ಭದ್ರಾವತಿ ನಗರಸಭೆ ವಾರ್ಡ್ ನಂ.೨೦ರ ವ್ಯಾಪ್ತಿಯ ಸುರಗಿತೋಪ್ ಶ್ರೀ ಚೌಡೇಶ್ವರಿ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.
ಭದ್ರಾವತಿ, ಫೆ. ೧೨: ನಗರಸಭೆ ವಾರ್ಡ್ ನಂ.೨೦ರ ವ್ಯಾಪ್ತಿಯ ಸುರಗಿತೋಪ್ ಶ್ರೀ ಚೌಡೇಶ್ವರಿ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.
ಜಾತ್ರಾ ಮಹೋತ್ಸವದ ಅಂಗವಾಗಿ ಗಂಗಾಪೂಜೆ, ಅನ್ನಸಂತರ್ಪಣೆ, ರಾಜಬೀದಿ ಉತ್ಸವ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಎರಡು ದಿನಗಳ ಕಾಲ ನಡೆದ ಕಾರ್ಯಕ್ರಮದ ನೇತೃತ್ವವನ್ನು ವಾರ್ಡಿನ ಸದಸ್ಯೆ ಜಯಶೀಲ ಸುರೇಶ್ ವಹಿಸಿದ್ದರು.
ಶಾಸಕ ಬಿ.ಕೆ ಸಂಗಮೇಶ್ವರ್, ಪ್ರಮುಖರಾದ ಶಾರದ ಅಪ್ಪಾಜಿ, ಜಿ. ಧರ್ಮಪ್ರಸಾದ್, ಮಂಗೋಟೆ ರುದ್ರೇಶ್, ಎಸ್. ಮಣಿಶೇಖರ್, ಎಂ.ಎ ಅಜಿತ್, ನಗರಸಭೆ ಪೌರಾಯುಕ್ತ ಕೆ. ಪರಮೇಶ್, ಪರಿಸರ ಅಭಿಯಂತರ ಪ್ರಭಾಕರ್, ಮಂಜುನಾಥ್, ದೇವಸ್ಥಾನ ಟ್ರಸ್ಟ್ ಗೌರವಾಧ್ಯಕ್ಷ ರಾಮಕೃಷ್ಣ, ಅಧ್ಯಕ್ಷ ಶಿವರಾಜ್, ಉಪಾಧ್ಯಕ್ಷ ಉಮೇಶ್, ಖಜಾಂಚಿ ರವಿ, ಕಾರ್ಯದರ್ಶಿ ಪರಮೇಶ್ ಸೇರಿದಂತೆ ಪದಾಧಿಕಾರಿಗಳು, ಸುರಗಿತೋಪು, ಕಾಗದನಗರ, ಜೆಪಿಎಸ್ ಕಾಲೋನಿ, ಬಾಲಭಾರತಿ, ನ್ಯೂಟೌನ್ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ಭಕ್ತಾಧಿಗಳು ಪಾಲ್ಗೊಂಡಿದ್ದರು.
No comments:
Post a Comment