Tuesday, March 1, 2022

ಶಿಕ್ಷಕರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಎಂ.ಆರ್ ರೇವಣಪ್ಪ ಅವಿರೋಧ ಆಯ್ಕೆ

ಎಂ.ಆರ್ ರೇವಣಪ್ಪ
    ಭದ್ರಾವತಿ, ಮಾ. ೧: ಕರ್ನಾಟಕ ರಾಜ್ಯ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಗೃಹ ನಿರ್ಮಾಣ ಸಹಕಾರ ಸಂಘದ ನಿರ್ದೇಶಕ ಮಂಡಳಿ ಚುನಾವಣೆಗೆ ತಾಲೂಕಿನ ಸುಲ್ತಾನ್‌ಮಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ, ಅಂತರಾಷ್ಟ್ರೀಯ ಜಾನಪದ ಕಲಾವಿದ ಎಂ.ಆರ್ ರೇವಣಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 
ರೇವಣಪ್ಪರವರು ಮಹಾಬಲೇಶ್ವರ ಹೆಗಡೆ ತಂಡದಿಂದ ಸಂಘದ ನಿರ್ದೇಶಕ ಮಂಡಳಿಯ ೫ ವರ್ಷಗಳ ಅವಧಿಗೆ ಹಿಂದುಳಿದ ವರ್ಗ ‘ಎ’ ಮೀಸಲು ಸ್ಥಾನಕ್ಕೆ ಸ್ಪರ್ಧಿಸಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾಗಿರುವ ರೇವಣಪ್ಪರವರು ಶಾಲೆಯ ಅಭಿವೃದ್ಧಿಗೆ ಶಾಲಾಭಿವೃದ್ಧಿ ಸಮಿತಿ ಜೊತೆಗೆ ಕೈಜೋಡಿಸುವ ಜೊತೆಗೆ ವೈಯಕ್ತಿಕವಾಗಿ ಸಹ ತಮ್ಮದೇ ಆದೆ ಕೊಡುಗೆಯನ್ನು ಶಾಲೆಗೆ ನೀಡುವ ಮೂಲಕ ಗಮನ ಸೆಳೆದಿದ್ದಾರೆ. 
ಇದೀಗ ಶಿಕ್ಷಕರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಅವಿರೋಧವಾಗಿ ಅಯ್ಕೆಯಾಗಿದ್ದಾರೆ. ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು, ಕರ್ನಾಟಕ ರಾಜ್ಯ ತಾಲೂಕು ಸರ್ಕಾರಿ ನೌಕರರ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು, ಶಾಲಾಭಿವೃದ್ಧಿ ಸಮಿತಿ ಹಾಗು ಶಾಲೆಯ ಶಿಕ್ಷಕ ವೃಂದದವರು ಸೇರಿದಂತೆ ಇನ್ನಿತರರು ಇವರನ್ನು ಅಭಿನಂದಿಸಿದ್ದಾರೆ. 

No comments:

Post a Comment