ಶಾಸಕ ಬಿ.ಕೆ ಸಂಗಮೇಶ್ವರ್ ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರ ಗುದ್ದಲಿ ಪೂಜೆ ಕಾರ್ಯಕ್ರಮ ಮುಗಿಸಿಕೊಂಡು ನಗರಕ್ಕೆ ಹಿಂದಿರುಗಿ ಬರುವಾಗ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವಯೋವೃದ್ಧ ದಂಪತಿ ರಸ್ತೆ ಮಧ್ಯದಲ್ಲಿ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದು, ಇದನ್ನು ಗಮನಿಸಿ ಶಾಸಕರು ತಮ್ಮ ಕಾರಿನಲ್ಲಿ ದಂಪತಿಯನ್ನು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಕರೆ ತರುವ ಮೂಲಕ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ.
ಭದ್ರಾವತಿ, ಫೆ. ೨: ಶಾಸಕ ಬಿ.ಕೆ ಸಂಗಮೇಶ್ವರ್ ರಸ್ತೆ ಮಧ್ಯದಲ್ಲಿ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದ ವಯೋವೃದ್ಧ ದಂಪತಿಯನ್ನು ಆಸ್ಪತ್ರೆಗೆ ಸಾಗಿಸುವ ಮೂಲಕ ಕಾಳಜಿ ಮೆರೆದಿರುವ ಘಟನೆ ಬುಧವಾರ ನಡೆದಿದೆ.
ತಾಲೂಕಿನ ಅರಳಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗುದ್ದಲಿ ಪೂಜೆ ಕಾರ್ಯಕ್ರಮ ಮುಗಿಸಿಕೊಂಡು ನಗರಕ್ಕೆ ಹಿಂದಿರುಗಿ ಬರುವಾಗ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವಯೋವೃದ್ಧ ದಂಪತಿ ರಸ್ತೆ ಮಧ್ಯದಲ್ಲಿ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದು, ಇದನ್ನು ಗಮನಿಸಿ ಶಾಸಕ ಬಿ.ಕೆ ಸಂಗಮೇಶ್ವರ್ ತಮ್ಮ ಕಾರಿನಲ್ಲಿ ದಂಪತಿಯನ್ನು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಕರೆ ತರುವ ಮೂಲಕ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ.
ವಯೋವೃದ್ಧ ದಂಪತಿಯನ್ನು ತಾಲೂಕಿನ ರೆಡ್ಡಿ ಕ್ಯಾಂಪ್ ನಿವಾಸಿಗಳಾದ ಯತಿರಾಜ್ ನಾಯ್ಡು ಮತ್ತು ವಿಜಯಮ್ಮ ಎಂದು ತಿಳಿದುಬಂದಿದೆ. ಸರ್ಕಾರಿ ಆಸ್ಪತ್ರೆ ವೈದ್ಯರು, ಸಿಬ್ಬಂದಿಗಳು ಶಾಸಕರ ಮಾನವೀಯತೆ ಕಾರ್ಯಕ್ಕೆ ಸ್ಪಂದಿಸಿ ಸಕಾಲದಲ್ಲಿ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿದ್ದಾರೆ.
ಕೆಲವು ದಿನಗಳ ಹಿಂದೆ ಶಾಸಕ ಬಿ.ಕೆ ಸಂಗಮೇಶ್ವರ್ ಸಂಕಷ್ಟದಲ್ಲಿ ಬಳಲುತ್ತಿರುವ ಮಗುವೊಂದರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಸಹಾಯ ಹಸ್ತ ನೀಡುವ ಭರವಸೆ ನೀಡಿ ಗಮನ ಸೆಳೆದಿದ್ದರು.
No comments:
Post a Comment