ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ 'ಸಾರ್ಥಕ ಸಂಭ್ರಮ' ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯನವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ, ಫೆ. ೨೮: ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇರಯ್ಯನವರ ವೃತ್ತಿ ಬದುಕು ವಿಶಿಷ್ಟವಾಗಿದ್ದು, ಶಿಕ್ಷಣ ಇಲಾಖೆಗೆ ಇವರ ವೃತ್ತಿ ಬದುಕಿನ ಅನುಭವಗಳು ಪ್ರಸ್ತುತ ಅಗತ್ಯವಾಗಿವೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿದ್ದಬಸಪ್ಪ ಹೇಳಿದರು.
ಅವರು ತಾಲೂಕಿನ ಹೊಳೆಹೊನ್ನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ 'ಸಾರ್ಥಕ ಸಂಭ್ರಮ' ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣ ಕ್ಷೇತ್ರದ ಮಹತ್ವ ಎತ್ತಿ ಹಿಡಿಯುವ ಜೊತೆಗೆ ಶಿಕ್ಷಕರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುವ ಜೊತೆಗೆ ಆಡಳಿತದಲ್ಲಿ ಪ್ರಾಮಾಣಿಕತೆ, ದಕ್ಷತೆಯಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಕ್ಷೇತ್ರದಲ್ಲಿ ೩ ಬಾರಿ ಒಟ್ಟು ೬ ವರ್ಷ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿರುವುದು ತೃಪ್ತಿ ತಂದುಕೊಟ್ಟಿದೆ. ವೃತ್ತಿ ಬದುಕಿನಲ್ಲಿ ಸಲಹೆ, ಸಹಕಾರ ನೀಡಿದ ಇಲಾಖೆಯ ಎಲ್ಲಾ ಸಿಬ್ಬಂದಿಗಳಿಗೂ, ತಾಲೂಕಿನ ಶಿಕ್ಷಕ ವೃಂದದವರು, ಸಂಘ-ಸಂಸ್ಥೆಗಳಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ ಎಂದರು.
ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಯೂ. ಮಹದೇವಪ್ಪ, ಸಂಘದ ಅಧ್ಯಕ್ಷ ಪೃಥ್ವಿ, ಮಾಜಿ ಅಧ್ಯಕ್ಷ ಎಂ.ಎಸ್ ಬಸವರಾಜ್ ,ಸರ್ಕಾರಿ ನೌಕಾರರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಶಿಕ್ಷಕ ಸಂಘದ ನಿರ್ದೇಶಕರಾದ ಡಿ.ಎಸ್ ಬಸವಂತರಾವ್ ದಾಳೆ, ಮುಖ್ಯ ಶಿಕ್ಷಕರ ಸಂಘದ ಖಜಾಂಚಿ ಮೋಹಿದ್ದೀನ್, ಎಮ್ಮೆಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಟಿ. ರಾಮಕೃಷ್ಣ, ಎಸ್.ಪಿ ರಾಜು, ಮಾಯಮ್ಮ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿವಿಧ ಶಾಲೆಗಳ ಮುಖ್ಯ ಶಿಕ್ಷಕರುಗಳಾದ ಬಸವರಾಜಪ್ಪ, ಅನ್ನಪೂರ್ಣಮ್ಮ ಬಸವರಾಜ, ಚಂದ್ರಪ್ಪ, ಪಾರ್ವತಮ್ಮ, ಉಪೇಂದ್ರ, ರಾಧಮ್ಮ, ಮಂಗಳ, ಜಯಪ್ಪ, ದಯಾನಂದ, ಸಂತೋಷ್ ಕುಮಾರ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾ ಡಂಬಾಲ್ಕರ್ ಪ್ರಾರ್ಥಿಸಿದರು. ಮಾಲತೇಶ್ ನಿರೂಪಿಸಿದರು.
No comments:
Post a Comment