಅಧಿಕಾರಿಗಳು, ಸ್ಥಳೀಯ ಮುಖಂಡರು ಉಪಸ್ಥಿತರಿರುವರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ